ಮದೀನಾ : ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಭಾರತದಿಂದ ಆಗಮಿಸಿದ ಮೊದಲ ಹಜ್ಜಾಜಿಗಳ ತಂಡ ಶನಿವಾರದಂದು ಮದೀನಾ ಮುನವ್ವರದ ಕಿಂಗ್ ಅಬ್ದುಲ್ ಅಝೀಝ್ ವಿಮಾನ ನಿಲ್ದಾಣ ತಲುಪಿತು. ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ಹಜ್ಜ್ ವಾಲೇಂಟಿಯರ್ ಕೋರ್ ಕಾರ್ಯಕರ್ತರು ಹಜ್ಜಾಜಿಗಳಿಗೆ ನೀರು ಹಾಗೂ ಖರ್ಜೂರ ನೀಡಿ ಆದರದಿಂದ ಸ್ವಾಗತಿಸಿದರು.
ನಂತರ ಹಜ್ಜಾಜಿಗಳು ತಂಗುವ ವಸತಿಗಳಿಗೆ ತೆರಳಿದ ಹೆಚ್.ವಿ.ಸಿ ಕಾರ್ಯಕರ್ತರು ಹಜ್ಜಾಜಿಗಳ ಲಗೇಜ್ ಸಾಗಿಸಲು ಸಹಕರಿಸಿದರು. ಈ ವೇಳೆ ಭೇಟಿ ನೀಡಿದ ಭಾರತೀಯ ಕನ್ಸೂಲೆಟ್ ಜನರಲ್ ನೂರ್ ರಹ್ಮಾನ್ ಶೇಖ್, ಹಜ್ಜಾಜಿಗಳಿಗೆ ನೀಡಲಾದ ವಸತಿ ಸೌಲಭ್ಯ ಗಳ ಬಗ್ಗೆ ಪರಿಶೀಲನೆ ನಡೆಸಿದರು. ಹಜ್ಜಾಜಿಗಳ ಸಮಸ್ಯೆ ಬಗೆಹರಿಸಲು ತಕ್ಷಣವೇ ಕ್ರಮಕೈಗೊಳ್ಳುವಂತೆ ಸಿಬ್ಬಂದಿ ಗಳಿಗೆ ತಿಳಿಸಿದರು.
ಇನ್ನು ವಿವಿಧ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ ಅವರು ಹಜ್ಜಾಜಿಗಳ ಸಿಮ್ ಕಾರ್ಡ್, ಲಗೇಜ್ ಮಿಸ್ಸಿಂಗ್ ಸಮಸ್ಯೆ ಪರಿಹರಿಸುವ ಬಗ್ಗೆ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡರು .ದೆಹಲಿ, ಗಯಾ, ಗುವಾಹಟಿ, ಲಕ್ನೊ ಹಾಗೂ ಶ್ರೀ ನಗರ ಸೇರಿದಂತೆ 5 ವಿಮಾನಗಳಲ್ಲಿ 3000ಕ್ಕೂ ಅಧಿಕ ಹಜ್ಜಾಜಿಗಳು ಶನಿವಾರ ದಂದು ಮದೀನಾಕ್ಕೆ ಆಗಮಿಸಿದ್ದಾರೆ. ಈ ವೇಳೆ ಕೆಸಿಎಫ್ ಹೆಚ್.ವಿ.ಸಿ ಮದೀನಾ ಚೇರ್ಮೆನ್ ತಾಜುದ್ದೀನ್ ಸುಳ್ಯ, ಕನ್ವೀನರ್ ರಝಾಕ್ ಸಂತೋಷ್ ನಗರ , ಫಾರೂಖ್ ನಈಮಿ, ಜಬ್ಬಾರ್ ಉಪ್ಪಿನಂಗಡಿ, ರಝಾಕ್ ಬೈತಡ್ಕ,ಅಶ್ರಫ್ ಸಖಾಫಿ ನೂಜಿ,ಅಬೂಬಕ್ಕರ್ ಉದ್ದ ಬೆಟ್ಟು, ಇಕ್ಬಾಲ್ ಕುಪ್ಪೆಪದವು, ಹೈದರ್ ಉದ್ದಬೆಟ್ಟು, ಉಮರ್ ಗೇರುಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.
ವರದಿ:ಹಕೀಮ್ ಬೋಳಾರ್















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ