ರಿಯಾದ್: ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದಲ್ಲಿ ನಡೆದ ಭೀಕರ ಅಪಘಾತದಲ್ಲಿ ಕೇರಳದ ಯುವಕನೊಬ್ಬ ಮೃತಪಟ್ಟಿದ್ದಾರೆ.
ಕೋಝಿಕೋಡ್ನ ಕೂಟಾಲಿಡ ನಡುವಣ್ಣೂರ್ ಮೂಲದ ಮುಹಮ್ಮದ್ ಅಜ್ಮಲ್ (27) ಎಂಬುವವರೇ ಮೃತಪಟ್ಟ ದುರ್ದೈವಿ. ಗುರುವಾರ ಇವರು ಕೆಲಸದ ನಿಮಿತ್ತ ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಅಜ್ಮಲ್ ಅವರು ಅಲ್ಲಿನ ಬೇಕರಿಯೊಂದರಲ್ಲಿ ಸೇಲ್ಸ್ಮನ್ ಆಗಿ ಕೆಲಸ ಮಾಡುತ್ತಿದ್ದು, ಘಟನೆಯ ದಿನದಂದು ಅವರು ವ್ಯಾನ್ನಲ್ಲಿ ಖುಬ್ಝ್ (ರೊಟ್ಟಿ) ವಿತರಣೆಗಾಗಿ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿ ವ್ಯಾಪಿಸಿದ್ದು, ವ್ಯಾನ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ವಾಹನದೊಳಗೆ ಸಿಲುಕಿಕೊಂಡಿದ್ದ ಅಜ್ಮಲ್ ಅವರು ತೀವ್ರವಾಗಿ ಸುಟ್ಟ ಗಾಯಗಳಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಜ್ಮಲ್ ಅವರು ಅಬ್ದುಲ್ ಅಜೀಜ್ ಮತ್ತು ರಝಿಯಾ ದಂಪತಿಯ ಪುತ್ರ. ಅವಿವಾಹಿತರಾಗಿದ್ದ ಇವರು ಉದ್ಯೋಗಕ್ಕಾಗಿ ಸೌದಿಗೆ ತೆರಳಿ ಕೇವಲ ಒಂಬತ್ತು ತಿಂಗಳು ಕಳೆಯುವಷ್ಟರಲ್ಲಿ ಈ ದುರಂತ ಸಂಭವಿಸಿದೆ.
ಪ್ರಸ್ತುತ ಮೃತದೇಹವನ್ನು ಅಲ್-ಅಹ್ಸಾದ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಮೃತದೇಹವನ್ನು ತಾಯ್ನಾಡಿಗೆ ಕಳುಹಿಸಲು ಪ್ರಯತ್ನಗಳು ನಡೆಯುತ್ತಿವೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ