ಪುತ್ತೂರು : ಮನುಷ್ಯರೊಂದಿಗೆ ಎಂಬ ಧ್ಯೇಯವಾಕ್ಯದಲ್ಲಿ ಕೇರಳ ಮುಸ್ಲಿಂ ಜಮಾಅತ್ ಆಯೋಜಿಸಿರುವ, ಇಂಡಿಯನ್ ಗ್ರಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎ ಪಿ ಉಸ್ತಾದರ 3 ನೇ ಕೇರಳ ಯಾತ್ರೆಯು 2026 ಜನವರಿ 1 ರಂದು ಗುರುವಾರ ಮಧ್ಯಾಹ್ನ 1.30 ಕ್ಕೆ ಉಳ್ಳಾಲ ದರ್ಗಾ ಝಿಯಾರತ್ ನೊಂದಿಗೆ ಚಾಲನೆಗೊಳ್ಳಲಿದೆ.
ಮಾನವೀಯತೆ, ಸಹಬಾಳ್ವೆ, ಧಾರ್ಮಿಕ ಸೌಹಾರ್ದತೆ, ಮಾನವೀಯ ಏಕತೆ ಮತ್ತು ಭಾವೈಕ್ಯತೆಯನ್ನು ಸಾರುವ ಈ ಯಾತ್ರೆಯು ಕಾಸರಗೋಡು ಜಿಲ್ಲೆಯ ಚೆರ್ಕಳದಲ್ಲಿ ಅಂದು ಸಂಜೆ ಉದ್ಘಾಟನೆಗೊಂಡು ಕೇರಳದ ವಿವಿಧ ಕೇಂದ್ರಗಳಲ್ಲಿ ಸ್ವಾಗತ ಸಮಾರಂಭಗಳು ನಡೆಯಲಿದ್ದು ಜನವರಿ 16 ರಂದು ತಿರುವನಂತಪುರದಲ್ಲಿ ಸಮಾರೋಪ ಗೊಳ್ಳಲಿದೆ.
ಕಾರ್ಯಕ್ರಮದಲ್ಲಿ ರಈಸುಲ್ ಉಲಮಾ ಇ ಸುಲೈಮಾನ್ ಮುಸ್ಲಿಯಾರ್, ಸುಲ್ತಾನುಲ್ ಉಲಮಾ ಎ ಪಿ ಉಸ್ತಾದ್, ಅಮೀನುಶ್ಶರಿಯ್ಯಾ ಸಯ್ಯಿದ್ ಅಲೀ ಬಾಫಖಿ ತಂಞಳ್, ಖುದ್ವತ್ತುಸ್ಸಾದಾತ್ ಕೆ ಎಸ್ ಆಟಕೋಯ ತಂಙಳ್ ಕುಂಬೋಳ್, ಬದರುಸ್ಸಾದಾತ್ ಇಬ್ರಾಹಿಂ ಬುಖಾರಿ ತಂಙಳ್ ಕುಂಬೋಳ್, ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಕುಟ್ಯಾಡಿ, ಕರ್ನಾಟಕ ರಾಜ್ಯ ಸ್ಪೀಕರ್ ಯು ಟಿ ಖಾದರ್, ವೈ ಅಬ್ದುಲ್ಲಾ ಕುಂಞಿ ಏನಪೋಯ, ಉಳ್ಳಾಲ ದರ್ಗಾ ಅಧ್ಯಕ್ಷರಾದ ಹನೀಫ್ ಹಾಜಿ ಉಳ್ಳಾಲ ಮೊದಲಾದ ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದಾರೆ.
ಉಳ್ಳಾಲ ಸಯ್ಯಿದ್ ಮುಹಮ್ಮದುಲ್ ಶರೀಫುಲ್ ಮದನಿ (ಖ.ಸಿ.) ದರ್ಗಾ ಝಿಯಾರತ್ ಆಗಮಿಸುವ ಕೇರಳ ಯಾತ್ರಾ ತಂಡವನ್ನು ಸ್ವಾಗತಿಸಲು ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಈಸ್ಟ್ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುನ್ನಿ ಸಂಘಟನೆಯ ಯುನಿಟ್, ಸರ್ಕಲ್ ಝೋನ್ , ಜಿಲ್ಲಾ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಹೆಚ್ಷಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿಯು ಕರೆ ನೀಡಿದೆ.
ವರದಿ : ಯೂಸುಫ್ ಸಯೀದ್ ಪುತ್ತೂರು
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ