ನೆಲ್ಯಾಡಿ: ಬಹುಮುಖ ಯೋಜನೆಗಳೊಂದಿಗೆ ಅಹ್ಲುಸ್ಸುನ್ನತಿ ವಲ್ ಜಮಾಅತಿನ ತತ್ವ ಆದರ್ಶದಡಿ ಕಾರ್ಯಾಚರಣೆ ಪ್ರಾರಂಭಿಸಲಿರುವ ಮರ್ಕಝ್ ದಾರುರಹ್ಮ ಇಸ್ಲಾಮಿಕ್ ಅಕಾಡೆಮಿ ನೆಲ್ಯಾಡಿಯ ದೊಂತಿಲದ ದಾರುರಹ್ಮಾ ಗಾರ್ಡನ್ ನಲ್ಲಿ ಉದ್ಘಾಟನೆಗೊಂಡಿತು.
ಸಂಸ್ಥೆಯ ಅಧ್ಯಕ್ಷರಾದ ಸಯ್ಯಿದ್ ಸಲೀಂ ಅಸ್ಸಖಾಫ್ ತಂಙಳ್ ರವರ ಸಭಾಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರವನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಹು ಉಸ್ಮಾನ್ ಜೌಹರಿ ಉದ್ಘಾಟಿಸಿದರು.ಕಾರ್ಯಕ್ರಮಲ್ಲಿ ಬಹು ಹಂಝ ಮದನಿ ಮಿತ್ತೂರು ಮುಖ್ಯ ಪ್ರಭಾಷಣ ನಡೆಸಿದರು.ಬಹು ಮನ್ಸೂರ್ ಮುಹೀನ್ ಪೇರೆಂಟ್ಸ್ ಶಿಬಿರ ನಡೆಸಿದರು.
ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಹನೀಫ್ ಬಗ್ಗುಮೂಲೆ, ನ್ಯಾಯವಾದಿ ಇಸ್ಮಾಯಿಲ್ ನೋಟರಿ ನೆಲ್ಯಾಡಿ, ನೆಲ್ಯಾಡಿ ಕೇಂದ್ರ ಜುಮ್ಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ವಿ, ಕೌಕ್ರಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಕರಾವಳಿ, ಯುವ ಸಾಮಾಜಿಕ ಮುಖಂಡ ಹಾಜಿ ಇಸ್ಮಾಯಿಲ್ ಕೋಲ್ಪೆ, ಸಂಸ್ಥೆಯ ಜೊತೆ ಕಾರ್ಯದರ್ಶಿ ಎನ್.ಕೆ ಇಸ್ಮಾಯಿಲ್, ನುಸ್ರತುಲ್ ಮಸಾಕೀನ್ ಅಸೋಸಿಯೇಶನ್ ನೆಲ್ಯಾಡಿ ಅಧ್ಯಕ್ಷರಾದ ಅಶ್ರಫ್ ಸಿ.ಎಂ, ನೆಲ್ಯಾಡಿ ಮಸೀದಿಯ ಮಾಜಿ ಅಧ್ಯಕ್ಷರಾದ ಎನ್.ಎಸ್ ಸುಲೈಮಾನ್, ಉದ್ಯಮಿ ತಾಜ್ ಡ್ರೆಸ್ ವೆಲ್, ಪ್ರಚಾರ ಸಮಿತಿ ಚೇರ್ಮೇನ್ ಬಹು ಶಮೀರ್ ಸಹದಿ, ವೈಸ್ ಚೇರ್ಮೆನ್ ರಿಯಾ ಎನ್.ಕೆ ಮುಂತಾದ ಗಣ್ಯರು ಶುಭ ಹಾರೈಸಿದರು. ಮುಸ್ತಫಾ ಪಟ್ಟೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್