ದುಬೈ: ಕೆಸಿಎಫ್ ದುಬೈ ಸೌತ್ ಝೋನ್ ಪ್ರತಿ ವರ್ಷ ನಡೆಸುತ್ತಿರುವ ಗ್ರಾಂಡ್ ಮೀಲಾದ್ ಕಾನ್ಫರೆನ್ಸ್ ನ 2025 ನೇ ಸಾಲಿನ ಕಾರ್ಯಕ್ರಮದ ಸ್ವಾಗತ ಸಮಿತಿಯ ರಚನೆಯು ದುಬೈ ಬಿಸಿನೆಸ್ ಬೇ ಯಲ್ಲಿರುವ ಬೇ ಬೈಟ್ಸ್ ಹೋಟೇಲಿನಲ್ಲಿ ಆಗಸ್ಟ್ .3 ಭಾನುವಾರದಂದು ನಡೆಯಿತು.
ಸಭೆಯನ್ನುಧ್ಧೇಶಿಸಿ ಮಾತನಾಡಿದ ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಇಬ್ರಾಹಿಂ ಸಖಾಫಿಯವರು ಪ್ರವಾದಿ (ಸ.ಅ) ರವರ 1500 ನೇ ಜನ್ಮ ದಿನಾಚರಣೆಯನ್ನು ದುಬೈ ಸೌತ್ ಝೋನ್ ಈ ಬಾರಿ ವಿಜೃಂಭಣೆಯಿಂದ ಆಚರಿಸಲಿದೆ. ಪ್ರವಾದಿ ಕೀರ್ತನೆಗಳು ಮತ್ತು ಮದ್ಹ್ ಪ್ರಭಾಷಣಗಳನ್ನೊಳಗೊಂಡ ಪ್ರಸ್ತುತ ಗ್ರಾಂಡ್ ಮಿಲಾದ್ ಕಾನ್ಫರೆನ್ಸ್-2025, ಸೆಪ್ಟೆಂಬರ್ 21 ಭಾನುವಾರ, ದುಬೈ ಊದ್ ಮೇತ ಪಾಕಿಸ್ತಾನ್ ಅಸೋಸಿಯೇಷನ್ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಯಶಸ್ವಿಗಾಗಿ ಎಲ್ಲರೂ ಕೈಜೊಡಿಸಬೇಕೆಂದು ಕರೆ ನೀಡಿದರು.
ಸ್ವಾಗತ ಸಮಿತಿಯ ಚೇರ್ಮ್ಯಾನ್ ಆಗಿ ಇಕ್ಬಾಲ್ ಸಿಧ್ಧಕಟ್ಟೆ, ವರ್ಕಿಂಗ್ ಚೇರ್ಮ್ಯಾನ್ ನಝೀರ್ ಹಾಜಿ ಕೆಮ್ಮಾರ, ಕನ್ವೀನರ್ ರಜಬ್ ಉಚ್ಚಿಲ, ವರ್ಕಿಂಗ್ ಕನ್ವೀನರ್ ಆಸಿಫ್ ಇಂದ್ರಾಜೆ, ಫಿನಾನ್ಶ್ಯಲ್ ಚೇರ್ಮ್ಯಾನ್ ಇಲ್ಯಾಸ್ ಮೂಳೂರು, ಫಿನಾನ್ಸ್ ಕನ್ವೀನರ್ ರವೂಫ್ ಸಾಗರ, ಅಶ್ಫಾಕ್ ಕೊಡಗು ಹಾಗೂ ಖಾದರ್ ಕಯ್ಯೂರು ಸೇರದಂತೆ ವಿವಿಧ ಸಮಿತಿಗಳಿಗೆ ಪದಾಧಿಕಾರಿಗಳನ್ನು ನೇಮಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಕೆಸಿಎಫ್ ದುಬೈ ಸೌತ್ ಝೊನ್ ಅಧ್ಯಕ್ಷ ಇಲ್ಯಾಸ್ ಮದನಿ ಬರ್ಷಾ ವಹಿಸಿದರು. ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಶಿಕ್ಷಣ ವಿಭಾಗದ ಅಧ್ಯಕ್ಷ ಶಾಹುಲ್ ಹಮೀದ್ ಸಖಾಫಿ ಉಧ್ಘಾಟಿಸಿದರು. ಸಭೆಯಲ್ಲಿ ಮುಖ್ಯ ಅತಿಥಿಗಾಳಾಗಿ ಕೆಸಿಎಫ್ ಸಂಘಟನಾ ನಾಯಕರು ಗಳಾದ ರಜಬ್ ಉಚ್ಚಿಲ, ಹಮೀದ್ ಹಾಜಿ ಸ್ಟಾರ್ ಲಿಂಕ್, ಇಲ್ಯಾಸ್ ಮೂಳೂರು, ರವೂಫ್ ಸಾಗರ, ನವಾಝ್ ಹಾಜಿ ಕೋಟೆಕಾರ್, ನಝೀರ್ ಹಾಜಿ, ಇಕ್ಬಾಲ್ ಹಾಜಿ ಸಿಧ್ಧಕಟ್ಟೆ ಸೇರಿದಂತೆ, ಝೋನ್, ಸೆಕ್ಟರ್ ಹಾಗೂ ಶಾಖೆಯ ನಾಯಕರು ಭಾಗವಹಿಸಿದ್ದರು.
ಝೋನ್ ಕಾರ್ಯದರ್ಶಿ ಮನ್ಸೂರ್ ಹರೇಕಳ ಸ್ವಾಗತಿಸಿದರು, ರಫೀಕ್ ಕಲ್ಲಡ್ಕ ವಂದಿಸಿದರು. ಅಝೀಝ್ ಅಹ್ಸನಿ ಕಾರ್ಯಕ್ರಮವನ್ನು ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)