ಪುತ್ತೂರು: ಎಸ್.ವೈ.ಎಸ್ (SYS) ರಾಜ್ಯ ಸಮಿತಿಯ ವತಿಯಿಂದ ಆಯೋಜಿಸಲಾದ ‘ಮಾದರಿ ಮದುವೆ’ ಜನ ಜಾಗೃತಿ ಆಂದೋಲನದ ಮಹತ್ವಪೂರ್ಣ ಸಮಾರೋಪ ಸಮಾರಂಭವು ಮೇ 2 ರಂದು ಶನಿವಾರ ಸಂಜೆ 4:00 ಗಂಟೆಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ನಡೆಯಲಿದೆ.
ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ (ಎ.ಪಿ. ಉಸ್ತಾದ್) ರವರ ಘನ ಸಾನಿಧ್ಯದಲ್ಲಿ ಈ ಸಮಾರಂಭವು ಜರುಗಲಿದೆ.
ಈ ಐತಿಹಾಸಿಕ ಸಮಾರೋಪ ಸಮಾರಂಭದ ವ್ಯಾಪಕ ಪ್ರಚಾರಾರ್ಥವಾಗಿ ಎಸ್.ವೈ.ಎಸ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಸಮಿತಿಯು ಜಿಲ್ಲಾದ್ಯಂತ ಬೃಹತ್ ‘ವಾಹನ ಸಂದೇಶ ಜಾಥಾ’ವನ್ನು ಹಮ್ಮಿಕೊಂಡಿದೆ.
25 ಕೇಂದ್ರಗಳಲ್ಲಿ ಸಂಚರಿಸಲಿರುವ ಜಾಥಾ:
ಎಸ್.ವೈ.ಎಸ್ ದ.ಕ. ವೆಸ್ಟ್ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷರಾದ ಮಹ್ಬೂಬ್ ಸಖಾಫಿ ಕಿನ್ಯ ರವರ ನೇತೃತ್ವದಲ್ಲಿ ಈ ವಾಹನ ಜಾಥಾವು ನಡೆಯಲಿದೆ. ಎಪ್ರಿಲ್ 28 ಮಂಗಳವಾರ ಮತ್ತು ಎಪ್ರಿಲ್ 29 ಬುಧವಾರದಂದು ಎರಡು ದಿನಗಳ ಕಾಲ ವೆಸ್ಟ್ ಜಿಲ್ಲಾ ವ್ಯಾಪ್ತಿಯ ಪ್ರಮುಖ 25 ಕೇಂದ್ರಗಳಲ್ಲಿ ಜಾಥಾವು ಸಂಚರಿಸಿ, ಸಮಾರೋಪ ಸಮಾರಂಭದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಿದೆ.
ಆಂದೋಲನದ ಯಶಸ್ಸಿಗೆ ಮತ್ತು ಸಮಾರೋಪ ಸಮಾರಂಭದ ಪೂರ್ವಭಾವಿ ಪ್ರಚಾರಕ್ಕಾಗಿ ಈ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಸ್.ವೈ.ಎಸ್ ದ.ಕ. ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ