ಮಂಗಳೂರು: “ಮನುಷ್ಯರೊಂದಿಗೆ” ಎಂಬ ಘೋಷವಾಕ್ಯದಲ್ಲಿ ಕೇರಳ ಮುಸ್ಲಿಂ ಜಮಾಅತ್ ವತಿಯಿಂದ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರ ನೇತೃತ್ವದಲ್ಲಿ ಜನವರಿ 1 ರಿಂದ 16 ತನಕ ಕಾಸರಗೋಡಿನಿಂದ ತಿರುವನಂತಪುರ ತನಕ ನಡೆಯುವ ಮೂರನೆಯ ಕೇರಳ ಯಾತ್ರೆಯ ಭಾಗವಾಗಿ ಜನವರಿ 1 ಗುರುವಾರ ಮಧ್ಯಾಹ್ನ 1:30ಕ್ಕೆ ಉಳ್ಳಾಲ ದರ್ಗಾ ಝಿಯಾರತ್ ನಡೆಯಲಿದೆ.
ನಂತರ ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾ ಸಮಿತಿಯಿಂದ ಉಳ್ಳಾಲ ದರ್ಗಾದಿಂದ ತಲಪಾಡಿ ತನಕ ಕೇರಳ ಯಾತ್ರಾ ನಾಯಕರ ಜತೆ ಸಾಗಿ ಕೇರಳ ಗಡಿ ತಲಪಾಡಿ ಟೋಲ್ ಗೇಟ್ ಬಳಿ ಮದ್ಯಾಹ್ನ 2:00 ಗಂಟೆಗೆ ಕೇರಳ ಯಾತ್ರೆಯ ನಾಯಕರನ್ನು ಗೌರವಿಸುವ ಐಕ್ಯಧಾಡ್ಯ ಸಂಗಮವು ಎಸ್ವೈಎಸ್ ದ.ಕ ಜಿಲ್ಲಾಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯರವರ ನೇತೃತ್ವದಲ್ಲಿ ನಡೆಯಲಿದ್ದು, ಸುನ್ನೀ ಸಂಘ ಕುಟುಂಬದ ನಾಯಕರು ಹಾಗೂ ಕಾರ್ಯಕರ್ತರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ