‘ಹೃದಯ ಹೃದಯಗಳನ್ನು ಬೆಸೆಯೋಣ’ ಎಂಬ ಘೋಷಣೆಯೊಂದಿಗೆ ಎಸ್.ವೈ.ಎಸ್ ರಾಜ್ಯ ಸಮಿತಿಯು ಜುಲೈ 14,15,16 ದಿನಾಂಕಗಳಲ್ಲಿ ಕುಂದಾಪುರದಿಂದ ಸುಳ್ಯ ತನಕ ನಡೆಸುವ ‘ಸೌಹಾರ್ದ ಸಂಚಾರ’ದ ಕಲ್ಲಡ್ಕ ಕೇಂದ್ರದ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ದಾರುಲ್ ಅಶ್ಅರಿಯ್ಯಾ ಸುರಿಬೈಲಿನಲ್ಲಿ ನಡೆದ ಸಭೆಯಲ್ಲಿ
ಎಸ್.ವೈ.ಎಸ್ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಅಲಿ ಸಖಾಫಿ ಅಶ್ಅರಿಯ್ಯಾ ಅಧ್ಯಕ್ಷತೆ ವಹಿಸಿದ್ದರು. ದ.ಕ ವೆಸ್ಟ್ ಜಿಲ್ಲಾಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯ ಉದ್ಘಾಟಿಸಿದರು. ಎಸ್.ವೈ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ಅಬೂಬಕರ್ ಸಿದ್ದೀಕ್ ವಿಷಯ ಮಂಡಿಸಿ ಮಾತನಾಡಿದರು.
ಈ ಕೆಳಗಿನಂತೆ ಸ್ವಾಗತ ಸಮಿತಿ ರಚಿಸಲಾಯಿತು.
ಸಲಹೆಗಾರರು : ಶಿಹಾಬುದ್ದೀನ್ ತಂಙಳ್ ಮದಕ,
ಚಯರ್ಮ್ಯನ್ :ಝಕರಿಯ್ಯಾ ನಾರ್ಶ, ಜನರಲ್ ಕನ್ವೀನರ್ ಅಸ್ಲಂ ಹಾಜಿ ಸಂಪಿಲ, ಕೋಶಾಧಿಕಾರಿ ದಾವೂದ್ ಕಲ್ಲಡ್ಕ, ಕೋಆರ್ಡಿನೇಟರ್ ಕರೀಂ ಕದ್ಕಾರ್ ಹಾಗೂ ಇತರ ವೈಸ್ ಚಯರ್ಮ್ಯಾನ್ , ಕನ್ವೀನರ್ ಗಳನ್ನು ಹಾಗೂ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.
ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಜಿಲ್ಲಾ ಕೋಶಾಧಿಕಾರಿ ರಝಾಕ್ ಭಾರತ್, ಕಾರ್ಯದರ್ಶಿ ನವಾಝ್ ಸಖಾಫಿ ಅಡ್ಯಾರ್, ರಾಜ್ಯ ನಾಯಕರಾದ ಮುಸ್ತಫ ಕೋಡಪದವು,ಎಸ್ಸೆಸ್ಸೆಫ್ ದ.ಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೌಫಲ್ ಕಟ್ಟತ್ತಿಲ, ಕೆ.ಸಿ.ಎಫ್ ನಾಯಕರಾದ ಹಂಝ ಮೈಂದಾಲ, ಎಸ್.ವೈ.ಎಸ್ ಜಿಲ್ಲಾ ನಾಯಕರಾದ ಮಹ್ಮೂದ್ ಸಅದಿ ಕುಕ್ಕಾಜೆ, ರಶೀದ್ ಹಾಜಿ ವಗ್ಗ, ಇಸ್ಮಾಯಿಲ್ ಮಾಸ್ಟರ್ ಮಂಗಿಲಪದವು, ಮುತ್ತಲಿಬ್ ಹಾಜಿ ನಾರ್ಶ ಮೊದಲಾದವರು ಉಪಸ್ಥಿತರಿದ್ದರು.
ಎಸ್.ವೈ.ಎಸ್ ರಾಜ್ಯ ಉಪಾಧ್ಯಕ್ಷ ಖಲೀಲ್ ಮಾಲಿಕಿ ಬೋಳಂತೂರು ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು.


















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ