ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಮಂಗಳೂರು ದಮ್ಮಾಮ್ ಝೋನ್ ಅಧೀನದ ದಮ್ಮಾಮ್ ಘಟಕದ 31ನೇ ವಾರ್ಷಿಕ ಮಹಾಸಭೆ ದಿನಾಂಕ 29, ಜನವರಿ 2026 ಗುರುವಾರ ಅಸ್ತ ಶುಕ್ರವಾರ ರಾತ್ರಿ 10.30 ಗಂಟೆಗೆ ಸರಿಯಾಗಿ ದಮ್ಮಾಮ್ ಅಡಿಟೋರಿಯಂ ನಲ್ಲಿ ಜರಗಿತು.
ದಮ್ಮಾಮ್ ಘಟಕದ ಉಪಾಧ್ಯಕ್ಷ ಜಮಾಲ್ ಮುಹ್ಯಿದ್ದೀನ್ ಉಚ್ಚಿಲ ರವರ ಘನ ಅಧ್ಯಕ್ಷತೆಯಲ್ಲಿ ಜರಗಿತು.


ಶೌಕತ್ ಅಲೀ ತೀರ್ಥಹಳ್ಳಿ ಸೂರ: ಅರ್ರಹ್ಮಾನ್ ಪಾರಾಯಣ ಗೈದರು. ಅಬ್ದುಲ್ ಅಝೀಝ್ ಮೂಡುತೋಟ ಸಭೆಗೆ ಆಗಮಿಸಿದ ಡಿಕೆಯಸ್ಸಿ ಯ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಡಿಕೆಯಸ್ಸಿ ಕೇಂದ್ರ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಸನ್ ಮೂಡುತೋಟ ಡಿಕೆಯಸ್ಸಿ ನಡೆದು ಕೊಂಡು ಬಂದ ದಾರಿಯನ್ನು ವಿವರಿಸಿ ಅಲ್ಲಾಹನ ಪವಿತ್ರ ನಾಮ ದೊಂದಿಗೆ ಸಮಾರಂಭವನ್ನು ಉದ್ಘಾಟಿಸಿದರು.
ಇಸ್ಮಾಯೀಲ್ ಕಾಟಿಪಳ್ಳ ವಾರ್ಷಿಕ ವರದಿ ಹಾಗೂ ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಚೊಕ್ಕಬೆಟ್ಟು ವಾರ್ಷಿಕ ಪ್ರವರ್ತನಾ ವರದಿ ಮಂಡಿಸಿ ಸಭೆಯ ಅನುಮೋದನೆಯನ್ನು ಪಡೆದರು.


ಉಪಾಧ್ಯಕ್ಷ ಜಮಾಲ್ ಉಚ್ಚಿಲ ರವರು ಮಾತನಾಡಿ ಡಿಕೆಯಸ್ಸಿ ಗಾಗಿ ನಮ್ಮೊಂದಿಗೆ ಸಹಕರಿಸಿ ಯಶಸ್ವಿಗೊಳಿಸಿದ ಸರ್ವರಿಗೂ ತಕ್ಕುದಾದ ಪ್ರತಿಫಲ ಅಲ್ಲಾಹು ದ್ವಿಲೋಕದಲ್ಲೂ ಅನುಗ್ರಹಿಸಲಿ ಆಮೀನ್ ಎಂದು ಪ್ರಾರ್ಥಿಸಿದರು.
2026-27 ನೇ ಸಾಲಿಗೆ ನೂತನ ಸಮಿತಿಯನ್ನು ಡಿಕೆಯಸ್ಸಿ ದಮ್ಮಾಮ್ ಝೋನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರೋಯಲ್ ಮುಕ್ವೆ ರಚಿಸಿದರು.
ಅಧ್ಯಕ್ಷರಾಗಿ ಜಮಾಲ್ ಸ್ವಾಲಿಹ್ ಕಣ್ಣಂಗಾರ್, ಡೆವಲಪ್ ಮೆಂಟ್ ಚಯರ್ಮ್ಯಾನ್ ಹಸನ್ ಬಾವ ಕುಪ್ಪೆಪದವು, ಪ್ರಧಾನ ಕಾರ್ಯದರ್ಶಿ ಶೌಕತ್ ತೀರ್ಥ ಹಳ್ಳಿ, ಹಣಕಾಸು ಕಾರ್ಯದರ್ಶಿಯಾಗಿ ಶಾಕಿರ್ ಬೊಳ್ಳಾಯಿ ಆಯ್ಕೆಗೊಂಡರು.
ಉಪಾಧ್ಯಕ್ಷರುಗಳಾಗಿ
ಜಮಾಲ್ ಮುಹ್ಯಿದ್ದೀನ್ ಉಚ್ಚಿಲ,
ಉಮರಬ್ಬ ಮರವೂರು, ಅಬೂಬಕ್ಕರ್ ಅಜಿಲಮೊಗರು , ಕಾರ್ಯದರ್ಶಿಗಳಾಗಿ ಜುರೈಜ್ ರವರನ್ನು ನೇಮಿಸಲಾಯಿತು.
ಸಲಹಾ ಸಮಿತಿಗೆ ಮತ್ತು 20 ಮಂದಿ ಸದಸ್ಯರನ್ನು ಕಾರ್ಯಕಾರಿ ಸಮಿತಿಗೆ ಸದಸ್ಯರನ್ನಾಗಿ ಆರಿಸಲಾಯಿತು.
ಫ್ಯಾಮಿಲಿ ಮುಲಾಖಾತ್ ಪ್ರಧಾನ ಕಾರ್ಯದರ್ಶಿ ಶಾಫಿ ಶುಐಬ್ ಮಂಗಳೂರು, ಮದದ್ ವಿಂಗ್ ಅಧ್ಯಕ್ಷ ಅಶ್ರಫ್ ಚಿಕ್ಕಮಗಳೂರು ಉಪಸ್ಥಿತರಿದ್ದರು.

ಶುಭಾ ಶಂಸೆಗೈದವರು:
ಡಿಕೆಯಸ್ಸಿಯ ದಮ್ಮಾಂ ಘಟಕದ ಮಾಜಿ ಅಧ್ಯಕ್ಷರುಗಳಾದ
ಸಿದ್ದೀಖ್ ಕೊಂಚಾರ್,
ಸಯ್ಯಿದ್ ಬಾವ ಬಜ್ಪೆ,
ಹಸನ್ ಬಾವ ಬೆಂಗಳೂರು (ಊರಿನಿಂದ)
ಅಬ್ದುಲ್ ಹಮೀದ್ ಕೊಂಚಾರ್
(ಊರಿನಿಂದ)
ನೂತನ ಅಧ್ಯಕ್ಷರಾಗಿ ನೇಮಕಗೊಂಡ ಜಮಾಲ್ ಸ್ವಾಲಿಹ್ ಕಣ್ಣಂಗಾರ್ ಮಾತನಾಡುತ್ತಾ ತಾವುಗಳೆಲ್ಲರೂ ಡಿಕೆಯಸ್ಸಿ ಗಾಗಿ ಹೆಚ್ಚಿನ ಮುತುವರ್ಜಿಯಿಂದ ಪ್ರವರ್ತನೆಗೈದು ಡಿಕೆಯಸ್ಸಿಯ ಅಭಿವೃದ್ಧಿಗೆ ನಮ್ಮೊಂದಿಗೆ ಕೈ ಜೋಡಿಸಬೇಕೆoದು ವಿನಂತಿಸಿದರು.
ಕಮ್ಯುನಿಕೇಷನ್ ಸೆಕ್ರೆಟರಿ ಇಸ್ಮಾಯೀಲ್ ಕಾಟಿಪಳ್ಳ ಸಭೆಯ ಕೊನೆಯಲ್ಲಿ ಧನ್ಯವಾದ ಗೈದರು.
ವರದಿ: ಇಸ್ಮಾಯೀಲ್ ಕಾಟಿಪಳ್ಳ
(ಮೀಡಿಯಾ ವಿಂಗ್)
ದಮ್ಮಾಂ, ಸೌದಿ ಅರೇಬಿಯ
















ಇನ್ನಷ್ಟು ಸುದ್ದಿಗಳು
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ