ಬೆಂಗಳೂರು/ಪಾಲಕ್ಕಾಡ್: ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನಾ ಶಾಫಿ ಸಅದಿ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಕಟಿಸಿದ ಆರೋಪದ ಮೇಲೆ ‘ಮಿನಾರಂ’ ಎಂಬ ಮಲಯಾಳಂ ಡಿಜಿಟಲ್ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ.
ಇತ್ತೀಚೆಗೆ ಮಿನಾರಂ ಪತ್ರಿಕೆಯು ಶಾಫಿ ಸಅದಿಯವರು ಕೇರಳದ ತ್ರಿತಾಲ ವಿಧಾನಸಭಾ ಕ್ಷೇತ್ರದ ಯುಡಿಎಫ್ ಅಭ್ಯರ್ಥಿ ವಿ.ಟಿ. ಬಲರಾಂ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಾರೆ ಎಂಬ ಅರ್ಥ ಬರುವ ವರದಿಯನ್ನು ಪ್ರಕಟಿಸಿತ್ತು. ಆದರೆ, ಇದು ಸಂಪೂರ್ಣ ಸತ್ಯಕ್ಕೆ ದೂರವಾದ ಮತ್ತು ದಾರಿ ತಪ್ಪಿಸುವ ಸುದ್ದಿಯಾಗಿದೆ ಎಂದು ಶಾಫಿ ಸಅದಿ ಅವರ ಕಾನೂನು ವಿಭಾಗ ಸ್ಪಷ್ಟಪಡಿಸಿದೆ.
ನರ್ಸ್ಗಳ ಸಮಸ್ಯೆಗಳ ಕುರಿತು ಚರ್ಚಿಸಲು ಯುನೈಟೆಡ್ ನರ್ಸಸ್ ಅಸೋಸಿಯೇಷನ್ (UNA) ರಾಷ್ಟ್ರೀಯ ಅಧ್ಯಕ್ಷರಾದ ಜಾಸ್ಮಿನ್ ಶಾ ಹಾಗೂ ಕೇರಳ ರಾಜ್ಯ ಕಾರ್ಯದರ್ಶಿ ಮಿನಿ ಬೋಬಿ ಅವರು ಕರ್ನಾಟಕದ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್. ಜಮೀರ್ ಅಹಮದ್ ಖಾನ್ ಹಾಗೂ ಮೌಲಾನಾ ಶಾಫಿ ಸಅದಿ ಅವರನ್ನು ಭೇಟಿಯಾಗಿದ್ದರು. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಕೇರಳ ಮೂಲದ ನರ್ಸ್ಗಳ ಬೇಡಿಕೆಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಗಿತ್ತು.
ಸಚಿವರ ಜೊತೆಗಿನ ಈ ಸೌಜನ್ಯಯುತ ಮತ್ತು ಅಧಿಕೃತ ಸಭೆಯ ಫೋಟೋವನ್ನು ಬಳಸಿಕೊಂಡ ಕೆಲವು ಪಟ್ಟಭದ್ರ ಹಿತಾಸಕ್ತಿಗಳು, ಸಭೆಯಲ್ಲೇ ಇಲ್ಲದ ರಾಜಕೀಯ ವ್ಯಕ್ತಿಯ ಹೆಸರನ್ನು ಸೇರಿಸಿ ಇದೊಂದು ಚುನಾವಣಾ ಪ್ರಚಾರ ಸಭೆ ಎಂದು ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದರು.
ಕ್ಷಮೆಯಾಚಿಸಿದ ಪತ್ರಿಕೆ, ಮುಂದುವರಿದ ಕಾನೂನು ಸಮರ:
ವರದಿಯ ಗಂಭೀರತೆಯನ್ನು ಅರಿತ ಮಿನಾರಂ ಪತ್ರಿಕೆಯ ಸಂಪಾದಕೀಯ ವಿಭಾಗವು, ಸಾಮಾಜಿಕ ಜಾಲತಾಣಗಳಲ್ಲಿ ಬಂದ ತಪ್ಪು ಸಂದೇಶಗಳನ್ನು ನಂಬಿ ಈ ವರದಿ ಮಾಡಲಾಗಿತ್ತು ಎಂದು ಒಪ್ಪಿಕೊಂಡಿದೆ. ಈಗಾಗಲೇ ತನ್ನ ಜಾಲತಾಣದಿಂದ ಈ ಸುದ್ದಿಯನ್ನು ಅಳಿಸಿಹಾಕಿದ್ದು, ತಪ್ಪಿನ ಅರಿವಾಗಿದೆ ಎಂದು ತಿಳಿಸಿದೆ.
ಆದರೆ, ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಮತ್ತು ಮಾಧ್ಯಮ ಧರ್ಮವನ್ನು ಗಾಳಿಗೆ ತೂರಿ ಬೇಜವಾಬ್ದಾರಿಯಿಂದ ವರ್ತಿಸಿದ ಕಾರಣಕ್ಕಾಗಿ, ಪಾಲಕ್ಕಾಡ್ ಮೂಲದ ಮಿನಾರಂ ಪಬ್ಲಿಷರ್ಸ್ ವಿರುದ್ಧ ಶಾಫಿ ಸಅದಿ ಅವರ ಕಾನೂನು ತಂಡವು ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದೆ.
“ಸಮಾಜದಲ್ಲಿ ಗೌರವಯುತ ಸ್ಥಾನ ಹೊಂದಿರುವ ವ್ಯಕ್ತಿಗಳ ವಿರುದ್ಧ ಇಂತಹ ಷಡ್ಯಂತ್ರ ರೂಪಿಸುವುದು ಖಂಡನೀಯ. ಮಾಧ್ಯಮಗಳು ವರದಿ ಮಾಡುವ ಮುನ್ನ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು,” ಎಂದು ಶಾಫಿ ಸಅದಿ ಅವರ ಪರವಾಗಿ ಕಾನೂನು ವಿಭಾಗದ ಪ್ರಕಟಣೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ