ಬೆಳ್ಳಾರೆ, ಏಪ್ರಿಲ್ 17:ಶತಮಾನಗಳ ಇತಿಹಾಸ ಹೊಂದಿರುವ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳ ಸಮನ್ವಯ ಕೇಂದ್ರವಾಗಿ ಗುರುತಿಸಿಕೊಂಡಿರುವ ಬೈತಡ್ಕ ಜುಮಾ ಮಸೀದಿ ಮತ್ತು ದರ್ಗಾ ಶರೀಫ್ ಭಾವೈಕ್ಯತೆಯ ಪ್ರತೀಕವಾಗಿದೆ. ಇಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ಅತ್ಯಂತ ವಿಜೃಂಭಣೆಯಿಂದ ನಡೆಯುವ ‘ಉರೂಸ್’ ಕಾರ್ಯಕ್ರಮವು ಈ ಬಾರಿಯೂ ಸಡಗರದಿಂದ ಸಜ್ಜಾಗುತ್ತಿದೆ.
ಸಕ್ಕರೆ ಸಂಗ್ರಹದ ಮೂಲಕ ಸೇವೆ:
ಉರೂಸ್ ಸಂದರ್ಭದಲ್ಲಿ ಆಗಮಿಸುವ ಸಾವಿರಾರು ಭಕ್ತಾದಿಗಳಿಗೆ ತಂಪು ಪಾನೀಯ ವಿತರಿಸಲು ಅಗತ್ಯವಿರುವ 1,000 ಕೆ.ಜಿ (ಒಂದು ಟನ್) ಸಕ್ಕರೆಯನ್ನು ಸಂಗ್ರಹಿಸುವ ಮೂಲಕ “ಮಾಲೆಂಗ್ರಿ ಫ್ರೆಂಡ್ಸ್ ವಾಟ್ಸಾಪ್ ಗ್ರೂಪ್” ತನ್ನ ಸಾಮಾಜಿಕ ಬದ್ಧತೆಯನ್ನು ಮೆರೆದಿದೆ. ಅಡ್ಮಿನ್ ಶಾಫಿ ಬಿ.ಎಂ. ಮಾಲೆಂಗ್ರಿ ಅವರ ನೇತೃತ್ವದಲ್ಲಿ, ಗ್ರೂಪ್ನ ಸದಸ್ಯರು ಜಾತಿ-ಮತದ ಭೇದವಿಲ್ಲದೆ ಒಟ್ಟಾಗಿ ಎರಡನೇ ಬಾರಿಗೆ ಈ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಸಂಗ್ರಹಿಸಲಾದ ಸಕ್ಕರೆಯನ್ನು ಇಂದು (ಶುಕ್ರವಾರ) ಮಧ್ಯಾಹ್ನ ದರ್ಗಾ ಸಮಿತಿಗೆ ಹಸ್ತಾಂತರಿಸಲಾಗಿದ್ದು, ತಂಡದ ಈ ಕಾರ್ಯವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.
ನಿರಂತರ ಸಾಮಾಜಿಕ ಕಾರ್ಯಗಳು:
ಈ ವಾಟ್ಸಾಪ್ ತಂಡ ಕೇವಲ ಧಾರ್ಮಿಕ ಕಾರ್ಯಗಳಿಗೆ ಮಾತ್ರ ಸೀಮಿತವಾಗಿಲ್ಲ. ಕಳೆದ ತಿಂಗಳಷ್ಟೇ ಇದೇ ಗ್ರೂಪ್ ಮೂಲಕ ಸುಮಾರು 2.5 ಲಕ್ಷ ರೂಪಾಯಿ ದೇಣಿಗೆ ಸಂಗ್ರಹಿಸಿ, ಊರಿನ ರಸ್ತೆ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿ ಜನಸಾಮಾನ್ಯರ ಮೆಚ್ಚುಗೆ ಗಳಿಸಿತ್ತು.
ಮಹತ್ವದ ನಿರ್ಧಾರ: 10 ಬಡ ಕುಟುಂಬಗಳಿಗೆ ಮನೆ
ಈ ವರ್ಷದ ಬೈತಡ್ಕ ಉರೂಸ್ ಕೇವಲ ಸಂಪ್ರದಾಯಗಳಿಗೆ ಸೀಮಿತವಾಗದೆ, ನೈಜ ಮಾನವೀಯತೆಯನ್ನು ಪ್ರತಿಬಿಂಬಿಸಲಿದೆ. ಇದರ ಅಂಗವಾಗಿ 10 ಬಡ ಕುಟುಂಬಗಳಿಗೆ ಉಚಿತವಾಗಿ ಮನೆಗಳನ್ನು ನಿರ್ಮಿಸಿ ಹಸ್ತಾಂತರಿಸುವ ಐತಿಹಾಸಿಕ ಮತ್ತು ಮಾದರಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಬೈತಡ್ಕ ಉರೂಸ್ ಸಾಮಾಜಿಕ ಕಳಕಳಿಯ ಹೊಸ ಆಯಾಮವನ್ನು ಪಡೆದುಕೊಂಡಿದೆ.
ವರದಿ: ಮನ್ಸೂರ್ ಬೆಳ್ಳಾರೆ
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ