ನರಿಂಗಾನ: ಅನಾಥ ಮತ್ತು ಬಡ ಮಕ್ಕಳ ಆಶಾಕಿರಣ, ಮಂಜನಾಡಿ ಅಲ್ ಮದೀನ ಇಸ್ಲಾಮಿಕ್ ಕಾಂಪ್ಲೆಕ್ಸ್ನ ಶಿಲ್ಪಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಉಚಿತ ಸಾಮೂಹಿಕ ವಿವಾಹ ಮತ್ತು ಶೈಕ್ಷಣಿಕ ಕ್ರಾಂತಿಯ ಹರಿಕಾರರಾಗಿದ್ದ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಅವರ ಏಳನೇ ವರ್ಷದ ಅನುಸ್ಮರಣೆ ಮತ್ತು ಪ್ರಾರ್ಥನಾ ಸಂಗಮವು (ಆಂಡ್ ನೇರ್ಚೆ) 2026 ಮೇ 13 ಮತ್ತು 14 ರಂದು ಅಲ್ ಮದೀನ ಮಂಜನಾಡಿ ಕ್ಯಾಂಪಸ್ನಲ್ಲಿ ನಡೆಯಲಿದೆ.
ಸಾರ್ವಕಾಲಿಕ ಮಾದರಿ ಪುರುಷರಾದ ಉಸ್ತಾದರ ಜೀವನ ಸಂದೇಶ ಹಾಗೂ ಅವರು ಸಮಾಜಕ್ಕೆ ನೀಡಿದ ಉದಾತ್ತ ಜ್ಞಾನ ಸೇವೆಯನ್ನು ಹೊಸ ತಲೆಮಾರಿಗೆ ತಲುಪಿಸುವ ಉದ್ದೇಶದಿಂದ ಈ ಎರಡು ದಿನಗಳ ಆಧ್ಯಾತ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಮೇ 13 ಬುಧವಾರ ಬೆಳಿಗ್ಗೆ ಆರು ಗಂಟೆಗೆ ಸಯ್ಯಿದ್ ಜಲಾಲುದ್ದೀನ್ ತಂಙಳ್ ಮಲ್ಹರ್ ರವರ ನೇತೃತ್ವದಲ್ಲಿ ಖತಮುಲ್ ಕುರ್ಆನ್ ಮತ್ತು ಮೌಲಿದ್ ಮಜ್ಲಿಸ್ ನಡೆಯಲಿದೆ. ಅದೇ ದಿನ ರಾತ್ರಿ 7ಕ್ಕೆ ಸಯ್ಯಿದ್ ಮುಖ್ತಾರ್ ತಂಙಳ್ ಕುಂಬೋಲ್ ರವರ ನೇತೃತ್ವದಲ್ಲಿ ಜಲಾಲಿಯಾ ಮಜ್ಲಿಸ್ ನಡೆಯಲಿದೆ.
ಮೇ 14ನೇ ಗುರುವಾರ ಸಂಜೆ 4 ಗಂಟೆಗೆ ಅನಿವಾಸೀ ಭಾರತೀಯರ ಸ್ನೇಹ ಸಂಗಮ (ಗಲ್ಫ್ ಮೀಟ್) ನಡೆಯಲಿದೆ.. ಅದೇ ದಿನ ರಾತ್ರಿ ಮಗ್ರಿಬ್ ನಮಾಜಿನ ನಂತರ ಅಲ್ ಮದಿನ ಪ್ರಧಾನ ಕಾರ್ಯದರ್ಶಿ; ಅಬ್ದುಲ್ ಖಾದರ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾವೇಶ ನಡೆಯಲಿದೆ. ಯೆನಪೋಯ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಹಾಜಿ ಯೇನೆಪೋಯ ಅಬ್ದುಲ್ಲ ಕುಂಞಿ ಸಮಾವೇಶವನ್ನು ಉದ್ಘಾಟಿಸಲಿರುವರು . ಸಯ್ಯಿದ್ ಮಸೂದ್ ತಂಙಳ್ ಕೂರತ್ ಪ್ರಾರ್ಥನೆ ನಡೆಸುವರು. ಖ್ಯಾತ ವಾಗ್ಮಿ ನೌಫಲ್ ಸಖಾಪಿ ಕಳಸ ಮುಖ್ಯ ಪ್ರಭಾಷಣ ಮಾಡಲಿರುವರು. ಮೌಲಾನಾ ಪೇರೋಡ್ ಅಬ್ದುಲ್ ರಹಮಾನ್ ಸಖಾಫಿ ಸಮಾರೋಪ ಭಾಷಣ ಮಾಡಲಿದ್ದಾರೆ. ನೂರುಸ್ಸಾದಾತ್ ಸಯ್ಯಿದ್ ಬಾಯಾರ್ ತಂಙಳ್ ಸಮಾರೋಪ ದುವಾ ನೆರವೇರಿಸಲಿರುವರು.
ಗಣ್ಯರ ಉಪಸ್ಥಿತಿ:
ಕಾರ್ಯಕ್ರಮದಲ್ಲಿ ಝೈನುಲ್ ಉಲಮಾ ಮಾಣಿ ಉಸ್ತಾದ್,ವಿಧಾನಸಭಾ ಸ್ಪೀಕರ್ ಹಾಜಿ ಯು.ಟಿ. ಖಾದರ್ ಫರೀದ್, ಸಯ್ಯಿದ್ ಇಸ್ಮಾಯಿಲ್ ತಂಙಳ್ ಅಲ್ ಹಾದೀ ಉಜಿರೆ, ಡಾ. ಮುಹಮ್ಮದ್ ಫಾಝಿಲ್ ರಝ್ವಿ, ಡಾ. ಇಫ್ತಿಕಾರ್ ಫರೀದ್ ಸೇರಿದಂತೆ ರಾಜ್ಯ ಜಂಇಯ್ಯತುಲ್ ಉಲಮಾ, ಕೆ.ಸಿ.ಎಫ್, ಕೆ.ಎಂ.ಜೆ, ಎಸ್.ಎಂ.ಎ, ಎಸ್.ಜೆ.ಎಂ, ಎಸ್.ವೈ.ಎಸ್, ಎಸ್.ಎಸ್.ಎಫ್ ಸಂಘಟನೆಗಳ ನಾಯಕರು, ವಿವಿಧ ಮಸೀದಿ-ಮದ್ರಸಗಳ ಅಧ್ಯಕ್ಷರು ಹಾಗೂ ಉಸ್ತಾದರುಗಳು ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸ್ವಾಗತ ಸಮಿತಿ ಚೇರ್ಮನ್ ಹಾಜಿ ಎನ್.ಎಸ್. ಕರೀಂ, ಕನ್ವೀನರ್ ಕೆ.ಎಂ.ಕೆ. ಮಂಜನಾಡಿ, ಮುಹಮ್ಮದ್ ಕುಂಞಿ ಅಮ್ಜದಿ, ಅಬ್ದುಲ್ ರಹ್ಮಾನ್ ಮದನಿ ನೆಕ್ಕರೆ ಮತ್ತು ಅಬ್ದುಲ್ ರಝಾಕ್ ಮಾಸ್ಟರ್ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ