ಮಂಗಳೂರು : ಎಸ್.ವೈ.ಎಸ್ ರಾಜ್ಯ ಸಮಿತಿಯು ಹೃದಯ ಹೃದಯಗಳನ್ನು ಬೆಸೆಯೋಣ ಎಂಬ ಘೋಷಣೆಯೊಂದಿಗೆ ಜುಲೈ 14,15,16 ದಿನಾಂಕಗಳಲ್ಲಿ ಕುಂದಾಪುರದಿಂದ ಸುಳ್ಯ ತನಕ ನಡೆಯುವ ಸೌಹಾರ್ದ ಸಂಚಾರವು ದ.ಕ ವೆಸ್ಟ್ ಜಿಲ್ಲೆಯಲ್ಲಿ ಜುಲೈ 15 ಮಂಗಳವಾರ ನಡೆಯಲಿದೆ.
ಬೆಳಿಗ್ಗೆ 7:30 ಕ್ಕೆ ಕನ್ನಂಗಾರ್ ದರ್ಗಾ ಝಿಯಾರತ್ ನೊಂದಿಗೆ ಆರಂಭವಾಗುವ ಎರಡನೇ ದಿನದ ಸೌಹಾರ್ದ ಸಂಚಾರವು ಬೆಳಿಗ್ಗೆ 8:00 ಗಂಟೆಗೆ ಬಪ್ಪನಾಡುನಿಂದ ಸೌಹಾರ್ದ ಕಾಲ್ನಡಿಗೆ ಜಾಥಾವು ಮುಲ್ಲಿ ತನಕ ಬಂದು,ಮುಲ್ಕಿಯಲ್ಲಿ ಸಂದೇಶ ಭಾಷಣ ನಡೆಯಲಿದೆ.
ಬೆಳಿಗ್ಗೆ 9:00 ಗಂಟೆಗೆ ಗೋವಿಂದದಾಸ್ ಕಾಲೇಜು ಕಡೆಯಿಂದ ಸುರತ್ಕಲ್ ಜಂಕ್ಷನ್ ತನಕ ಸೌಹಾರ್ದ ಕಾಲ್ನಡಿಗೆ ಜಾಥಾವು ಬಂದು,ಸುರತ್ಕಲ್ ಜಂಕ್ಷನ್ ನಲ್ಲಿ ಸಂದೇಶ ಭಾಷಣ ನಡೆಯಲಿದೆ.
ಬೆಳಿಗ್ಗೆ 11:00 ಗಂಟೆಗೆ ಬಾವುಟಗುಡ್ಡೆಯಿಂದ ಕ್ಲಾಕ್ ಟವರ್ ತನಕ ಸೌಹಾರ್ದ ಕಾಲ್ನಡಿಗೆ ಜಾಥಾವು ಬಂದು, ಕ್ಲಾಕ್ ಟವರ್ ನಲ್ಲಿ ಸಂದೇಶ ಭಾಷಣ ನಡೆಯಲಿದೆ.
ಮದ್ಯಾಹ್ನ 2:00 ಗಂಟೆಗೆ ಅರ್ಕುಳದಿಂದ ಪರಂಗಿಪೇಟೆ ತನಕ ಸೌಹಾರ್ದ ಸಂಚಾರ ಜಾಥಾವು ಬಂದು, ಪರಂಗಿಪೇಟೆ ಜಂಕ್ಷನ್ ನಲ್ಲಿ ಸಂದೇಶ ಬಾಷಣ ನಡೆಯಲಿದೆ.
ಸಂಜೆ 4:00 ಗಂಟೆಗೆ ಕೈಕಂಬದಿಂದ ಬಿಸಿರೋಡ್ ತಾಲೂಕು ಕಛೇರಿ ತನಕ ಸೌಹಾರ್ದ ಕಾಲ್ನಡಿಗೆ ಜಾಥಾವು ಬಂದು, ತಾಲೂಕು ಕಛೇರಿ ಮುಂಭಾಗದಲ್ಲಿ ಸಂದೇಶ ಭಾಷಣ ನಡೆಯಲಿದೆ.
ಸಂಜೆ 5:00 ಗಂಟೆಗೆ ಕಲ್ಲಡ್ಕ ಕೆಸಿರೋಡ್ ನಿಂದ ಕಲ್ಲಡ್ಕ ಜಂಕ್ಷನ್ ತನಕ ಸೌಹಾರ್ದ ಕಾಲ್ನಡಿಗೆ ಜಾಥಾವು ಬಂದು ಕಲ್ಲಡ್ಕ ಜಂಕ್ಷನ್ ನಲ್ಲಿ ಸಂದೇಶ ಭಾಷಣ ನಡೆಯಲಿದೆ.
ಈ ಸೌಹಾರ್ದ ಸಂಚಾರದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು,ಕ್ರೈಸ್ತ ಧರ್ಮ ಗುರುಗಳು,ಮುಸ್ಲಿಂ ಧಾರ್ಮಿಕ ನಾಯಕರು,ಹಿಂದು,ಮುಸ್ಲಿಂ,ಕ್ರೈಸ್ತ ಬಾಂಧವರು,ಸಾಮಾಜಿಕ,ಶೈಕ್ಷಣಿಕ ನಾಯಕರು,ಸೌಹಾರ್ದತೆಯ ಸಂದೇಶವನ್ನು ಸಾರುತ್ತಾ ಸ್ನೇಹದ,ಪ್ರೀತಿಯ,ಸಹಬಾಳ್ವೆಯ ದಿಟ್ಟ ಹೆಜ್ಜೆಗಳನ್ನು ಇಟ್ಟು ಮಾನವೀಯತೆಯ ಸಂದೇಶವನ್ನು ಮನುಕುಲಕ್ಕೆ ನೀಡಲಿದ್ದಾರೆ ಎಂದು ಎಸ್.ವೈ.ಎಸ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ