ಉಳ್ಳಾಲ: ಕಿನ್ಯಾ ಕೇಂದ್ರ ಜುಮಾ ಮಸೀದಿಯ ಸನಿಹದಲ್ಲೇ ಯಶಸ್ವಿ ಕಾರ್ಯಾಚರಣೆಯೊಂದಿಗೆ ಮುನ್ನುಗ್ಗುತ್ತಿರುವ “ಗೋಲ್ಡನ್ ಹೆಲ್ತ್ ಫೌಂಡೇಶನ್ (ರಿ)”.(ಆರೋಗ್ಯ ಮತ್ತು ವೈದ್ಯಕೀಯ ಸೇವಾ ಸಂಸ್ಥೆ) 2020 ನವೆಂಬರ್ ನಲ್ಲಿ ಅಸ್ತಿತ್ವಕ್ಕೆ ತರಲಾದ ಈ ಸಂಸ್ಥೆಯ ವತಿಯಿಂದ ಕಳೆದ ಐದು ವರ್ಷಗಳಿಂದ ಆರ್ಥಿಕವಾಗಿ ಹಿಂದುಳಿದವರ ಆರೋಗ್ಯ ಸಮಸ್ಯೆ ಸಂಬಂಧಿತ ಕಾರ್ಯಗಳಲ್ಲಿ ನೆರವನ್ನು ನೀಡುತ್ತಾ ಬಂದಿದೆ.
2025 ನೇ ಸಾಲಿನಲ್ಲಿ ಸಂಸ್ಥೆಯು ಆಯೋಜಿಸಿದ ಯಶಸ್ವಿ ಯೋಜನೆಗಳೆಂದರೆ,
ವಾರದ ತಪಾಸಣಾ ಕ್ಲಿನಿಕ್:
(ಊರಿನ ಹಿರಿಯ ನಾಗರಿಕರ ಆರೋಗ್ಯ ತಪಾಸಣೆ ಹಾಗೂ ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ಔಷಧಿಗಳ ವಿತರಣೆ)
ಮಾಸಿಕ ಜೀವ ರಕ್ಷಕ ಔಷಧಿಗಳ ವಿತರಣೆ:
(ಆರ್ಥಿಕವಾಗಿ ತೀರಾ ಹಿಂದುಳಿದ ಬಡ ಕುಟುಂಬದ ರೋಗಿಗಳ ಜೀವ ರಕ್ಷಣೆಗೆ ಅಗತ್ಯವಾದ ಮಾಸಿಕ ಜೀವ ರಕ್ಷಕ ಔಷಧಿಗಳ ವಿತರಣೆ)
ಡಯಾಲಿಸಿಸ್ ಗಾಗಿ ಮಾಸಿಕ ಆರ್ಥಿಕ ನೆರವು:
(ಆರ್ಥಿಕವಾಗಿ ತೀರಾ ಹಿಂದುಳಿದ ಬಡ ಕುಟುಂಬದ ರೋಗಿಯ ಜೀವ ರಕ್ಷಣೆಗೆ ಅತ್ಯಗತ್ಯವಾದ ಡಯಾಲಿಸಿಸ್ ನಡೆಸಲು ಆರ್ಥಿಕ ನೆರವು)
ತುರ್ತು ಉಪಯೋಗಕ್ಕಾಗಿ ವೈದ್ಯಕೀಯ ಸಲಕರಣೆಗಳ ನೆರವು:
(ರೋಗಿಗಳ ತುರ್ತು ಉಪಯೋಗಕ್ಕೆ ಅಗತ್ಯವಾದ ವೈದ್ಯಕೀಯ ಸಲಕರಣೆಗಳಾದ ಹಾಸ್ಪಿಟಲ್ ಕಾಟ್, ವ್ಹೀಲ್ ಚೇರ್, ವಾಕರ್, ವಾಟರ್ ಬೆಡ್, ಏರ್ ಬೆಡ್, ನೆಬುಲೈಝರ್ ಇತ್ಯಾದಿಗಳ ನೆರವು)
ಬಡವರ ತುರ್ತು ಚಿಕಿತ್ಸೆಗೆ ನೆರವು:
(ಆರ್ಥಿಕವಾಗಿ ತೀರಾ ಹಿಂದುಳಿದ ಅತ್ಯಂತ ಬಡ ಕುಟುಂಬದ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ವೈದ್ಯಕೀಯ ನೆರವು)
ವೈದ್ಯಕೀಯ ತಪಾಸಣಾ ಶಿಬಿರಗಳು:
(ವಿವಿಧ ವೈದ್ಯಕೀಯ ವಿಭಾಗದಲ್ಲಿ ನುರಿತ ವೈದ್ಯರಿಂದ ತಪಾಸಣಾ ಶಿಬಿರಗಳು)
ವೈದ್ಯಕೀಯ ಮಾಹಿತಿ ಹಾಗೂ ಪ್ರಾತ್ಯಕ್ಷಿಕಾ ಶಿಬಿರಗಳು:
(ದಿನನಿತ್ಯ ಜೀವನದಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ತಿಳಿವಳಿಕೆ (councelling) ಹಾಗೂ ಪ್ರಾತ್ಯಕ್ಷಿಕೆಗಳ (demonstration) ಶಿಬಿರಗಳು)
ಮುಂತಾದವುಗಳನ್ನು ಊರಿನವರ ಸಹಾಯ, ಸಹಕಾರದಿಂದ ಸಂಸ್ಥೆಯು ಯಶಸ್ವಿಯಾಗಿ ಪೂರ್ತೀಕರಿಸಿದೆ.
ಸಂಸ್ಥೆಯ ವಿಳಾಸ:
ಗೋಲ್ಡನ್ ಹೆಲ್ತ್ ಫೌಂಡೇಶನ್ (ರಿ) ಕಿನ್ಯ.
(ಆರೋಗ್ಯ ಮತ್ತು ವೈದ್ಯಕೀಯ ಸೇವಾ ಸಂಸ್ಥೆ)
ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಕಾಂಪ್ಲೆಕ್ಸ್, ಕೇಂದ್ರ ಜುಮಾ ಮಸೀದಿಯ ಹತ್ತಿರ, ಕಿನ್ಯ ಗ್ರಾಮ, ಉಳ್ಳಾಲ ತಾಲೂಕು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ