ಕೋಝಿಕ್ಕೋಡ್ | ನಿಮಿಷಪ್ರಿಯ ಅವರ ಮರಣದಂಡನೆಯನ್ನು ರದ್ದುಗೊಳಿಸಲು ಒಪ್ಪಿಗೆ ಲಭಿಸಿರುವುದಾಗಿ ಭಾರತೀಯ ಗ್ರಾಂಡ್ ಮುಫ್ತಿ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಅವರ ಕಚೇರಿ ಪ್ರಕಟಿಸಿದೆ. ಪ್ರಕರಣದಲ್ಲಿ ಕೆಲವು ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕಾಂತಪುರಂ ಉಸ್ತಾದ್ ಸ್ಪಷ್ಟಪಡಿಸಿದ್ದಾರೆ. ಮುಂದಿನ ಚರ್ಚೆಗಳ ಆಧಾರದ ಮೇಲೆ ಮರಣದಂಡನೆಯನ್ನು ರದ್ದುಗೊಳಿಸಲು ಮತ್ತು ಇತರ ವಿಷಯಗಳ ಬಗ್ಗೆ ನಿರ್ಧರಿಸಲು ಒಪ್ಪಿಗೆ ನೀಡಲಾಗಿದೆ.ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು.
ಭಾರತೀಯ ಗ್ರಾಂಡ್ ಮುಫ್ತಿಯ ಕೋರಿಕೆಯ ಮೇರೆಗೆ ಶೈಖ್ ಉಮರ್ ಬಿನ್ ಹಫೀಝ್ ತಂಙಳ್ ನೇಮಿಸಿದ ಯೆಮೆನ್ ವಿದ್ವಾಂಸರ ನಿಯೋಗದ ಜೊತೆಗೆ, ಉತ್ತರ ಯೆಮೆನ್ ಆಡಳಿತಗಾರರು ಮತ್ತು ಅಂತರರಾಷ್ಟ್ರೀಯ ರಾಜತಾಂತ್ರಿಕರು ಭಾಗವಹಿಸಿದ್ದ ಮಧ್ಯಸ್ಥಿಕೆ ಮಾತುಕತೆಯ ಸಂದರ್ಭದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮೃತ ತಲಾಲ್ ಅವರ ಕುಟುಂಬದೊಂದಿಗೆ ಹೆಚ್ಚಿನ ಚರ್ಚೆಗಳ ನಂತರ ಇತರ ವಿಷಯಗಳನ್ನು ನಿರ್ಧರಿಸಲಾಗುತ್ತದೆ. ಜುಲೈ 16 ರಂದು ನಿಗದಿಯಾಗಿದ್ದ ಮರಣದಂಡನೆಯನ್ನು ಕಾಂತಪುರಂ ಅವರ ಮಧ್ಯಪ್ರವೇಶ ನಂತರ ತಾತ್ಕಾಲಿಕವಾಗಿ ಮುಂದೂಡಲಾಗಿತ್ತು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ