“ಪ್ರವಾದಿ ﷺ ರವರು ಕಾಲಾತೀತ ಮಾರ್ಗದರ್ಶಿ” ಎಂಬ ಘೋಷ ವಾಕ್ಯದೊಂದಿಗೆ ಪ್ರವಾದಿ ﷺ ರವರ 1500 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕೆಸಿಎಫ್ ರಫಾ ಸೆಕ್ಟರ್ ವತಿಯಿಂದ ಕೆಎಂಸಿಸಿ ಆಡಿಟೋರಿಯಂ ಸಭಾಂಗಣ ರಫಾದಲ್ಲಿ ನಡೆದ ಬೃಹತ್ ಮೀಲಾದ್ ಕಾನ್ಫರೆನ್ಸ್ ಕಾರ್ಯಕ್ರಮವು ಸಲೀಂ ಹಾಜಿ ಕೆಸಿ ರೋಡ್ ರವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ನಬೀಲ್ ಪಡುಬಿದ್ರೆ ಖಿರಾಅತ್ ಪಠಿಸಿದರು.
ಐಸಿಎಫ್ ನಾಯಕರಾದ ಅಝ್ಹರ್ ತಂಙಳ್ ರವರು ಮೌಲಿದ್ ಮಜ್ಲಿಸಿಗೆ ನೇತೃತ್ವ ನೀಡಿದರು. ಕೆಸಿಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಜನಾಬ್ ಜಮಾಲುದ್ದೀನ್ ವಿಟ್ಲರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅಬೂಬಕರ್ ಮದನಿ ಉಸ್ತಾದರು ಪ್ರವಾದಿ ﷺ ರವರಿಗೆ ಅಲ್ಲಾಹು ನೀಡಿದ ಜ್ಞಾನದ ಆಳವನ್ನು ವಿವರಿಸಲು ಸಾಧ್ಯವಿಲ್ಲ. ತನ್ನ ಸ್ವಂತ ಶರೀರಕ್ಕಿಂಲೂ ಮಿಗಿಲಾಗಿ ಪ್ರವಾದಿ ﷺ ರನ್ನು ಪ್ರೀತಿಸಿದರೆ ಮಾತ್ರ ಪರಿಪೂರ್ಣ ಸತ್ಯ ವಿಶ್ವಾಸಿಯಾಗುವುದು. ಪ್ರವಾದಿ ﷺ ರವರ ಚರ್ಯೆಯನ್ನು ನಮ್ಮ ಜೀವನದಲ್ಲಿ ಅವಳಡಿಸಿ ಕೊಳ್ಳಬೇಕು. ಹಝ್ರತ್ ಅಬೂಬಕರ್ ಸಿದ್ದೀಖ್ رضي الله عنه ರವರು ಹಿಜ್ರಾ ಪ್ರಯಾಣದ ವೇಳೆ ಸೌರ್ ಗುಹೆಯಲ್ಲಿ ಪ್ರವಾದಿ ﷺ ರೊಂದಿಗೆ ತೋರಿದ ಅದಮ್ಯ ಪ್ರೇಮದ ಘಟನೆಯನ್ನು ಮದನಿ ಉಸ್ತಾದರು ಸವಿಸ್ತಾರವಾಗಿ ವಿವರಿಸಿದರು.
ಡಿಕೆಯಸ್ಸಿ ಅಧ್ಯಕ್ಷರಾದ ಮಜೀದ್ ಸಅದಿ ಪೆರ್ಲ, ಕೊಡಗು ಸುನ್ನೀ ಜಮಾಅತ್ ಅಧ್ಯಕ್ಷರಾದ ಮಜೀದ್ ಮದಾಪುರ,
ನೋರ್ತ್ ಝೋನ್ ಅಧ್ಯಕ್ಷರಾದ ಅಹ್ಮದ್ ಮುಸ್ಲಿಯಾರ್ ಗಟ್ಟಮನೆ, ಕಾರ್ಯಕ್ರಮಕ್ಕೆ ಶುಭ ಹಾರೖಸಿದರು.
ಐಸಿಎಫ್ ನಾಯಕರಾದ ಅಝ್ಹರ್ ತಂಙಳ್, ಐಸಿ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖಲಂದರ್ ಉಸ್ತಾದ್, ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅಬೂಬಕರ್ ಮದನಿ ಉಸ್ತಾದ್, ಐಸಿ ಎಡ್ಮಿನ್ ವಿಭಾಗದ ಕಾರ್ಯದರ್ಶಿ ಫೖಝಲ್ ಕೃಷ್ಣಾಪುರ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.
ಸ್ವಲಿಹಾ ಹನೀಫಿ ಸುನ್ನಮೂಲೆ ದುಆ ನೆರವೇರಿಸಿದರು. ಸ್ವಾಗತ ಸಮಿತಿ ಚೖರ್ಮಾನ್ ಔಫು ಸಅದಿ ಸ್ವಾಗತಿಸಿ, ಕೊನೆಯಲ್ಲಿ ಧನ್ಯವಾದ ಸಮರ್ಪಿಸಿದರು. ಕೆಸಿಎಫ್ ರಾಷ್ಟ್ರೀಯ, ಝೋನಲ್, ಸೆಕ್ಟರ್, ಯೂನಿಟ್ ಗಳ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)