ಹೊಸದಿಲ್ಲಿ: ವಕ್ಸ್ (ತಿದ್ದಪಡಿ) ಕಾಯ್ದೆ-2025ರಡಿ ನೀಡಲಾದ ಆರು ತಿಂಗಳ ಗಡುವು ಶನಿವಾರ ಮುಕ್ತಾಯಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಯಾವುದೇ ಕಾರಣಕ್ಕೆ ಈ ಗಡುವು ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಇದುವರೆಗೆ ಅಪ್ಲೋಡ್ ಮಾಡದಿದ್ದಲ್ಲಿ ಅಂಥವರು ವಕ್ಸ್ ನ್ಯಾಯಮಂಡಳಿಯನ್ನು ಸಂಪರ್ಕಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಕೇಂದ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಆರಂಭಿಸಿದ ಉಮೀದ್ ಸೆಂಟ್ರಲ್ ಪೋರ್ಟಲ್ ನಲ್ಲಿ ಇದುವರೆಗೆ 4.6 ಲಕ್ಷ ವಕ್ಸ್ ಆಸ್ತಿಗಳ ವಿವರಗಳನ್ನು ಅಪ್ಲೋಡ್ ಮಾಡಲಾಗಿದೆ.
ಆದಾಗ್ಯೂ ಇದುವರೆಗೆ ನೋಂದಾಯಿಸಲು ಸಾಧ್ಯವಾಗದೇ ಇದ್ದಲ್ಲಿ ಅಂಥವರಿಗೆ ಮಾನವೀಯ ಮತ್ತು ಸೌಲಭ್ಯಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವಾಲಯ ಹೇಳಿದೆ. ಮುಂದಿನ ಮೂರು ತಿಂಗಳವರೆಗೆ ಯಾವುದೇ ದಂಡ ಅಥವಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂಬ ಭರವಸೆ ನೀಡಿದೆ.
ಈ ಮೂಲಕ ಸಕಾರಣಗಳಿಂದಾಗಿ ನೋಂದಣಿಗೆ ಅಪ್ಲೋಡ್ ಮಾಡಲು ಸಾಧ್ಯವಾಗದವರಿಗೆ ನ್ಯಾಯಮಂಡಳಿಯ ಮೊರೆ ಹೋಗುವ ಅವಕಾಶ ನೀಡಲಾಗುತ್ತಿದೆ ಎಂದು ವಿವರಿಸಿದೆ.
ಕಾನೂನಿನ ಪ್ರಕಾರ, ಗಡುವಿನ ಒಳಗಾಗಿ ಸಲ್ಲಿಕೆ ಮಾಡಲು ಸಾಧ್ಯವಾಗದೇ ಇರುವುದಕ್ಕೆ ಕಾರಣ ತೃಪ್ತಿದಾಯಕ ಎಂದು ನ್ಯಾಯಾಧಿಕರಣಕ್ಕೆ ಅನಿಸದಲ್ಲಿ ಮಾತ್ರ ಮುಂದಿನ ಆರು ತಿಂಗಳವರೆಗೆ ವಿಸ್ತರಣೆಗೆ ಅವಕಾಶವಿದೆ.
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿಕೆಯನ್ನು ಕೂಡಾ ಸಚಿವಾಲಯ ಬಿಡುಗಡೆ ಮಾಡಿದೆ. “ಕಾಯ್ದೆಯಡಿ ನೀಡಿರುವ ಆರು ತಿಂಗಳ ಕಡ್ಡಾಯ ಗಡುವು ಮುಕ್ತಾಯವಾಗಿದೆ. ಕಾನೂನಿನ ನಿಬಂಧನೆಗಳ ಅನುಸಾರ ಮತ್ತು ಸುಪ್ರೀಂಕೋರ್ಟ್ನ ಸ್ಪಷ್ಟ ನಿರ್ದೇಶನದ ಕಾರಣದಿಂದ ಇದನ್ನು ವಿಸ್ತರಿಸಲಾಗದು” ಎಂದು ರಿಜಿಜು ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)