janadhvani

Kannada Online News Paper

ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

ವೈದ್ಯರ ನಿರ್ಲಕ್ಷ್ಯದಿಂದಾಗಿ ಜೀವ ಕಳೆದುಕೊಂಡ ಕಿನ್ಯ ಗ್ರಾಮದ ಉಕ್ಕುಡ ರಿಫಾಯಿಯ್ಯ ಮದ್ರಸದ 4ನೇ ತರಗತಿ ವಿದ್ಯಾರ್ಥಿ ಮುಹಮ್ಮದ್ ಇಮಾಜ್ ಫರೀದ್

ಮಂಗಳೂರು: ಇತ್ತೀಚೆಗೆ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಾಗಿ ಜೀವ ಕಳೆದುಕೊಂಡ ಕಿನ್ಯ ಗ್ರಾಮದ ಉಕ್ಕುಡ ರಿಫಾಯಿಯ್ಯ ಮದ್ರಸದ 4ನೇ ತರಗತಿ ವಿದ್ಯಾರ್ಥಿ ಮುಹಮ್ಮದ್ ಇಮಾಜ್ ಫರೀದ್ ಅವರ ಕುಟುಂಬಸ್ಥರಿಗೆ ಸೂಕ್ತ ನ್ಯಾಯ ಒದಗಿಸಬೇಕು ಹಾಗೂ ಘಟನೆಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮದ್ರಸ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಕಿನ್ಯ ರೇಂಜ್ ನಿಯೋಗವು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ. ದರ್ಶನ್ ಅವರಿಗೆ ಮನವಿ ಸಲ್ಲಿಸಿತು.

ಕಿನ್ಯ ರೇಂಜ್ ಅಧ್ಯಕ್ಷರಾದ ಇಬ್ರಾಹಿಂ ಕೊಣಾಜೆ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ನಿಯೋಗವು, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ವಿನಂತಿಸಿತು.

ಈ ಸಂದರ್ಭದಲ್ಲಿ ನಿಯೋಗದಲ್ಲಿ ಮದ್ರಸ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ಫಾರೂಕ್ ಕಿನ್ಯ, ಪದಾಧಿಕಾರಿಗಳಾದ ಎಸ್‌ಬಿ ಹನೀಫ್ ಉಚ್ಚಿಲ, ಅಶ್ರಫ್ ಮರಾಟಿಮೂಲೆ, ಬಷೀರ್ ಅಜ್ಜಿನಡ್ಕ, ಉಕ್ಕುಡ ರಿಫಾಯಿಯ್ಯ ಜುಮಾ ಮಸೀದಿ ಹಾಗೂ ಮದ್ರಸ ಅಧ್ಯಕ್ಷರಾದ ಅಬ್ಬಾಸ್ ಕೆ.ಬಿ. ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿರಿ...