ಉಳ್ಳಾಲ: ಭಾರತದ 79 ನೇ ಸ್ವಾತಂತ್ರೋತ್ಸವವನ್ನು ಕಿನ್ಯಾ, ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಿನ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಿನಿ ಪೂಜಾರಿ ಅವರು ಧ್ವಜಾರೋಹಣವನ್ನು ನೆರವೇರಿಸಿದರು.
ಕಿನ್ಯ ಪಂಚಾಯತ್ ಉಪಾಧ್ಯಕ್ಷರಾದ ಫಾರೂಕ್ ಕಿನ್ಯ ಅವರು ಸ್ವಾತಂತ್ರೋತ್ಸವ ಕುರಿತು ಸಂದೇಶ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಕಿನ್ಯ ಮೂರನೇ ವಾರ್ಡಿನಲ್ಲಿ ಹಲವಾರು ವರ್ಷಗಳಿಂದ ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ರಂಗದಲ್ಲಿ ಸೇವೆ ಸಲ್ಲಿಸಿದ ರೇವತಿ ಟೀಚರ್, ಹಮೀದ್ ಮಿಂಪ್ರಿ ಮತ್ತು ಅಹ್ಮದ್ ಬಾವು ಪಡ್ಪು ಇವರಿಗೆ ಮೂರನೇ ವಾರ್ಡ್ ಸದಸ್ಯರ ವತಿಯಿಂದ ಸನ್ಮಾನಿಸಲಾಯಿತು.

ಮೂರನೇ ವಾರ್ಡಿನಲ್ಲಿ ಯುವಕರಿಗೆ ಇಂಡಿಪೆಂಡೆನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟವನ್ನು ಏರ್ಪಡಿಸಿ ಅದರ ವಿಜೇತ ತಂಡಕ್ಕೆ ಬಹುಮಾನ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಕಿನ್ಯ ಪಂಚಾಯತ್ ಅಧ್ಯಕ್ಷರಾದ ಮಾಲಿನಿ, ಉಪಾಧ್ಯಕ್ಷರಾದ ಫಾರೂಕ್ ಕಿನ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ತುಳಸಿ,ಕಿನ್ಯ ಗ್ರಾಮ ಪಂಚಾಯತ್ ಸದಸ್ಯರಾದ ಸಯ್ಯದ್ ತ್ವಾಹ ತಂಗಳ್, ಬುಶ್ರಾ ಹನೀಫ್, ಮಿಂಪ್ರಿ ಮಸೀದಿ ಅಧ್ಯಕ್ಷರಾದ ಅಬ್ಬಾಸ್ ಮಿಂಪ್ರಿ, ಮಸೀದಿ ಉಪಾಧ್ಯಕ್ಷರಾದ ಲತೀಫ್ ಮಿಂಪ್ರಿ, ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ರೇವತಿ, ಆನಂದ್ ಮಿಂಪ್ರಿ ಮುಂತಾದ ಹಲವಾರು ಗಣ್ಯರು ಉಪಸ್ಥಿತರಿದ್ದರು.ಆರಿಫ್ ಕಿನ್ಯ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ