ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಮಂಗಳೂರು ದಮ್ಮಾಂ ವಲಯ ಅಧೀನದ ಜುಬೈಲ್ ಘಟಕದ ಮಹಾಸಭೆಯು ದಿನಾಂಕ 30, ಜನವರಿ 2026 ಶುಕ್ರವಾರ ಅಧ್ಯಕ್ಷರಾದ ಮುಹಮ್ಮದ್ ಅಲಿ ಕೃಷ್ಣಾಪುರ ಅವರ ಅಧ್ಯಕ್ಷತೆಯಲ್ಲಿ ಜುಬೈಲ್ ನಲ್ಲಿ ಜರಗಿತು.


ಜಾಫರ್ ಮುಂಡ್ಕೂರ್ ವಾರ್ಷಿಕ ವರದಿಯನ್ನು ಹಾಗೂ ಹಣಕಾಸು ಕಾರ್ಯದರ್ಶಿ ಅನ್ವರ್ ಪಡುಬಿದ್ರಿ ಯವರು ಪ್ರವರ್ತನಾ ವರದಿಯನ್ನು ಸಭೆಯಲ್ಲಿ ಮಂಡಿಸಿ ಸಭೆಯ ಅನುಮೋದನೆಯನ್ನು ಪಡೆದರು. ಡಿಕೆಯಸ್ಸಿ ದಮ್ಮಾಂ ವಲಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರೋಯಲ್ ಮುಕ್ವೆ ನೇತ್ರತ್ವದಲ್ಲಿ 2026-27 ನೇ ಸಾಲಿಗೆ ನೂತನ ಸಮಿತಿ ರಚಿಸಲಾಯಿತು.


ಮುಸ್ತಫಾ ಮೈನ ರವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಅನ್ವರ್ ಪಡುಬಿದ್ರಿ ಮತ್ತು ಜಾಫರ್ ಮುಂಡ್ಕೂರ್ ,ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಮುಶ್ತಾಖ್ ಮಜ್ವಾನ ,ಕಾರ್ಯದರ್ಶಿಗಳಾಗಿ ಅಬ್ದುಲ್ ಹಕೀಮ್ ನೆಕ್ಕರೆ ,ಉಬೈದ್ ಸುರಿಬೈಲ್ ಮತ್ತು ಯಹ್ಯಾ ಕೆಸಿ ರೊಡ್ ರವರನ್ನು ,ಮತ್ತು ಹಣಕಾಸು ಕಾರ್ಯದರ್ಶಿ ಯಾಗಿ ಶಮೀರ್ ಪಲಿಮಾರ್ , ಸಮಿತಿಯ ಅಭಿವೃದ್ಧಿ ಅಧ್ಯಕ್ಷರಾಗಿ ಮುಹಮ್ಮದ್ ಅಲಿ ಕೃಷ್ಣಾಪುರ ಮತ್ತು ಸಂವಹನ ಕಾರ್ಯದರ್ಶಿಯಾಗಿ ಅಶ್ರಫ್ ನಾಳ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯ್ತು.
ಡಿಕೆಯಸ್ಸಿ ಕೇಂದ್ರ ಸಮಿತಿ ದಾಯಿ ಅಬ್ದುರ್ರಶೀದ್ ಸಅದಿ ದುಆ ನೆರವೇರಿಸಿದರು. ಡಿಕೆಯಸ್ಸಿ ದಮ್ಮಾಂ ವಲಯ ಆರ್ಗನೈಝರ್ ಝುಬೈರ್ ಸಖಾಫಿ ಯವರು ಖಿರಾಅತ್ ಪಠಿಸಿದರು. ಅನ್ವರ್ ಪಡುಬಿದ್ರಿ ಸ್ವಾಗತಿಸಿದರು.
ಈ ಕೆಳಗಿನ ಸದಸ್ಯರನ್ನು ಪ್ರಧಾನ ಸಲಹೆಗಾರನ್ನಾಗಿ ನೇಮಿಸಲಾಯಿತು .
ಕೆ ಎಚ್. ರಫೀಖ್ ಸೂರಿಂಜೆ
ಸುಲೈಮಾನ್ ಮಿಲನ್ ಸೂರಿಂಜೆ
ಅಬ್ದುಲ್ ಹಮೀದ್ ಉಳ್ಳಾಲ್
ಅಬ್ದುಲ್ ಹಮೀದ್ ಕಾಪು
ಅಬ್ದುಲ್ ಕರೀಂ ಪಾಣೆಮಂಗಳೂರು
ಹಾತಿಂ ಕೂಳೂರು
ಅಬೂಬಕ್ಕರ್ ಬರ್ವ
ಇಖ್ಬಾಲ್ ಮಲ್ಲೂರ್.
ಕೊನೆಯಲ್ಲಿ ಶಾಫಿ ಶುಐಬ್ ವಂದಿಸಿದರು .
DKSC ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಕಣ್ಣಂಗಾರ್, ದಮ್ಮಾಮ್ ವಲಯಾಧ್ಯಕ್ಷ ಅಬ್ದುಲ್ ಹಮೀದ್ ಕಾಪು, ಉಸ್ಮಾನ್ ಹೊಸಂಗಡಿ, ಜುಬೈಲ್ ಯೂತ್ ವಿಂಗ್ ಸಾಮಿತ್ ಪಡುಬಿದ್ರಿ, ದಮ್ಮಾಂ ಘಟಕ ಅಧ್ಯಕ್ಷ ಜಮಾಲ್ ಸ್ವಾಲಿಹ್ ಕಣ್ಣಂಗಾರ್, ತುಖ್ಬ ಘಟಕದ ಅಧ್ಯಕ್ಷ ಜೆಪ್ಪು ಮುಹಮ್ಮದ್ ಹನೀಫ್ ಸಭೆಯಲ್ಲಿ ಉಪಸ್ಥಿತರಿದ್ದರು .
ಡಿಕೆಯಸ್ಸಿ ದಮ್ಮಾಂ, ಅಲ್ ಖೋಬರ್, ತುಖ್ಬ, ಜುಬೈಲ್, ಫ್ಯಾಮಿಲಿ ಮುಲಾಖಾತ್ ಸಮಿತಿ ಮತ್ತು ಜುಬೈಲ್ ಯೂತ್ ವಿಂಗ್ ಘಟಕದ ಸದಸ್ಯರು ಸಮಾರಂಭದಲ್ಲಿ ಹಾಜರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ