ಮದೀನಾ ಮುನವ್ವರಃ : ಪ್ರಸಕ್ತ ಸಾಲಿನ ಪವಿತ್ರ ಹಜ್ ಕರ್ಮವನ್ನು ನಿರ್ವಹಿಸಲು ಭಾರತದಿಂದ ಹೊರಟ ಯಾತ್ರಾರ್ಥಿಗಳ ಮೊದಲ ತಂಡವು ಮದೀನಾದ ಪ್ರಿನ್ಸ್ ಮುಹಮ್ಮದ್ ಬಿನ್ ಅಬ್ದುಲ್ ಅಝೀಝ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯಶಸ್ವಿಯಾಗಿ ತಲುಪಿದೆ. ಈ ಮೂಲಕ ಈ ವರ್ಷದ ಹಜ್ ಯಾತ್ರೆಗಾಗಿ ವಿದೇಶಿ ಯಾತ್ರಿಕರ ಆಗಮನ ಪ್ರಕ್ರಿಯೆ ಅಧಿಕೃತವಾಗಿ ಚಾಲನೆ ಪಡೆದಿದೆ.
ಅದ್ದೂರಿ ಸ್ವಾಗತ:
ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತೀಯ ಯಾತ್ರಿಕರನ್ನು ಸೌದಿ ಅರೇಬಿಯಾದಲ್ಲಿನ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು, ಹಜ್ ಮಿಷನ್ ಪದಾಧಿಕಾರಿಗಳು ಹಾಗೂ ಹಜ್ ಸ್ವಯಂಸೇವಕ ಸಂಘಟನೆಗಳು ಆತ್ಮೀಯವಾಗಿ ಬರಮಾಡಿಕೊಂಡವು. ವಿಮಾನ ನಿಲ್ದಾಣದಿಂದ ವಿಶೇಷ ಬಸ್ಗಳ ಮೂಲಕ ಯಾತ್ರಾರ್ಥಿಗಳನ್ನು ನಿಗದಿತ ವಸತಿ ಕೇಂದ್ರಗಳಿಗೆ ಕರೆದೊಯ್ಯಲಾಯಿತು. ಈ ವೇಳೆ ಕೆಸಿಎಫ್ (KCF) ಸಂಘಟನೆಯ ಕಾರ್ಯಕರ್ತರು ಹೂಗುಚ್ಛಗಳನ್ನು ನೀಡಿ ಯಾತ್ರಾರ್ಥಿಗಳನ್ನು ಸ್ವಾಗತಿಸಿ, ಅವರಿಗೆ ಅಗತ್ಯ ಮಾರ್ಗದರ್ಶನ ನೀಡಿದರು.
ಮದೀನಾಕ್ಕೆ ಆಗಮಿಸಿರುವ ಯಾತ್ರಿಕರು ಎಂಟು ದಿನಗಳ ಕಾಲ ಇಲ್ಲಿನ ಪವಿತ್ರ ಮಸ್ಜಿದುನ್ನಬವಿಯಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿದ ನಂತರ ಅವರು ಮಕ್ಕಾದತ್ತ ಪ್ರಯಾಣ ಬೆಳೆಸಲಿದ್ದಾರೆ.
1.75 ಲಕ್ಷಕ್ಕೂ ಅಧಿಕ ಯಾತ್ರಿಕರು:
ಭಾರತದಿಂದ ಈ ಬಾರಿ ಒಟ್ಟು 1,75,000 ಕ್ಕೂ ಅಧಿಕ ಯಾತ್ರಾರ್ಥಿಗಳು ಹಜ್ ಕರ್ಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ. ಯಾತ್ರಾರ್ಥಿಗಳ ಸುಗಮ ಪ್ರಯಾಣ ಮತ್ತು ಉಳಿದುಕೊಳ್ಳುವಿಕೆಗಾಗಿ ಭಾರತೀಯ ಹಜ್ ಸಮಿತಿಯು ಸೌದಿ ಸರ್ಕಾರದ ಸಹಯೋಗದೊಂದಿಗೆ ಸಕಲ ವ್ಯವಸ್ಥೆಗಳನ್ನು ಮಾಡಿಕೊಂಡಿದೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ