ಪುತ್ತೂರು : ಕರಾವಳಿ ಕರ್ನಾಟಕದಲ್ಲಿ ಕೋಮು ವೈಷಮ್ಯವು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೌಹಾರ್ದ ಸಂದೇಶಗಳನ್ನು ಹರಡುವ ಸಲುವಾಗಿ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ಹೃದಯ ಹೃದಯಗಳನ್ನು ಬೆಸೆಯೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಕರಾವಳಿಯ ನೆಲದಲ್ಲಿ ‘ಸೌಹಾರ್ದ ಸಂಚಾರ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಇದೇ ಬರುವ 2025 ಜುಲೈ 14, 15, 16 ದಿನಾಂಕಗಳಲ್ಲಿ ಕುಂದಾಪುರದಿಂದ ಸುಳ್ಯ ತನಕ ಸರ್ವ ಮತೀಯರೂ ಜೊತೆಗೂಡಿ ಸಾಗುವ ಈ ಸಂಚಾರವು ಇಸ್ಲಾಮಿನ ಸೌಹಾರ್ದ ಸಂದೇಶವನ್ನು ಸಮಾಜದ ಮುಂದೆ ತೆರೆದಿಡಲಿದೆ. ಕುಂದಾಪುರ, ಉಡುಪಿ, ಕಾರ್ಕಳ, ಕಾಪು, ಪಡುಬಿದ್ರಿ, ಮುಲ್ಕಿ, ಸುರತ್ಕಲ್, ಮಂಗಳೂರು, ಫರಂಗಿಪೇಟೆ, ಬಿ.ಸಿ.ರೋಡು, ಕಲ್ಲಡ್ಕ ಕೇಂದ್ರವಾಗಿ ಹಾದು ಜುಲೈ 16 ರಂದು ಬೆಳಿಗ್ಗೆ 9 ಕ್ಕೆ ದಕ್ಷಿಣ ಕನ್ನಡ ಈಸ್ಟ್ ಜಿಲ್ಲೆಯ ಪುತ್ತೂರು ಕೇಂದ್ರಕ್ಕೆ ಆಗಮಿಸಿ ಉಪ್ಪಿನಂಗಡಿ, ಕಡಬ ಮಾರ್ಗವಾಗಿ ಸುಳ್ಯ ಕೇಂದ್ರದಲ್ಲಿ ಸಮಾರೋಪಗೊಳ್ಳಲಿದೆ. ಪ್ರತೀ ಕೇಂದ್ರಗಳಲ್ಲೂ ಕಾಲ್ನಡಿಗೆ ಜಾಥಾ ಮತ್ತು ಸಭಾ ಕಾರ್ಯಕ್ರಮಗಳು ನಡೆಯಲಿವೆ.
ಆದುದರಿಂದ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸುನ್ನಿ ಸಂಘಟನೆಯ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ತಮಗೆ ಸಾಧ್ಯವಾಗುವ ಕೇಂದ್ರಗಳಿಗೆ ಆಗಮಿಸಿ ಸೌಹಾರ್ದ ಸಂಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ಕರೆ ನೀಡಿದೆ.
ವರದಿ : ಅಬೂಸೈಹಾನ್ ಪುತ್ತೂರು
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ