ಮದೀನಾ : ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಭಾರತದಿಂದ ಆಗಮಿಸಿದ ಮೊದಲ ಹಜ್ಜಾಜಿಗಳ ತಂಡ ಶನಿವಾರದಂದು ಮದೀನಾ ಮುನವ್ವರದ ಕಿಂಗ್ ಅಬ್ದುಲ್ ಅಝೀಝ್ ವಿಮಾನ ನಿಲ್ದಾಣ ತಲುಪಿತು. ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ಹಜ್ಜ್ ವಾಲೇಂಟಿಯರ್ ಕೋರ್ ಕಾರ್ಯಕರ್ತರು ಹಜ್ಜಾಜಿಗಳಿಗೆ ನೀರು ಹಾಗೂ ಖರ್ಜೂರ ನೀಡಿ ಆದರದಿಂದ ಸ್ವಾಗತಿಸಿದರು.
ನಂತರ ಹಜ್ಜಾಜಿಗಳು ತಂಗುವ ವಸತಿಗಳಿಗೆ ತೆರಳಿದ ಹೆಚ್.ವಿ.ಸಿ ಕಾರ್ಯಕರ್ತರು ಹಜ್ಜಾಜಿಗಳ ಲಗೇಜ್ ಸಾಗಿಸಲು ಸಹಕರಿಸಿದರು. ಈ ವೇಳೆ ಭೇಟಿ ನೀಡಿದ ಭಾರತೀಯ ಕನ್ಸೂಲೆಟ್ ಜನರಲ್ ನೂರ್ ರಹ್ಮಾನ್ ಶೇಖ್, ಹಜ್ಜಾಜಿಗಳಿಗೆ ನೀಡಲಾದ ವಸತಿ ಸೌಲಭ್ಯ ಗಳ ಬಗ್ಗೆ ಪರಿಶೀಲನೆ ನಡೆಸಿದರು. ಹಜ್ಜಾಜಿಗಳ ಸಮಸ್ಯೆ ಬಗೆಹರಿಸಲು ತಕ್ಷಣವೇ ಕ್ರಮಕೈಗೊಳ್ಳುವಂತೆ ಸಿಬ್ಬಂದಿ ಗಳಿಗೆ ತಿಳಿಸಿದರು.
ಇನ್ನು ವಿವಿಧ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ ಅವರು ಹಜ್ಜಾಜಿಗಳ ಸಿಮ್ ಕಾರ್ಡ್, ಲಗೇಜ್ ಮಿಸ್ಸಿಂಗ್ ಸಮಸ್ಯೆ ಪರಿಹರಿಸುವ ಬಗ್ಗೆ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡರು .ದೆಹಲಿ, ಗಯಾ, ಗುವಾಹಟಿ, ಲಕ್ನೊ ಹಾಗೂ ಶ್ರೀ ನಗರ ಸೇರಿದಂತೆ 5 ವಿಮಾನಗಳಲ್ಲಿ 3000ಕ್ಕೂ ಅಧಿಕ ಹಜ್ಜಾಜಿಗಳು ಶನಿವಾರ ದಂದು ಮದೀನಾಕ್ಕೆ ಆಗಮಿಸಿದ್ದಾರೆ. ಈ ವೇಳೆ ಕೆಸಿಎಫ್ ಹೆಚ್.ವಿ.ಸಿ ಮದೀನಾ ಚೇರ್ಮೆನ್ ತಾಜುದ್ದೀನ್ ಸುಳ್ಯ, ಕನ್ವೀನರ್ ರಝಾಕ್ ಸಂತೋಷ್ ನಗರ , ಫಾರೂಖ್ ನಈಮಿ, ಜಬ್ಬಾರ್ ಉಪ್ಪಿನಂಗಡಿ, ರಝಾಕ್ ಬೈತಡ್ಕ,ಅಶ್ರಫ್ ಸಖಾಫಿ ನೂಜಿ,ಅಬೂಬಕ್ಕರ್ ಉದ್ದ ಬೆಟ್ಟು, ಇಕ್ಬಾಲ್ ಕುಪ್ಪೆಪದವು, ಹೈದರ್ ಉದ್ದಬೆಟ್ಟು, ಉಮರ್ ಗೇರುಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.
ವರದಿ:ಹಕೀಮ್ ಬೋಳಾರ್















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ