ರಿಯಾದ್: ಸೌದಿ ಅರೇಬಿಯಾದಲ್ಲಿ ಪವಿತ್ರ ರಂಜಾನ್ ತಿಂಗಳ ಆಗಮನದ ಮುಂಚಿತವಾಗಿ ಮಸೀದಿಗಳಿಗೆ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಂಜಾನ್ ಸಮಯದಲ್ಲಿ ವಿಶ್ವಾಸಿಗಳಿಗೆ ಸುರಕ್ಷಿತ ಮತ್ತು ಆಧ್ಯಾತ್ಮಿಕ ವಾತಾವರಣವನ್ನು ಒದಗಿಸುವ ಪ್ರಯತ್ನಗಳ ಭಾಗವಾಗಿ ಈ ಸುತ್ತೋಲೆಯನ್ನು ಹೊರಡಿಸಲಾಗಿದೆ.
ಉಮ್ ಅಲ್-ಖುರಾ ಕ್ಯಾಲೆಂಡರ್ ಪ್ರಕಾರ ಪ್ರಾರ್ಥನೆ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಇಶಾ-ಫಜ್ರ್ ಅಝಾನ್ ನಂತರ ಕೇವಲ 15 ನಿಮಿಷಗಳ ಬಳಿಕವೇ ನಮಾಜ್ ಪ್ರಾರಂಭಿಸಬೇಕು ಎಂದು ಶಿಫಾರಸು ಮಾಡಲಾಗಿದೆ. ಮಸೀದಿ ನೌಕರರ ಹಾಜರಾತಿಯನ್ನು ಕಡ್ಡಾಯಗೊಳಿಸಿರುವ ಸಚಿವಾಲಯ, ರಜೆ ಅಗತ್ಯವಿರುವವರು ಮುಂಚಿತವಾಗಿ ಬದಲಿಗಳನ್ನು ನೇಮಿಸಿಕೊಳ್ಳಬೇಕು ಎಂದು ಸ್ಪಷ್ಟಪಡಿಸಿದೆ. ರಂಜಾನ್ನ ಕೊನೆಯ ಹತ್ತು ದಿನಗಳ ಖಿಯಾಮುಲ್ಲೈಲಿ (ರಾತ್ರಿ ನಮಾಜ್)ಯನ್ನು ಬೆಳಗಿನ ಜಾವದ ಮುಂಚಿತವಾಗಿ ವಿಶ್ವಾಸಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ.
ಮಸೀದಿಗಳಲ್ಲಿ ಇಅ್ತಿಕಾಫ್ನಲ್ಲಿ ಕುಳಿತುಕೊಳ್ಳುವವರು ಸರಿಯಾಗಿ ನೋಂದಾಯಿಸಿಕೊಳ್ಳಬೇಕು ಮತ್ತು ಅವರು ವಿದೇಶಿಯರಾಗಿದ್ದರೆ, ಪ್ರಾಯೋಜಕರ ಅನುಮತಿ ಪತ್ರವನ್ನು ಹೊಂದಿರಬೇಕು ಎಂದು ಸಚಿವಾಲಯ ತಿಳಿಸಿದೆ. ಮಸೀದಿ ಆವರಣದಲ್ಲಿ ಭಿಕ್ಷಾಟನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಯಾವುದೇ ಉಲ್ಲಂಘನೆಗಳು ಕಂಡುಬಂದರೆ ನೌಕರರು ತಕ್ಷಣ ಭದ್ರತಾ ಅಧಿಕಾರಿಗಳಿಗೆ ತಿಳಿಸಬೇಕು. ಸಚಿವಾಲಯವು ಮಸೀದಿಗಳ ದೈನಂದಿನ ತಪಾಸಣೆ ನಡೆಸುತ್ತದೆ ಮತ್ತು ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು