ಅಕ್ಟೋಬರ್ 13, 2025 ಸೋಮವಾರ ಡಿಕೆಯಸ್ಸಿಗೆ 30 ವರ್ಷ ಸಂಪೂರ್ಣ ಗೊಂಡು 31 ನೇ ವರ್ಷಕ್ಕೆ ಪಾದಾರ್ಪಣೆ ಗೈಯ್ಯುತ್ತಿರುವ ಈ ಶುಭ ಸಂದರ್ಭ ಅಲ್ ಖೋಬರ್ ನಲ್ಲಿ ಸಂಸ್ಥಾಪನಾ ದಿನ ಆಚರಿಸಲಾಯಿತು.
ಡಿಕೆಯಸ್ಸಿ ಅಲ್ ಖೋಬರ್ ಘಟಕದ ಅಧ್ಯಕ್ಷ ಇರ್ಶಾದ್ ಅಬ್ದುರ್ರಹ್ಮಾನ್ ರವರ ಘನ
ಅಧ್ಯಕ್ಷತೆಯಲ್ಲಿ ಇಸ್ಮಾಯೀಲ್ ಕಾಟಿಪಳ್ಳ ದುಆ ಗೈದರು. 1995 ರಿಂದ 2025 ರ ವರೆಗೆ ಡಿಕೆಯಸ್ಸಿಗಾಗಿ ದುಡಿದು ಮಡಿದ ಸದಸ್ಯರಿಗೆ ವಿಶೇಷ ಪ್ರಾರ್ಥನೆ ನಡೆಸಲಾಯಿತು.
ಡಿಕೆಯಸ್ಸಿ ಕೇಂದ್ರ ಸಮಿತಿ ಕಾರ್ಯದರ್ಶಿ ಇಸ್ಮಾಯೀಲ್ ಪಡ್ಡಂದಡ್ಕ ಸ್ವಾಗತಿಸಿದರು.
ಸಭೆಯಲ್ಲಿ ಘಟಕದ ಪ್ರಧಾನ ಕಾರ್ಯದರ್ಶಿ ಶಾಫಿ ಶುಐಬ್ ಮಂಗಳೂರು, ದಮ್ಮಾಂ ವಲಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರೋಯಲ್ ಮುಕ್ವೆ, ಅಲ್ ಖೋಬರ್ ಘಟಕದ ಮಾಜಿ ಅಧ್ಯಕ್ಷ ಅಶ್ರಫ್ ಚಿಕ್ಕ ಮಗಳೂರು, ಸದಸ್ಯರಾದ ಅಬ್ದುಲ್ ಹಮೀದ್ ಸುಳ್ಯ, ಯೂಸುಫ್ ಸುಳ್ಯ ಹಾಗೂ ಅಬ್ದುಲ್ ಹಮೀದ್ ರಿಯಾದ್ ಹಾಜರಿದ್ದರು.
ಡಿಕೆಯಸ್ಸಿ ಕೇಂದ್ರ ಸಮಿತಿ ಮೀಡಿಯಾ ವಿಂಗ್ ಮುಖ್ಯಸ್ಥ ಇಸ್ಮಾಯೀಲ್ ಕಾಟಿಪಳ್ಳ ಸ್ವವಿರಚಿತ 30 ವರ್ಷದ ಲಘು ಲೇಖನವನ್ನು ಮಂಡಿಸಿದರು.
13, ಅಕ್ಟೋಬರ್ 1995 ರ ಶುಭ ಗಳಿಗೆಯಂದು ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ಡಿಕೆಯಸ್ಸಿ) ಮಂಗಳೂರು, ಸೌದಿ ಅರೇಬಿಯಾದ ಅಲ್ ಖೋಬರ್ ನಲ್ಲಿ ಜನ್ಮ ತಾಳಿತು.
ಮೂರು ದಶಕಗಳ ಸುದೀರ್ಘ ಕಾಲ ಸಮಾಜದ ಸಮುದಾಯದ ಧಾರ್ಮಿಕ, ಲೌಕಿಕ, ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಕ್ಷೇತ್ರದಲ್ಲಿ ಡಿಕೆಯಸ್ಸಿಯ ಪಾತ್ರ ಹಿರಿದು.
ಡಿಕೆಯಸ್ಸಿ ಅಧೀನದಲ್ಲಿ ಕರ್ನಾಟಕ ರಾಜ್ಯದ ಉಡುಪಿ ಜಿಲ್ಲೆಯ ಮೂಳೂರು ಎಂಬಲ್ಲಿ ಮರ್ಕಝ್ ತಅಲೀಮಿಲ್ ಇಹ್ಸಾನ್ ವಿದ್ಯಾಲಯ ಕಾರ್ಯಾಚರಿಸುತ್ತಿದೆ. ಬಡ, ನಿರ್ಗತಿಕ ಮಕ್ಕಳಿಗೆ ಪ್ಲೇ ಸ್ಕೂಲಿನಿಂದ ಡಿಗ್ರಿ ತನಕ ಉಚಿತ ಶಿಕ್ಷಣ ನೀಡುವ ಮೂಲಕ ಹಾಗೂ ಧಾರ್ಮಿಕ ಶಿಕ್ಷಣ, ಹಿಫ್ಳುಲ್ ಖುರ್ ಆನ್ ನ್ನು ವಿದ್ಯಾರ್ಜನೆ ನೀಡುವ ಮೂಲಕ ಮುನ್ನುಡಿಯುತ್ತಿದೆ. ಡಿಕೆಯಸ್ಸಿ ವಿಷನ್ 30 ಮೂಲಕ ಹೊಸ ಯೋಜನೆಗೆ ಮುಂದಾಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ