ಅಬುಧಾಬಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಇದರ ಅಬುಧಾಬಿ ಝೋನ್ ಸಮಿತಿ ವತಿಯಿಂದ ಪ್ರವಾದಿ ಮುಹಮ್ಮದ್ ಸ 1500 ನೇ ಜನ್ಮ ದಿನದ ಸಂಭ್ರಮಾಚರಣೆಯ ಸಲುವಾಗಿ ನಡೆಯಲಿರುವ ಬೃಹತ್ ಮೀಲಾದ್ ಸಮಾವೇಶ, ಸೆಪ್ಟೆಂಬರ್ 6 ರಂದು ಮಗ್ರಿಬ್ ನಮಾಝಿನ ಬಳಿಕ ಅಬುಧಾಬಿ ನಗರದ ಇಂಡಿಯನ್ ಇಸ್ಲಾಮಿಕ್ ಸೆಂಟರ್ ಸಭಾ ಭವನದಲ್ಲಿ ನಡೆಯಲಿದೆ.
ಸಮಾರಂಭದಲ್ಲಿ ಖ್ಯಾತ ವಾಗ್ಮಿ, ಡಾ. ಅಬ್ದುಲ್ ಸಲಾಂ ಮುಸ್ಲಿಯಾರ್ ದೇವರ್ಶೋಲ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಸಾಮಾಜಿಕ, ಧಾರ್ಮಿಕ ಸಂಘಟನೆಗಳ ನಾಯಕರು ಭಾಗವಹಿಸಲಿದ್ದಾರೆ.
ಮೌಲಿದ್, ಬುರ್ದಾ ಮಜ್ಲಿಸ್ ಹಾಗೂ ನಹತೆ ಶರೀಫ್ ಕಾರ್ಯಕ್ರಮಗಳು ನಡೆಯಲಿದ್ದು ಪ್ರವಾದಿ ಪ್ರೇಮಿಗಳ ಸ್ವಾಗತಕ್ಕಾಗಿ ಕೆಸಿಎಫ್ ಅಬುಧಾಬಿ ಸ್ವಯಂ ಸೇವಕ ತಂಡಗಳು ಆಹೋರಾತ್ರಿ ದುಡಿಯುತ್ತಿದೆ.
ಈ ಕುರಿತು ವಿವರಿಸಲು ಅಬುಧಾಬಿ ಕೆಸಿಎಫ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಝೋನ್ ಸಮಿತಿ ಅಧ್ಯಕ್ಷ ಕಬೀರ್ ಬಾಯಂಬಾಡಿ, ಕಾರ್ಯದರ್ಶಿ ಉಮರ್ ಈಶ್ವರ ಮಂಗಿಲ, ಸ್ವಾಗತ ಸಮಿತಿಯ ಚಿಯರ್ಮಾನ್ ಮುಹಮ್ಮ ಅಲಿ ಹಾಜಿ ಬ್ರೈಟ್, ಖಜಾಂಜಿ ಹಮೀದ್
ಭಾಗವಹಿಸಿ, ಸರ್ವ ಪ್ರವಾದಿ ಪ್ರೇಮಿಗಳು ಕಾರ್ಯಕಾಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಕರೆ ನೀಡಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ