ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಮಂಗಳೂರು ದಮ್ಮಾಮ್ ಝೋನ್ ಅಧೀನದ ದಮ್ಮಾಮ್ ಘಟಕದ 31ನೇ ವಾರ್ಷಿಕ ಮಹಾಸಭೆ ದಿನಾಂಕ 29, ಜನವರಿ 2026 ಗುರುವಾರ ಅಸ್ತ ಶುಕ್ರವಾರ ರಾತ್ರಿ 10.30 ಗಂಟೆಗೆ ಸರಿಯಾಗಿ ದಮ್ಮಾಮ್ ಅಡಿಟೋರಿಯಂ ನಲ್ಲಿ ಜರಗಿತು.
ದಮ್ಮಾಮ್ ಘಟಕದ ಉಪಾಧ್ಯಕ್ಷ ಜಮಾಲ್ ಮುಹ್ಯಿದ್ದೀನ್ ಉಚ್ಚಿಲ ರವರ ಘನ ಅಧ್ಯಕ್ಷತೆಯಲ್ಲಿ ಜರಗಿತು.


ಶೌಕತ್ ಅಲೀ ತೀರ್ಥಹಳ್ಳಿ ಸೂರ: ಅರ್ರಹ್ಮಾನ್ ಪಾರಾಯಣ ಗೈದರು. ಅಬ್ದುಲ್ ಅಝೀಝ್ ಮೂಡುತೋಟ ಸಭೆಗೆ ಆಗಮಿಸಿದ ಡಿಕೆಯಸ್ಸಿ ಯ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಡಿಕೆಯಸ್ಸಿ ಕೇಂದ್ರ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಸನ್ ಮೂಡುತೋಟ ಡಿಕೆಯಸ್ಸಿ ನಡೆದು ಕೊಂಡು ಬಂದ ದಾರಿಯನ್ನು ವಿವರಿಸಿ ಅಲ್ಲಾಹನ ಪವಿತ್ರ ನಾಮ ದೊಂದಿಗೆ ಸಮಾರಂಭವನ್ನು ಉದ್ಘಾಟಿಸಿದರು.
ಇಸ್ಮಾಯೀಲ್ ಕಾಟಿಪಳ್ಳ ವಾರ್ಷಿಕ ವರದಿ ಹಾಗೂ ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಚೊಕ್ಕಬೆಟ್ಟು ವಾರ್ಷಿಕ ಪ್ರವರ್ತನಾ ವರದಿ ಮಂಡಿಸಿ ಸಭೆಯ ಅನುಮೋದನೆಯನ್ನು ಪಡೆದರು.


ಉಪಾಧ್ಯಕ್ಷ ಜಮಾಲ್ ಉಚ್ಚಿಲ ರವರು ಮಾತನಾಡಿ ಡಿಕೆಯಸ್ಸಿ ಗಾಗಿ ನಮ್ಮೊಂದಿಗೆ ಸಹಕರಿಸಿ ಯಶಸ್ವಿಗೊಳಿಸಿದ ಸರ್ವರಿಗೂ ತಕ್ಕುದಾದ ಪ್ರತಿಫಲ ಅಲ್ಲಾಹು ದ್ವಿಲೋಕದಲ್ಲೂ ಅನುಗ್ರಹಿಸಲಿ ಆಮೀನ್ ಎಂದು ಪ್ರಾರ್ಥಿಸಿದರು.
2026-27 ನೇ ಸಾಲಿಗೆ ನೂತನ ಸಮಿತಿಯನ್ನು ಡಿಕೆಯಸ್ಸಿ ದಮ್ಮಾಮ್ ಝೋನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರೋಯಲ್ ಮುಕ್ವೆ ರಚಿಸಿದರು.
ಅಧ್ಯಕ್ಷರಾಗಿ ಜಮಾಲ್ ಸ್ವಾಲಿಹ್ ಕಣ್ಣಂಗಾರ್, ಡೆವಲಪ್ ಮೆಂಟ್ ಚಯರ್ಮ್ಯಾನ್ ಹಸನ್ ಬಾವ ಕುಪ್ಪೆಪದವು, ಪ್ರಧಾನ ಕಾರ್ಯದರ್ಶಿ ಶೌಕತ್ ತೀರ್ಥ ಹಳ್ಳಿ, ಹಣಕಾಸು ಕಾರ್ಯದರ್ಶಿಯಾಗಿ ಶಾಕಿರ್ ಬೊಳ್ಳಾಯಿ ಆಯ್ಕೆಗೊಂಡರು.
ಉಪಾಧ್ಯಕ್ಷರುಗಳಾಗಿ
ಜಮಾಲ್ ಮುಹ್ಯಿದ್ದೀನ್ ಉಚ್ಚಿಲ,
ಉಮರಬ್ಬ ಮರವೂರು, ಅಬೂಬಕ್ಕರ್ ಅಜಿಲಮೊಗರು , ಕಾರ್ಯದರ್ಶಿಗಳಾಗಿ ಜುರೈಜ್ ರವರನ್ನು ನೇಮಿಸಲಾಯಿತು.
ಸಲಹಾ ಸಮಿತಿಗೆ ಮತ್ತು 20 ಮಂದಿ ಸದಸ್ಯರನ್ನು ಕಾರ್ಯಕಾರಿ ಸಮಿತಿಗೆ ಸದಸ್ಯರನ್ನಾಗಿ ಆರಿಸಲಾಯಿತು.
ಫ್ಯಾಮಿಲಿ ಮುಲಾಖಾತ್ ಪ್ರಧಾನ ಕಾರ್ಯದರ್ಶಿ ಶಾಫಿ ಶುಐಬ್ ಮಂಗಳೂರು, ಮದದ್ ವಿಂಗ್ ಅಧ್ಯಕ್ಷ ಅಶ್ರಫ್ ಚಿಕ್ಕಮಗಳೂರು ಉಪಸ್ಥಿತರಿದ್ದರು.

ಶುಭಾ ಶಂಸೆಗೈದವರು:
ಡಿಕೆಯಸ್ಸಿಯ ದಮ್ಮಾಂ ಘಟಕದ ಮಾಜಿ ಅಧ್ಯಕ್ಷರುಗಳಾದ
ಸಿದ್ದೀಖ್ ಕೊಂಚಾರ್,
ಸಯ್ಯಿದ್ ಬಾವ ಬಜ್ಪೆ,
ಹಸನ್ ಬಾವ ಬೆಂಗಳೂರು (ಊರಿನಿಂದ)
ಅಬ್ದುಲ್ ಹಮೀದ್ ಕೊಂಚಾರ್
(ಊರಿನಿಂದ)
ನೂತನ ಅಧ್ಯಕ್ಷರಾಗಿ ನೇಮಕಗೊಂಡ ಜಮಾಲ್ ಸ್ವಾಲಿಹ್ ಕಣ್ಣಂಗಾರ್ ಮಾತನಾಡುತ್ತಾ ತಾವುಗಳೆಲ್ಲರೂ ಡಿಕೆಯಸ್ಸಿ ಗಾಗಿ ಹೆಚ್ಚಿನ ಮುತುವರ್ಜಿಯಿಂದ ಪ್ರವರ್ತನೆಗೈದು ಡಿಕೆಯಸ್ಸಿಯ ಅಭಿವೃದ್ಧಿಗೆ ನಮ್ಮೊಂದಿಗೆ ಕೈ ಜೋಡಿಸಬೇಕೆoದು ವಿನಂತಿಸಿದರು.
ಕಮ್ಯುನಿಕೇಷನ್ ಸೆಕ್ರೆಟರಿ ಇಸ್ಮಾಯೀಲ್ ಕಾಟಿಪಳ್ಳ ಸಭೆಯ ಕೊನೆಯಲ್ಲಿ ಧನ್ಯವಾದ ಗೈದರು.
ವರದಿ: ಇಸ್ಮಾಯೀಲ್ ಕಾಟಿಪಳ್ಳ
(ಮೀಡಿಯಾ ವಿಂಗ್)
ದಮ್ಮಾಂ, ಸೌದಿ ಅರೇಬಿಯ
















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ