ಮಸ್ಕತ್ : ಕೆ.ಸಿ.ಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ವತಿಯಿಂದ ಪ್ರವಾದಿ ಮುಹಮ್ಮದ್ ﷺ ರವರ 1500ನೇ ಜನ್ಮದಿನಾಚರಣೆಯ ಪ್ರಯುಕ್ತ, 2025ರ ಸೆಪ್ಟೆಂಬರ್ 19ರಂದು (ಶುಕ್ರವಾರ) ಗೊಲ್ಡನ್ ತುಲಿಪ್ ರುವಿ ಸಭಾಂಗಣದಲ್ಲಿ ನಡೆಯಲಿರುವ “ಪ್ರವಾದಿ ﷺ ಕಾಲಾತೀತ ಮಾರ್ಗದರ್ಶಿ” ಎಂಬ ಶೀರ್ಷಿಕೆಯ ಬೃಹತ್ ಮಿಲಾದ್ ಸಮಾವೇಶದ ಸ್ವಾಗತ ಸಮಿತಿಯನ್ನು ರಚಿಸಲಾಯಿತು.
ಇತ್ತೀಚೆಗೆ ಸೀಬ್ ಮದರಸ ಸಭಾಂಗಣದಲ್ಲಿ ನಡೆದ ಸ್ವಾಗತ ಸಮಿತಿ ರಚನಾ ಸಭೆಯು ಕೆ.ಸಿ.ಎಫ್ ಒಮಾನ್ ಅಧ್ಯಕ್ಷ ಹಂಝ ಹಾಜಿ ಕನ್ನಂಗಾರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಗೆ ಕೆ.ಸಿ.ಎಫ್ ಒಮಾನ್ ಶಿಕ್ಷಣ ವಿಭಾಗದ ಅಧ್ಯಕ್ಷ ಉಬೈದುಲ್ಲಾ ಸಖಾಫಿ ಮಿತ್ತೂರು ದುಆದೊಂದಿಗೆ ಚಾಲನೆ ನೀಡಿದರು. ಬಳಿಕ, ಕೆ.ಸಿ.ಎಫ್ ಅಂತರಾಷ್ಟ್ರೀಯ ಸಮಿತಿಯ ಇಹ್ಸಾನ್ ವಿಭಾಗದ ಚೆಯರ್ಮನ್ ಅಯ್ಯೂಬ್ ಕೋಡಿ ಸಭೆಯನ್ನು ಉದ್ಘಾಟಿಸಿದರು.
ಈ ಬೃಹತ್ ಸಮಾವೇಶದ ಸ್ವಾಗತ ಸಮಿತಿಗೆ ಕೆಳಕಂಡವರನ್ನು ನೇಮಕ ಮಾಡಲಾಯಿತು:
• ಚೆಯರ್ಮನ್: ಆಬಿದ್ ಪಾಶ ಬಾಳೆಹೊನ್ನೂರ್ (ಒವೈಸ್ ಇಂಟರ್ನ್ಯಾಶನಲ್)
ವರ್ಕಿಂಗ್ ಚೇರ್ಮನ್: ಅಯ್ಯೂಬ್ ಕೋಡಿ
• ಜನರಲ್ ಕನ್ವೀನರ್: ಸಯ್ಯದ್ ಆಬಿದ್ ತಂಙಲ್ ಎಮ್ಮೆಮಾಡು
• ಫಿನಾನ್ಸಿಯಲ್ ಕಂಟ್ರೋಲರ್: ಹಸೀಫ್ ಇಕ್ಬಾಲ್ ಕಂದಾವರ
• ಸಹ ಕನ್ವೀನರ್ಗಳು: ಹನೀಫ್ ಮನ್ನಾಪು, ಲತೀಫ್ ಮಂಜೇಶ್ವರ
• ಫೈನಾನ್ಸಿಯಲ್ ಕನ್ವೀನರ್ಗಳು: ಉಮರ್ ಸಖಾಫಿ ಎಡಪ್ಪಾಲ, ಆರಿಫ್ ಕೋಡಿ ಮತ್ತು 101 ಸದಸ್ಯರನ್ನೊಳಗೊಂಡ ಸ್ವಾಗತ ಸಮಿತಿಯನ್ನು ರಚಿಸಲಾಯಿತು.
ಸಭೆಯಲ್ಲಿ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಸಂಶುದ್ದೀನ್ ಪಾಲೆತಡ್ಕ, ಅಂತರಾಷ್ಟ್ರೀಯ ಸಮಿತಿ ಸದಸ್ಯರಾದ ಇಬ್ರಾಹಿಂ ಹಾಜಿ ಅತ್ರಾಡಿ, ರಾಷ್ಟ್ರೀಯ ಸಮಿತಿ ನಾಯಕರಾದ ಸ್ವಾದಿಕ್ ಹಾಜಿ ಸುಳ್ಯ, ಝುಬೈರ್ ಸಅದಿ, ಹಾರಿಸ್ ಕೊಳಕೇರಿ, ಆದಂ ಮದನಿ, ಹುಸೈನ್ ತೀರ್ಥಹಳ್ಳಿ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.
ಸ್ವಾಗತ ಸಮಿತಿ ಕನ್ವೀನರ್ ಲತೀಫ್ ಮಂಜೇಶ್ವರ ಸ್ವಾಗತಿಸಿ, ಕೊನೆಯಲ್ಲಿ ಧನ್ಯವಾದ ಹೇಳಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ