ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಸಮಿತಿಯ ಸಾಮಾಜಿಕ ಕಾರ್ಯಗಳಲ್ಲೊಂದಾದ ಆರ್ಥಿಕತೆಯಲ್ಲಿ ಹಿಂದಿರುವವರಿಗೆ ಗೃಹ ನಿರ್ಮಾಣ ವ್ಯವಸ್ಥೆಯ ಭಾಗವಾಗಿ ದುಬೈ ನಾರ್ತ್ ಝೋನ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಒಂದರಲ್ಲಿ ನಿರ್ಮಿಸಲಾದ ‘ದಾರುಲ್ ಅಮಾನ್’ ಮನೆಯ ಉದ್ಘಾಟನಾ ಸಮಾರಂಭದ ನಿರ್ವಹಣಾ ಸಮಿತಿಯನ್ನು ಪನೀರ್ ಹುಸೈನ್ ಹಾಜಿ ನಿವಾಸದಲ್ಲಿ ಇತ್ತೀಚೆಗೆ ಸೇರಿದ ಸಭೆಯಲ್ಲಿ ಅಸ್ತಿತ್ವಕ್ಕೆ ತರಲಾಯಿತು.
ಕೆಸಿಎಫ್ ದುಬೈ ನಾರ್ತ್ ಝೋನ್ ಅಧ್ಯಕ್ಷ ಇಸ್ಮಾಈಲ್ ಮದನಿನಗರ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಕುಡ್ತಮುಗರು ಅಬ್ದುಲ್ಲಾ ಮುಸ್ಲಿಯಾರ್ ಉದ್ಘಾಟಿಸಿದರು. SჄS ದ.ಕ ವೆಸ್ಟ್ ಜಿಲ್ಲಾ ಅಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯ ಕೆಸಿಎಫ್ ನ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡಿದರು.
ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಸಂಘಟನಾ ವಿಭಾಗದ ಅಧ್ಯಕ್ಷ ಮೂಸ ಹಾಜಿ ಬಸರ, ಅಬ್ದುಸ್ಸತ್ತಾರ್ ಸಖಾಫಿ ಅಡ್ಯಾರ್, ಅಬ್ದುಲ್ ಮಜೀದ್ ಹಾಜಿ ಮಂಜನಾಡಿ, ಇ ಕೆ ಇಬ್ರಾಹೀಂ ಕಿನ್ಯ, ಯಾಕೂಬ್ ಅಮಾನಿ ಮೋಂತಿಮಾರ್, ಅಶ್ರಫ್ ಮದನಿನಗರ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು.
ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಹುಸೈನ್ ಹಾಜಿ ಪನೀರ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಸ್ಸತ್ತಾರ್ ಸಖಾಫಿ ಅಡ್ಯಾರ್, ಕೋಶಾಧಿಕಾರಿಯಾಗಿ ಕೊಳ್ನಾಡ್ ಇಬ್ರಾಹೀಂ ಹಾಜಿ ಅವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಅಬ್ದುಲ್ಲಾ ಮುಸ್ಲಿಯಾರ್ ಕುಡ್ತಮುಗರು, ಮಜೀದ್ ಹಾಜಿ ಮಂಜನಾಡಿ, ಜೊತೆ ಕಾರ್ಯದರ್ಶಿಯಾಗಿ ಇ ಕೆ ಇಬ್ರಾಹೀಂ ಕಿನ್ಯ, ಯಾಕೂಬ್ ಅಮಾನಿ ಮೋಂತಿಮಾರ್, ಸಂಚಾಲಕರಾಗಿ ಮಹ್ಬೂಬ್ ಸಖಾಫಿ ಕಿನ್ಯ, ಕಾಸಿಂ ಮದನಿ ತೆಕ್ಕಾರ್ ಅವರನ್ನು ಆರಿಸಲಾಯಿತು.
ಅಕ್ಬರ್ ಅಲಿ, ಸಿರಾಜ್ ಪೂಂಜಾಲ್ಕಟ್ಟೆ, ಶಮೀರ್ ಫರಂಗಿಪೇಟೆ, ಇಬ್ರಾಹೀಂ ಸಖಾಫಿ ಮಠ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಕಾಸಿಂ ಮದನಿ ಪ್ರಾರಂಭದಲ್ಲಿ ಸ್ವಾಗತಿಸಿ, ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ