ನವದೆಹಲಿ | ಉತ್ತರ ಪ್ರದೇಶದ ಫತ್ಹೇಪುರದಲ್ಲಿ ಶತಮಾನಗಳಷ್ಟು ಹಳೆಯದಾದ ಸಮಾಧಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 10 ಬಿಜೆಪಿ ನಾಯಕರು ಸೇರಿದಂತೆ 150 ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆದರೆ, ಸಂಘ ಪರಿವಾರದ ಕಾರ್ಯಕರ್ತರ ಗುಂಪಿನ ನೇತೃತ್ವ ವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಖಲಾಲ್ ಪಾಲ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಲ್ಲ. ಘರ್ಷಣೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಸಮಾಧಿಯ ಸುತ್ತಲೂ ಬಿಗಿ ಭದ್ರತೆಯನ್ನು ಏರ್ಪಡಿಸಿದ್ದಾರೆ.
ಸಮಾಧಿಯನ್ನು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂದು ಆರೋಪಿಸಿ ಸಂಘ ಪರಿವಾರದ ಕಾರ್ಯಕರ್ತರು ಕಳೆದ ದಿನ ಕೆಡವಲು ಪ್ರಯತ್ನಿಸಿದರು. ಫತ್ಹೇಪುರ್ ಜಿಲ್ಲೆಯ ಸದರ್ ತಹಸಿಲ್ನ ರೆಡಿಯಾ ಪ್ರದೇಶದ ಅಬು ನಗರದಲ್ಲಿರುವ ಈ ಸಮಾಧಿಯು ಮೊಘಲ್ ಯುಗದಲ್ಲಿ ಆಗ್ರಾ-ಔದ್ ಪ್ರಾಂತ್ಯದ ಭಾಗವಾಗಿದ್ದ ಛಾತಾರಿ ಮತ್ತು ತಾಲಿಬ್ನಗರದ ನವಾಬ್ ಅಬ್ದುಲ್ ಸಮದ್ ಅವರದ್ದಾಗಿದೆ ಎಂದು ಇತಿಹಾಸ ದಾಖಲೆಗಳು ಹೇಳುತ್ತವೆ.
ಈ ಪ್ರದೇಶದಲ್ಲಿ ಮುಸ್ಲಿಮರು ಯುಗಯುಗಗಳಿಂದ ನಿರ್ವಹಿಸುತ್ತಿದ್ದ ಸಮಾಧಿಯ ಮೇಲಿನ ದಾಳಿಯು ಕೋಮು ಗಲಭೆಗಳನ್ನು ಸೃಷ್ಟಿಸುವ ಯೋಜಿತ ನಡೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಹಿಂದುತ್ವ ಕಾರ್ಯಕರ್ತರ ಗುಂಪೊಂದು ಬಲವಂತವಾಗಿ ಸಮಾಧಿಯೊಳಗೆ ಪ್ರವೇಶಿಸಿ ಹಾನಿ ಮಾಡಿದೆ. ಸಮಾಧಿಯ ಗೋಡೆಯ ಕೆಲವು ಭಾಗಗಳು ಸಹ ಹಾನಿಗೊಂಡಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. ದಾಳಿಕೋರರು ಸ್ಥಳದಿಂದ ಪರಾರಿಯಾಗುವ ಮೊದಲು ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ