janadhvani

Kannada Online News Paper

ಅ.13 ಎಸ್.ವೈ.ಎಸ್ ಜಿಲ್ಲಾ ಸಾಂತ್ವನ ಕೇಂದ್ರ ಉದ್ಘಾಟನೆ

ಮಂಗಳೂರು:.ಕರ್ನಾಟಕ ರಾಜ್ಯ ಸುನ್ನೀ ಯುವ ಜನ ಸಂಘ ಎಸ್.ವೈ.ಎಸ್ ಸಂಘಟನೆಯು ರಾಜ್ಯಾದಂತ ಕಳೆದ ಹಲವಾರು ವರ್ಷಗಳಿಂದ ಕಾರ್ಯಕರ್ತರನ್ನು ಸಾಂತ್ವನ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು,ಇದರ ಯಶಸ್ವಿನ ಭಾಗವಾಗಿ ರಾಜ್ಯಾದ್ಯಂತ ಜಿಲ್ಲಾ ಹಾಗೂ ಝೋನ್ ಸಾಂತ್ವನ ಕೇಂದ್ರಗಳನ್ನು ಆರಂಬಿಸಲಿದೆ.

ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾ ಸಮಿತಿ ವತಿಯಿಂದ ಸಾಂತ್ವನ ಇಸಾಬ ಜಿಲ್ಲಾ ಕೇಂದ್ರದ ಉದ್ಘಾಟನೆಯು ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯರವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 13 ಸೋಮವಾರ ಬೆಳಿಗ್ಗೆ 10:00 ಗಂಟೆಗೆ ಅಡ್ಯಾರ್ ನಲ್ಲಿ ನಡೆಯಲಿದೆ.

ಎಸ್.ವೈ.ಎಸ್ ರಾಜ್ಯಾಧ್ಯಕ್ಷ ಬಶೀರ್ ಸಅದಿ ಪೀಣ್ಯ ಸಾಂತ್ವನ ಕೇಂದ್ರವನ್ನು ಉದ್ಘಾಟಿಸಲಿರುವರು.
ಜಿಲ್ಲಾ ಸಾಂತ್ವನ ಇಸಾಬ ಮುಖ್ಯಸ್ತ ಹಾಫಿಳ್ ಯಾಕೂಬ್ ಸಅದಿ ನಾವೂರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್.ವೈ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ,ಕೋಶಾಧಿಕಾರಿ ಮನ್ಸೂರ್ ಅಲಿ ಕೋಟಗದ್ದೆ,ರಾಜ್ಯ ಉಪಾಧ್ಯಕ್ಷ ಖಲೀಲ್ ಮಾಲಿಕಿ,ರಾಜ್ಯ ಕಾರ್ಯದರ್ಶಿಗಳಾದ ಮಹಮ್ಮದಲಿ ಸಖಾಫಿ ಅಶ್ ಅರಿಯ್ಯಾ,ಹಸೈನಾರ್ ಆನೆಮಹಲ್,ಆಸಿಫ್ ಹಾಜಿ ಕೃಷ್ಣಾಪುರ,ಜಿಲ್ಲಾ ಕೋಶಾಧಿಕಾರಿ ರಝಾಕ್ ಭಾರತ್, ಉಪಾಧ್ಯಕ್ಷರಾದ ಬದ್ರುದ್ದೀನ್ ಅಝ್ಹರಿ,ತೌಸೀಫ್ ಸ ಅದಿ ಹರೇಕಳ,ನವಾಝ್ ಸಖಾಫಿ ಅಡ್ಯಾರ್ ಪದವು,ನಝೀರ್ ಹಾಜಿ ಲುಲು,ಜಿಲ್ಲಾ ಕಾರ್ಯದರ್ಶಿಗಳಾದ ಮಹ್ಮೂದ್ ಸಅದಿ ಕುಕ್ಕಾಜೆ,ಫಾರೂಕ್ ಶೇಡಿಗುರಿ,ಹಸನ್ ಪಾಂಡೇಶ್ವರ್,ಮುತ್ತಲಿಬ್ ವೇಣೂರು,ಖಾಲಿದ್ ಹಾಜಿ ಭಟ್ಕಳ್ ಹಾಗೂ ರಾಜ್ಯ ನಾಯಕರು, ಜಿಲ್ಲಾ ನಾಯಕರು ಹಾಗೂ ಝೋನ್ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.