janadhvani

Kannada Online News Paper

ಎಸ್.ವ್ಯೆ.ಎಸ್ ಬೆಳ್ತಂಗಡಿ ಝೋನ್: ಮಾದರಿ ಮದುವೆ ಪ್ರಯುಕ್ತ ಜಮಾಅತ್ ಪ್ರತಿನಿಧಿಗಳ ಸಂಗಮ

ಬೆಳ್ತಂಗಡಿ:ಮದುವೆಯ ಹೆಸರಿನಲ್ಲಿ ಇಂದು ಹಲವಾರು ಅನಾಚಾರಗಳು ನಡೆಯುತ್ತಿದ್ದು, ಮದುವೆಯನ್ನು ಹೆಚ್ಚು ಭಾರಗೊಳಿಸುವುದರೊಂದಿಗೆ, ಅನಿಸ್ಲಾಮಿಕತೆಗಳಿಂದ ಮದುವೆಯ ಬರಕತ್ತನ್ನು ನೀಗಿಸಲಾಗುತ್ತಿದೆ. ಇದಕ್ಕೊಂದು ಕಡಿವಾಣ ಹಾಕಬೇಕೆಂದುಕೊಂಡು SჄS ಕರ್ನಾಟಕ ರಾಜ್ಯ ಸಮಿತಿಯು ‘ಮಾದರಿ ಮದುವೆ: ಶತದಿನ ಅಭಿಯಾನ’ವನ್ನು ಹಮ್ಮಿಗೊಂಡಿದೆ.

ಆ ಪ್ರಯುಕ್ತ ಎಸ್.ವ್ಯೆ.ಎಸ್ ಬೆಳ್ತಂಗಡಿ ಝೋನ್ ಜಮಾಅತ್ ಪ್ರತಿನಿಧಿಗಳ ಸಂಗಮ ದಿನಾಂಕ 12.12.2025 ಶುಕ್ರವಾರ 3ಗಂಟೆಗೆ ಝೋನ್ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಸಖಾಫಿ ಆಲoದಿಲ ರವರ ಅಧ್ಯಕ್ಷತೆ ಯಲ್ಲಿ ಗುರುವಾಯನಕೆರೆ ಮಸೀದಿ ಹಾಲ್ ನಲ್ಲಿ ನಡೆಯಲಿರುವುದು.

ಅಸ್ಸಯ್ಯದ್ ಇಸ್ಮಾಯಿಲ್ ಅಲ್ ಹಾದಿ ತಂಗಳ್ ಉಜಿರೆ ಕಾರ್ಯಕ್ರಮದ ದುಆ ನೇತ್ರತ್ವವನ್ನು ನೀಡಲಿದ್ದಾರೆ. ಅಸ್ಸಯ್ಯದ್ ಅಬ್ದುಲ್ ರಹ್ಮಾನ್ ಬಾ-ಅಲವಿ ಸಾದಾತ್ ತಂಗಳ್ ಕುಪ್ಪೆಟ್ಟಿ ಉದ್ಘಾಟನೆ ಯೊಂದಿಗೆ ಚಾಲನೆ ನೀಡಲಿದ್ದಾರೆ. ಮತ್ತು
ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ MSM ಅಬ್ದುಲ್ ರಶೀದ್ ಝ್ಯೆನಿ ಕಾಮಿಲ್ ಸಖಾಫಿ ಮಾದರಿ ಮದುವೆ ಬಗ್ಗೆ ವಿಷಯ ಮಂಡಿಸಲಿದ್ದಾರೆ.

ಬೆಳ್ತಂಗಡಿ ಝೋನ್ ವ್ಯಾಪ್ತಿಯ 60 ಮೊಹಲ್ಲಾ ಗಳಿಂದ ಖತೀಬರು, ಜಮಾಅತ್ ಪ್ರತಿನಿದಿಗಳು ಸೇರಿ ಸುಮಾರು 350ರಷ್ಟು ನಾಯಕರುಗಳು ಭಾಗವಹಿಸಲಿದ್ದಾರೆ. ಎಂದು ಝೋನ್ ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.