ಪುತ್ತೂರು : ಕರಾವಳಿ ಕರ್ನಾಟಕದಲ್ಲಿ ಕೋಮು ವೈಷಮ್ಯವು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೌಹಾರ್ದ ಸಂದೇಶಗಳನ್ನು ಹರಡುವ ಸಲುವಾಗಿ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ಹೃದಯ ಹೃದಯಗಳನ್ನು ಬೆಸೆಯೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಕರಾವಳಿಯ ನೆಲದಲ್ಲಿ ‘ಸೌಹಾರ್ದ ಸಂಚಾರ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಇದೇ ಬರುವ 2025 ಜುಲೈ 14, 15, 16 ದಿನಾಂಕಗಳಲ್ಲಿ ಕುಂದಾಪುರದಿಂದ ಸುಳ್ಯ ತನಕ ಸರ್ವ ಮತೀಯರೂ ಜೊತೆಗೂಡಿ ಸಾಗುವ ಈ ಸಂಚಾರವು ಇಸ್ಲಾಮಿನ ಸೌಹಾರ್ದ ಸಂದೇಶವನ್ನು ಸಮಾಜದ ಮುಂದೆ ತೆರೆದಿಡಲಿದೆ. ಕುಂದಾಪುರ, ಉಡುಪಿ, ಕಾರ್ಕಳ, ಕಾಪು, ಪಡುಬಿದ್ರಿ, ಮುಲ್ಕಿ, ಸುರತ್ಕಲ್, ಮಂಗಳೂರು, ಫರಂಗಿಪೇಟೆ, ಬಿ.ಸಿ.ರೋಡು, ಕಲ್ಲಡ್ಕ ಕೇಂದ್ರವಾಗಿ ಹಾದು ಜುಲೈ 16 ರಂದು ಬೆಳಿಗ್ಗೆ 9 ಕ್ಕೆ ದಕ್ಷಿಣ ಕನ್ನಡ ಈಸ್ಟ್ ಜಿಲ್ಲೆಯ ಪುತ್ತೂರು ಕೇಂದ್ರಕ್ಕೆ ಆಗಮಿಸಿ ಉಪ್ಪಿನಂಗಡಿ, ಕಡಬ ಮಾರ್ಗವಾಗಿ ಸುಳ್ಯ ಕೇಂದ್ರದಲ್ಲಿ ಸಮಾರೋಪಗೊಳ್ಳಲಿದೆ. ಪ್ರತೀ ಕೇಂದ್ರಗಳಲ್ಲೂ ಕಾಲ್ನಡಿಗೆ ಜಾಥಾ ಮತ್ತು ಸಭಾ ಕಾರ್ಯಕ್ರಮಗಳು ನಡೆಯಲಿವೆ.
ಆದುದರಿಂದ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸುನ್ನಿ ಸಂಘಟನೆಯ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ತಮಗೆ ಸಾಧ್ಯವಾಗುವ ಕೇಂದ್ರಗಳಿಗೆ ಆಗಮಿಸಿ ಸೌಹಾರ್ದ ಸಂಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ಕರೆ ನೀಡಿದೆ.
ವರದಿ : ಅಬೂಸೈಹಾನ್ ಪುತ್ತೂರು
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ