ಕಲ್ಲಿಕೋಟೆ: ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಮತ್ತು ಅವರು ಪ್ರ.ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಮರ್ಕಝ್ನ ವಿರುದ್ದ ಸುಳ್ಳು ಸುದ್ದಿ ಪ್ರಚಾರ ಮಾಡುವವರ ವಿರುದ್ಧ ಕುಂದಮಂಗಲಂ ಪೊಲೀಸರಿಗೆ ದೂರು ನೀಡಲಾಗಿತ್ತು. ಇದರನ್ವಯ ಪ್ರಕರಣವನ್ನು ದಾಖಲಿಸಿ ಇಬ್ಬರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ ಪೊಲೀಸರು ಇದು ಗಂಭೀರ ಕ್ರಿಮಿನಲ್ ಅಪರಾಧ ಎಂದಿದ್ದಾರೆ.
2012 ರಲ್ಲಿ, ಯು.ಎಸ್ ದೂತಾವಾಸದ ಹಿರಿಯ ಅಧಿಕಾರಿಗಳು ಮರ್ಕಝ್ಗೆ ಭೇಟಿ ನೀಡಿರುವುದನ್ನು ಅವಹೇಳನಕಾರಿಯಾಗಿ ಮತ್ತು ತಪ್ಪಾಗಿ ಚಿತ್ರೀಕರಿಸಿ ಸಾಮಾಜಿಕ ತಾಣದಲ್ಲಿ ಪ್ರಚಾರ ಪಡಿಸಿದ್ದು ಗಂಭೀರ ಅಪರಾಧವಾಗಿದೆ. ಮರ್ಕಝ್ ಅಥಾರಿಟಿಯೊಂದಿಗೆ ಕ್ಷಮೆ ಯಾಚಿಸಿ ಮತ್ತು ಈ ರೀತಿ ಪುನರಾವರ್ತಿಸುವುದಿಲ್ಲ ಎಂದು ಲಿಖಿತವಾಗಿ ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಕಾರಣ ಎ.ಪಿ. ಉಸ್ತಾದರ ಅನುಮತಿಯೊಂದಿಗೆ ಈ ಬಾರಿ ಹೆಚ್ಚಿನ ಕಾನೂನಾತ್ಮಕ ಕ್ರಮ ಕೈಗೊಂಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಫೇಸ್ಬುಕ್ ಮತ್ತು ವಾಟ್ಸ್ ಆ್ಯಪ್ ನಲ್ಲಿ ಅವರು ಹಂಚಿಕೊಂಡಿದ್ದ ಬರಹಗಳನ್ನು ಹಿಂತೆಗೆದುಕೊಂಡು ಕ್ಷಮೆಯಾಚಿಸಿದ್ದರು.
ಮರ್ಕಝ್ ಮತ್ತು ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಬಗ್ಗೆ ಸುಳ್ಳು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ.
ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡುವವರ ಕುರಿತು ಸ್ಕ್ರೀನ್ ಶಾಟ್ ನೊಂದಿಗೆ ಮೇಲ್ ಮಾಡಿರಿ.
ಮೇಲ್ ID: markazlegal@gmail.com
ಎಂ. ಲುಕ್ಮಾನ್
ಮೀಡಿಯಾ ಇನ್ಚಾರ್ಜ್, ಮರ್ಕಝ್















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ