ಕೆಸಿಎಫ್ ಸಲ್ಮಾಬಾದ್ ಸೆಕ್ಟರ್ ಮಾಸಿಕ ಸ್ವಲಾತ್ ಹಾಗೂ ಮೌಲಿದ್ ಮಜ್ಲಿಸ್ ಐಸಿ ಶಿಕ್ಷಣ ವಿಭಾಗದ ಕಾರ್ಯದರ್ಶಿ ಖಲಂದರ್ ಉಸ್ತಾದ್ ರವರ ನೇತೃತ್ವದಲ್ಲಿ ನವಾಝ್ ಮುಡಿಮಾರ್ ರವರ ಅಧ್ಯಕ್ಷತೆಯಲ್ಲಿ ಫೖಝಲ್ ಮಾದಾಪುರ ಅವರ ನಿವಾಸದಲ್ಲಿ ಇಷಾಟೌನಿನಲ್ಲಿ ಯಶಸ್ವಿಯಾಗಿ ನಡೆಯಿತು. ರಾಷ್ಟ್ರೀಯ ಸಮಿತಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಅಶ್ರಫ್ ರೆಂಜಾಡಿಯವರು ಸ್ವಾಗತಿಸಿದರು. ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅಲ್ಲಾಹು ಈ ಪ್ರಪಂಚದಲ್ಲಿ ಸರ್ವ ಸೃಷ್ಟಿಗಳನ್ನು ಸೃಷ್ಟಿಸುವುದಕ್ಕಿಂತ ಮೊತ್ತ ಮೊದಲಾಗಿ ಪ್ರವಾದಿ ﷺ ರವರ ಪ್ರಕಾಶವನ್ನಾಗಿದೆ ಸೃಷ್ಟಿಸಿರುವುದು. ಪ್ರವಾದಿ ﷺ ರವರ ಮೌಲಿದ್ ಮಜ್ಲಿಸಿನಲ್ಲಿ ಶಿಸ್ತು ಪಾಲನೆ ಅತೀ ಮುಖ್ಯವಾಗಿರಬೇಕು. ಇನ್ನಿತರ ಯಾವುದೇ ಕಾರ್ಯಗಳಲ್ಲಿ ತೊಡಗಿ ಕೊಳ್ಳವುದು ಒಮ್ಮೆಯೂ ಸಲ್ಲದು. ಕಾರಣ ಪ್ರವಾದಿ ﷺ ರವರನ್ನು ಗೌರವಿಸುವುದು, ಪ್ರೀತಿಸುವುದು ಸತ್ಯ ವಿಶ್ವಾಸಿಗೆ ಕಡ್ಡಾಯವಾಗಿದೆ ಎಂದು ಕೆಸಿಎಫ್ ನೋರ್ತ್ ಝೋನ್ ಶಿಕ್ಷಣ ಇಲಾಖೆಯ ಅಧ್ಯಕ್ಷರಾದ ಮುಹಮ್ಮದ್ ಸಖಾಫಿ ಉಸ್ತಾದರು ಉದ್ಭೋದನೆ ನೀಡಿದರು.

ಐಸಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಖಲಂದರ್ ಉಸ್ತಾದ್ ರವರನ್ನು ಸಲ್ಮಾಬಾದ್ ಸೆಕ್ಟರ್ ಕಾರ್ಯಕರ್ತರು ಶಾಲು ಹೊದಿಸಿ ಸನ್ಮಾನಿಸಿದರು. ರಾಷ್ಟ್ರೀಯ ಸಮಿತಿ ಎಕ್ಸಿಕ್ಯೂಟಿವ್ ಸದಸ್ಯರಾದ ಅಬೂಬಕರ್ ಮದನಿ ಮಂಚಿ, ಹನೀಫ್ ಮುಸ್ಲಿಯಾರ್ ರೆಂಜ, ಸಂಘಟನಾ ಇಲಾಖೆ ಅಧ್ಯಕ್ಷರಾದ ಮನ್ಸೂರ್ ಬೆಳ್ಮ, ವೃತ್ತಿಪರ ಇಲಾಖೆಯ ಕಾರ್ಯದರ್ಶಿ ತೌಫೀಖ್ ಬೆಳ್ತಂಗಡಿ, ಪಬ್ಲಿಕೇಶನ್ ವಿಂಗ್ ಅಧ್ಯಕ್ಷರಾದ ಫಝಲ್ ಸುರತ್ಕಲ್, ಕಾರ್ಯದರ್ಶಿ ಶಾಫಿ ಮಾದಾಪುರ, ಎಡ್ಮಿನ್ ವಿಂಗ್ ಅಧ್ಯಕ್ಷರಾದ ಮೂಸಾ ಪೖಂಬಚ್ಚಾಲ್ ಹಾಗೂ ಸಲ್ಮಾಬಾದ್ ಸೆಕ್ಟರಿನ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮುಹಮ್ಮದ್ ಸಖಾಫಿ ಉಸ್ತಾದರು ದುಆ ನೆರವೇರಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ