ದೇವನ ಆರಾಧನೆಯಿಂದ ಸ್ವರ್ಗ ಲಭ್ಯವಾದರೆ ದೇವನ ಸೃಷ್ಟಿಗಳಿಗೆ ಸೇವೆ ಸಲ್ಲಿಸುವುದರಿಂದ ಸೃಷ್ಟಿಕರ್ತನ ಸಂತೃಪ್ತಿಯನ್ನು ಪಡೆಯಲು ಸಾಧ್ಯ ಎಂದು ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್ ಹೇಳಿದರು. ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘದ ಸಾಂತ್ವನ – ಸಮಾಜ ಸೇವಾ ಸನ್ನದ್ಧ ತಂಡ ‘ಇಸಾಬಾ’ದ ತರಬೇತಿ ಶಿಬಿರದಲ್ಲಿ ಅವರು ಉಪನ್ಯಾಸ ನೀಡಿದರು.



ಬಾವುಟ ಗುಡ್ಡೆ ಎಸ್ವೈಎಸ್ ಕಚೇರಿಯಲ್ಲಿ ನಡೆದ ಶಿಬಿರವನ್ನು ರಾಜ್ಯ ಉಪಾಧ್ಯಕ್ಷರಾದ ಇಬ್ರಾಹೀಂ ಖಲೀಲ್ ಮಾಲಿಕಿ ಅಧ್ಯಕ್ಷತೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ಅಬೂಬಕರ್ ಸಿದ್ದೀಕ್ ಉದ್ಘಾಟಿಸಿದರು.
ಖ್ಯಾತ ವಾಗ್ಮಿ ಅನಸ್ ಸಿದ್ದೀಖಿ ಬೆಂಗಳೂರು ತರಬೇತಿ ನೀಡಿದರು. ಕರೀಂ ಕದ್ಕಾರ್, ಯಾಕೂಬ್ ಸಅದಿ ನಾವೂರು ಮಾತನಾಡಿದರು.
ಕೋಶಾಧಿಕಾರಿ ಮನ್ಸೂರ್ ಅಲೀ ಶಿವಮೊಗ್ಗ, ನಾಯಕರಾದ ಇಬ್ರಾಹಿಂ ಸಖಾಫಿ ಪಯೋಟ,
ಅಹ್ಮದ್ ಮದನಿ ಮಡಿಕೇರಿ, ಮಹ್ಬೂಬ್ ಸಖಾಫಿ, ಅಬ್ದುಲ್ ರಹ್ಮಾನ್ ಹಾಜಿ ಪ್ರಿಂಟೆಕ್, ಇಸ್ಮಾಈಲ್ ಮಾಸ್ಟರ್ ಮರಿಕ್ಕಳ, ಶಾಫಿ ಸಅದಿ ಸೋಮವಾರಪೇಟೆ, ಅಬ್ದುರ್ರಹ್ಮಾನ್ ಹಾನಬಾಳ್ ಹಾಸನ, ರಿಯಾಝ್ ಕೋಡಿ ಕುಂದಾಪುರ, ಹುಸೈನ್ ಮುಸ್ಲಿಯಾರ್ ಬಾಳೆಹೊನ್ನೂರು ಮತ್ತಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?