ನವದೆಹಲಿ | ಯೆಮೆನ್ ಪ್ರಜೆಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾರ ಗಲ್ಲು ಶಿಕ್ಷೆಯನ್ನು ಯೆಮೆನ್ ನಲ್ಲಿ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಕೇಂದ್ರ ಸರಕಾರ ಶುಕ್ರವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಕೇಂದ್ರ ಸರಕಾರದ ಪರ ನ್ಯಾಯಾಲಯದಲ್ಲಿ ಹಾಜರಿದ್ದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ, “ಈ ವಿಷಯದ ಕುರಿತು ಸರಕಾರದ ಪ್ರಯತ್ನಗಳು ಮುಂದುವರಿದಿವೆ” ಎಂದು ನ್ಯಾ ವಿಕ್ರಮ್ ನಾಥ್ ಹಾಗೂ ನ್ಯಾ. ಸಂದೀಪ್ ಮೆಹ್ರಾರನ್ನೊಳಗೊಂಡಿದ್ದ ನ್ಯಾಯಪೀಠಕ್ಕೆ ತಿಳಿಸಿದರು. ಸರಕಾರ ನಿಮಿಷಾ ಪ್ರಿಯಾ ಸುರಕ್ಷಿತವಾಗಿ ದೇಶಕ್ಕೆ ಮರಳುವುದನ್ನು ಬಯಸುತ್ತಿದೆ ಎಂದು ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಆದರೆ, ಈ ಸಂಬಂಧ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಆವರ ಮಧ್ಯಸ್ಥಿಕೆ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ.
ಏತನ್ಮಧ್ಯೆ, ಆಕ್ಷನ್ ಸಮಿತಿ ಪರವಾಗಿ ನ್ಯಾಯಾಲಯದಲ್ಲಿ ಹಾಜರಿದ್ದ ವಕೀಲರು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಅವರ ಮಧ್ಯಸ್ಥಿಕೆ ಬಗ್ಗೆ ಸುಪ್ರೀಂಕೋರ್ಟ್ ನ ಗಮನಕ್ಕೆ ತಂದರು. ಅರ್ಜಿದಾರರ ವಕೀಲರಾದ ರಾಗೇಂಡ್ ಬಸಂತ್ ಮತ್ತು ಕೆ.ಆರ್. ಸುಭಾಷ್ ಚಂದ್ರನ್ ಅವರು ಸುಪ್ರೀಂ ಕೋರ್ಟ್ಗೆ ಮುಸ್ಲಿಂ ವಿದ್ವಾಂಸರ ಹಸ್ತಕ್ಷೇಪದ ನಂತರ ಜುಲೈ 16 ರಂದು ನಿಗದಿಯಾಗಿದ್ದ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.
ಈ ವಿಷಯದಲ್ಲಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರು ಭಾಗಿಯಾಗಿರುವ ಬಗ್ಗೆ ತನಗೆ ತಿಳಿದಿಲ್ಲ ಎಂದು ವಿದೇಶಾಂಗ ಸಚಿವಾಲಯ ನಿನ್ನೆ ಹೇಳಿತ್ತು. ಈ ವಾದವನ್ನು ತಿರಸ್ಕರಿಸಿದ ನಿಮಿಷಪ್ರಿಯ ಅಂತಾರಾಷ್ಟ್ರೀಯ ಆಕ್ಷನ್ ಸಮಿತಿ ಕಾಂತಪುರಂ ಅವರ ಹಸ್ತಕ್ಷೇಪವನ್ನು ನ್ಯಾಯಾಲದ ಗಮನಕ್ಕೆ ತಂದಿದೆ. ಇದನ್ನು ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ನಿರಾಕರಿಸಿಲ್ಲ. ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ನಿಮಿಷಪ್ರಿಯಾ ಸುರಕ್ಷಿತವಾಗಿ ಹೊರಬರಬೇಕೆಂಬುದು ನಮ್ಮ ಆಶಯ ಎಂದು ಹೇಳಿದರು. ಎಲ್ಲರೂ ಬಯಸುವುದಕ್ಕೆ ವಿರುದ್ಧವಾಗಿ ಏನೂ ಸಂಭವಿಸಬಾರದು ಎಂದು ಅವರು ಹೇಳಿದರು.
ಕೇಂದ್ರ ಸರ್ಕಾರದ ಎಲ್ಲಾ ಪ್ರಯತ್ನಗಳಿಗೆ ಕೃತಜ್ಞರಾಗಿರುತ್ತೇವೆ ಮತ್ತು ಪ್ರತಿನಿಧಿಗಳು ಹೆಚ್ಚಿನ ಚರ್ಚೆಗಾಗಿ ಯೆಮೆನ್ಗೆ ಹೋಗಲು ಅವಕಾಶ ನೀಡಬೇಕು ಎಂದು ರಾಗೇಂಡ್ ಬಸಂತ್ ವಾದಿಸಿದರು. ಆಕ್ಷನ್ ಕೌನ್ಸಿಲ್ನ ಕೋರಿಕೆಗೆ ಸ್ಪಂದಿಸಿ,ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ರಾ ಅವರ ಪೀಠವು ಈ ನಿಟ್ಟಿನಲ್ಲಿ ಅನುಮತಿಗಾಗಿ ಕೇಂದ್ರಕ್ಕೆ ಅರ್ಜಿ ಸಲ್ಲಿಸುವಂತೆ ಮತ್ತು ಅದನ್ನು ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.
ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ಆಗಸ್ಟ್ 14ಕ್ಕೆ ಮುಂದೂಡಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ