ರಿಯಾದ್: ಸೌದಿ ಅರೇಬಿಯಾದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ಕೋಝಿಕ್ಕೋಡ್ ಮೂಲದ ಅಬ್ದುಲ್ ರಹೀಮ್ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ. ರಹೀಮ್ ಅವರ ಬಿಡುಗಡೆಗೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳು ಅಂತಿಮ ಹಂತಕ್ಕೆ ತಲುಪಿವೆ ಎಂದು ರಿಯಾದ್ನಲ್ಲಿರುವ ರಹೀಮ್ ಕಾನೂನು ಸಹಾಯ ಸಮಿತಿ ತಿಳಿಸಿದೆ.
ರಹೀಮ್ ಅವರ ಬಿಡುಗಡೆಗೆ ಅಗತ್ಯವಿರುವ 34 ಕೋಟಿ ರೂಪಾಯಿಗಳ ‘ಬ್ಲಡ್ ಮನಿ’ (ಪರಿಹಾರ ಧನ) ಅನ್ನು ಈಗಾಗಲೇ ನ್ಯಾಯಾಲಯಕ್ಕೆ ಹಸ್ತಾಂತರಿಸಲಾಗಿದೆ. ಇದರ ಬೆನ್ನಲ್ಲೇ ಮೃತ ಬಾಲಕನ ಕುಟುಂಬವು ಕ್ಷಮಾದಾನ ಪತ್ರಕ್ಕೆ ಸಹಿ ಹಾಕಿದೆ. ಈ ದಾಖಲೆಗಳನ್ನು ನ್ಯಾಯಾಲಯವು ಅಂಗೀಕರಿಸಿದ್ದು, ಮರಣದಂಡನೆ ಶಿಕ್ಷೆಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ.
ಪ್ರಸ್ತುತ, ಬಿಡುಗಡೆಗೆ ಸಂಬಂಧಿಸಿದ ಆಡಳಿತಾತ್ಮಕ ಪ್ರಕ್ರಿಯೆಗಳು ನಡೆಯುತ್ತಿವೆ. ರಹೀಮ್ ಅವರ ಬಿಡುಗಡೆ ಆದೇಶಕ್ಕೆ ಸೌದಿ ರಾಜಮನೆತನದ ಅನುಮೋದನೆ ದೊರೆತ ತಕ್ಷಣ ಅವರು ಜೈಲಿನಿಂದ ಹೊರಬರಲಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಈ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಸಮಿತಿಯ ಪದಾಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಳೆದ 18 ವರ್ಷಗಳಿಂದ ಅಬ್ದುಲ್ ರಹೀಮ್ ಜೈಲು ವಾಸ ಅನುಭವಿಸುತ್ತಿದ್ದಾರೆ. ಕನ್ನಡಿಗರು ಸೇರಿದಂತೆ ಪ್ರಪಂಚದಾದ್ಯಂತ ಇರುವ ಮಲಯಾಳಿಗಳು ಅತೀ ಕಡಿಮೆ ಸಮಯದಲ್ಲಿ ಈ ಬೃಹತ್ ಮೊತ್ತವನ್ನು ಕ್ರೋಢೀಕರಿಸುವ ಮೂಲಕ ರಹೀಮ್ ಅವರ ಜೀವ ಉಳಿಸಲು ನೆರವಾಗಿದ್ದರು. ಈ ಪ್ರಕರಣವು ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಗಮನ ಸೆಳೆದಿತ್ತು.
ಶೀಘ್ರದಲ್ಲೇ ರಹೀಮ್ ತಮ್ಮ ತಾಯ್ನಾಡಿಗೆ ಮರಳಲಿದ್ದು, ಅವರ ಸ್ವಾಗತಕ್ಕಾಗಿ ಕುಟುಂಬಸ್ಥರು ಮತ್ತು ನಾಡಿನ ಜನರು ಕಾತರದಿಂದ ಕಾಯುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು
ಡೆಲಿವರಿ ಡ್ರೈವರ್ಗಳಿಗೆ ಹವಾನಿಯಂತ್ರಿತ ವಿಶ್ರಾಂತಿ ಕೇಂದ್ರಗಳು – ದುಬೈ ಆರ್ಟಿಎ ಕೊಡುಗೆ
ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಭೀತಿ: ಬಹ್ರೇನ್ಗೆ ಹೊರಡಬೇಕಿದ್ದ ವಿಮಾನಗಳು ರದ್ದು
ಕುವೈತ್ ವಿಮಾನ ನಿಲ್ದಾಣದ ಮೇಲೆ ಮತ್ತೆ ಡ್ರೋನ್ ದಾಳಿ- ವಿಮಾನ ಸೇವೆಗಳು ತಾತ್ಕಾಲಿಕ ಸ್ಥಗಿತ
ಟಿಕ್ಟಾಕ್ನಲ್ಲಿನ ವೈಶಮ್ಯ : ಶಾರ್ಜಾದಲ್ಲಿ ಭಾರತೀಯನ ಹತ್ಯೆ
ಕುವೈತ್ನಲ್ಲಿ ವಿಮಾನಯಾನ ಸೇವೆಗಳು ಸಹಜ ಸ್ಥಿತಿಗೆ- ಟರ್ಮಿನಲ್ -1 ರಿಂದ ಸೇವೆಗಳು ಪುನರಾರಂಭ
ಎಲ್ಲಾ ದೇಶಗಳಿಗೆ ಉಮ್ರಾ ವೀಸಾ ವಿತರಣೆ ಪುನಾರಂಭ: 90 ದಿನಗಳ ವಾಸ್ತವ್ಯ