ಮಂಗಳೂರು: ಬೆಳ್ತಂಗಡಿ ತಾಲೂಕಿನ ನಾವೂರು ಹಿರಿಯ ಪ್ರಾಥಮಿಕ ಶಾಲೆಯ 1985 ನೇ ವರ್ಷದ ಏಳನೇ ತರಗತಿಯ ವಿದ್ಯಾರ್ಥಿಗಳ ಮರು ಸಂಗಮ “ರಿಯೂನಿಯನ್-25” ಕಳೆದ ಆಗಸ್ಟ್ ರಂದು ನಡೆಯಿತು. ಮಂಗಳೂರು ಪಂಪ್ ವೆಲ್ ನಲ್ಲಿರುವ, ಕುಡ್ಲ ಹಿಲ್ಸ್ ನ “ದಾಹ್ ಮಾನ್ಶನ್” ಸಭಾಂಗಣ, 40 ವರ್ಷಗಳ ಬಳಿಕದ ಈ ಅಪೂರ್ವ ಸಂಗಮಕ್ಕೆ ಸಾಕ್ಷಿಯಾಯಿತು.
ದೇಶ ವಿದೇಶದ ಬೇರೆ ಬೇರೆ ಕಡೆ ಇದ್ದ ಸಹಪಾಠಿಗಳು ಭಾಗವಹಿಸಿ ಬಾಲ್ಯದ ಶಾಲಾ ದಿನಗಳ ರಸ ನಿಮಿಷಗಳನ್ನು ಮೆಲುಕು ಹಾಕುವ ಮೂಲಕ ಹಾಗೂ ತಮ್ಮ ಅಧ್ಯಾಪಕರನ್ನು ಗೌರವದಿಂದ ಸ್ಮರಿಸುವ ಮೂಲಕ ಈ ದಿನವನ್ನು ಸ್ಮರಣೀಯಗೊಳಿಸಿದರು. ಹಲವು ವರ್ಷಗಳ ನಂತರ ಬಾಲ್ಯದ ಸ್ನೇಹಿತರು ಪರಸ್ಪರ ಭೇಟಿಯಾಗಿ ಭಾವುಕಗೊಳ್ಳುವ ರೋಮಾಂಚನ ಕ್ಷಣಕ್ಕೆ ಈ ಸಂಗಮ ಸಾಕ್ಷಿಯಾಯಿತು. ಸಹಪಾಠಿ ಮಿತ್ರ ಅಬ್ದುಲ್ ರಝಾಕ್ (ಇಂಜಿನಿಯರ್ ದುಬೈ) ಈ ಸಂಗಮವನ್ನು ಆಯೋಜಿಸಿ ಸಹಪಾಠಿಗಳನ್ನು ಆಹ್ವಾನಿಸಿದ್ದರು. ಇವರ ಆಹ್ವಾನವನ್ನು ಗೌರವಿಸಿ ಊರಿನಲ್ಲಿರುವ ಹಾಗೂ ಬೆಂಗಳೂರು, ಗೋವಾ, ದುಬೈ ಹಾಗೂ ಕುವೈಟ್ ನಲ್ಲಿ ನೆಲೆಸಿರುವ ಗೆಳೆಯರೂ ಬಿಡುವು ಮಾಡಿಕೊಂಡು ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ವಿಶೇಷ ಆಹ್ವಾನಿತರಾಗಿದ್ದ, ಖ್ಯಾತ ಮೋಟಿವೇಷನಲ್ ಸ್ಪೀಕರ್ ಹಾಗೂ ಕೌನ್ಸಿಲಿಂಗ್ ತಜ್ಞ ರಫೀಕ್ ಮಾಸ್ಟರ್ ರವರು ತಮ್ಮ ಚಿಂತನೀಯ ಹಾಗೂ ಸ್ಫೂರ್ತಿಯುತ ಮಾತುಗಳ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಸಹಪಾಠಿ ಮಿತ್ರರು ಹಾಡು ಹಾಗೂ ಮಾತಿನ ಮೂಲಕ ನೆರೆದವರನ್ನು ರಂಜಿಸಿದರು. ಕಾರ್ಯಕ್ರಮದ ಆಯೋಜಕರಾದ ಇಂಜಿನಿಯರ್ ಅಬ್ದುಲ್ ರಝಾಕ್ ವಿವಿಧ ಪಾನೀಯ ಹಾಗೂ ಭಕ್ಷ್ಯ ಪದಾರ್ಥಗಳ ಭರ್ಜರಿ ಔತಣಕೂಟವನ್ನೂ ಏರ್ಪಡಿಸಿದ್ದರಲ್ಲದೆ, ಆಗತರಿಗೆಲ್ಲ ವಿಶೇಷ ಉಡುಗೊರೆಯನ್ನೂ ಕೊಟ್ಟು ಕೌತುಕಗೊಳಿಸಿದರು.
ಕೆಲವು ಸಹಪಾಠಿಗಳು ಕುಟುಂಬ ಸಹಿತವಾಗಿ ಆಗಮಿಸಿದ್ದು ವಿಶೇಷವಾಗಿತ್ತು. ಈ ತಂಡದ ವತಿಯಿಂದ ಕಲಿತ ಶಾಲೆಗೆ ಏನಾದರೊಂದು ಕೊಡುಗೆ ನೀಡುವ ಬಗ್ಗೆಯೂ ಚರ್ಚಿಸಲಾಯಿತು. ಅಬ್ದುಲ್ ರಝಾಕ್ ನಾವೂರು ಸ್ವಾಗತಿಸಿದರು. ಫಾ. ವಿನ್ಸೆಂಟ್ (ಸಿ.ಒ.ಡಿ.ಪಿ. ಮಂಗಳೂರು), ವರ್ಗೀಸ್ ಪಿ (ಪೊಲೀಸ್ ಅಧಿಕಾರಿ-ಇಂಟಲಿಜೆನ್ಸ್ ವಿಭಾಗ), ಪೊಲಿಕಾರ್ಪ್ ಡಿಸೋಜ( ಉದ್ಯಮಿ, ಬೆಂಗಳೂರು), ಮುಹಮ್ಮದ್ ನೂರುದ್ದೀನ್ ( ಕುವೈಟ್), ವಿಜಯ ಲೋಬೋ, ವಿಶ್ವನಾಥ, ಡೀಕಯ್ಯ, ರಾಜೇಂದ್ರ, ಕೇಶವ, ಉಮಾವತಿ, ದೀಪಿಕ, ಜೆಸಿಂತ, ವಿನ್ನಿ, ಸೇವರಿನ್, ಜೋಹರಾ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಆಯೋಜನೆಗಾಗಿ ಇಂಜಿನಿಯರ್ ಅಬ್ದುಲ್ ರಝಾಕ್ ರವರನ್ನು ಹಾಗೂ ಸಹಪಾಠಿಗಳ ವಾಟ್ಸಾಪ್ ಗ್ರೂಪ್ ರಚನೆ ಮತ್ತು ಸಂಯೋಜನೆಗಾಗಿ ಜೊಹರಾ ರವರನ್ನು ಸನ್ಮಾನಿಸಲಾಯಿತು. ಹಮೀದ್ ಎನ್ಎಸ್ ಕಾರ್ಯಕ್ರಮ ನಡೆಸಿಕೊಟ್ಟರು. ಫಾ. ವಿನ್ಸೆಂಟ್ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ