ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಸಮಿತಿಯ ಸಾಮಾಜಿಕ ಕಾರ್ಯಗಳಲ್ಲೊಂದಾದ ಆರ್ಥಿಕತೆಯಲ್ಲಿ ಹಿಂದಿರುವವರಿಗೆ ಗೃಹ ನಿರ್ಮಾಣ ವ್ಯವಸ್ಥೆಯ ಭಾಗವಾಗಿ ದುಬೈ ನಾರ್ತ್ ಝೋನ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಒಂದರಲ್ಲಿ ನಿರ್ಮಿಸಲಾದ ‘ದಾರುಲ್ ಅಮಾನ್’ ಮನೆಯ ಉದ್ಘಾಟನಾ ಸಮಾರಂಭದ ನಿರ್ವಹಣಾ ಸಮಿತಿಯನ್ನು ಪನೀರ್ ಹುಸೈನ್ ಹಾಜಿ ನಿವಾಸದಲ್ಲಿ ಇತ್ತೀಚೆಗೆ ಸೇರಿದ ಸಭೆಯಲ್ಲಿ ಅಸ್ತಿತ್ವಕ್ಕೆ ತರಲಾಯಿತು.
ಕೆಸಿಎಫ್ ದುಬೈ ನಾರ್ತ್ ಝೋನ್ ಅಧ್ಯಕ್ಷ ಇಸ್ಮಾಈಲ್ ಮದನಿನಗರ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಕುಡ್ತಮುಗರು ಅಬ್ದುಲ್ಲಾ ಮುಸ್ಲಿಯಾರ್ ಉದ್ಘಾಟಿಸಿದರು. SჄS ದ.ಕ ವೆಸ್ಟ್ ಜಿಲ್ಲಾ ಅಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯ ಕೆಸಿಎಫ್ ನ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡಿದರು.
ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಸಂಘಟನಾ ವಿಭಾಗದ ಅಧ್ಯಕ್ಷ ಮೂಸ ಹಾಜಿ ಬಸರ, ಅಬ್ದುಸ್ಸತ್ತಾರ್ ಸಖಾಫಿ ಅಡ್ಯಾರ್, ಅಬ್ದುಲ್ ಮಜೀದ್ ಹಾಜಿ ಮಂಜನಾಡಿ, ಇ ಕೆ ಇಬ್ರಾಹೀಂ ಕಿನ್ಯ, ಯಾಕೂಬ್ ಅಮಾನಿ ಮೋಂತಿಮಾರ್, ಅಶ್ರಫ್ ಮದನಿನಗರ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು.
ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಹುಸೈನ್ ಹಾಜಿ ಪನೀರ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಸ್ಸತ್ತಾರ್ ಸಖಾಫಿ ಅಡ್ಯಾರ್, ಕೋಶಾಧಿಕಾರಿಯಾಗಿ ಕೊಳ್ನಾಡ್ ಇಬ್ರಾಹೀಂ ಹಾಜಿ ಅವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಅಬ್ದುಲ್ಲಾ ಮುಸ್ಲಿಯಾರ್ ಕುಡ್ತಮುಗರು, ಮಜೀದ್ ಹಾಜಿ ಮಂಜನಾಡಿ, ಜೊತೆ ಕಾರ್ಯದರ್ಶಿಯಾಗಿ ಇ ಕೆ ಇಬ್ರಾಹೀಂ ಕಿನ್ಯ, ಯಾಕೂಬ್ ಅಮಾನಿ ಮೋಂತಿಮಾರ್, ಸಂಚಾಲಕರಾಗಿ ಮಹ್ಬೂಬ್ ಸಖಾಫಿ ಕಿನ್ಯ, ಕಾಸಿಂ ಮದನಿ ತೆಕ್ಕಾರ್ ಅವರನ್ನು ಆರಿಸಲಾಯಿತು.
ಅಕ್ಬರ್ ಅಲಿ, ಸಿರಾಜ್ ಪೂಂಜಾಲ್ಕಟ್ಟೆ, ಶಮೀರ್ ಫರಂಗಿಪೇಟೆ, ಇಬ್ರಾಹೀಂ ಸಖಾಫಿ ಮಠ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಕಾಸಿಂ ಮದನಿ ಪ್ರಾರಂಭದಲ್ಲಿ ಸ್ವಾಗತಿಸಿ, ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ