ಪತ್ತನಂತಿಟ್ಟ: ಕೇರಳದಲ್ಲಿ ಬಿರುಸಿನ ಮಳೆಯಾಗುತ್ತಿದ್ದು, ಶುಕ್ರವಾರ ಸಂಜೆ ಹೊತ್ತಿಗೆ ಮಳೆ ನಿಯಂತ್ರಣಕ್ಕೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ರಾಜ್ಯದ ಎಲ್ಲ ಭಾಗಗಳಲ್ಲೂ ಮಳೆಯ ಅಬ್ಬರ ಜೋರಾಗಿದ್ದು ಜಲಾಶಯಗಳು ತುಂಬಿ ಹರಿದಿದೆ. ಇಡುಕ್ಕಿ ಅಣೆಕಟ್ಟಿನಲ್ಲಿ ನೀರಿನ ಹರಿವು ಜಾಸ್ತಿಯಾಗಿದ್ದು, 5 ಶಟರ್ಗಳಲ್ಲಿ ಮೂರು ಶಟರ್ಗಳನ್ನು 1 ಮೀಟರ್ ಮತ್ತು ಎರಡು ಶಟರ್ಗಳನ್ನು 50 ಸೆಂಟಿಮೀಟರ್ನಷ್ಟು ತೆರೆಯಲಾಗಿದೆ, ಶಟರ್ ತೆರೆದು ನೀರು ಹೊರಕ್ಕೆ ಹರಿಯ ಬಿಟ್ಟಿರುವುದರಿಂದ ಚೆರುತೋಣಿ ನಗರ ಸಂಪೂರ್ಣ ಜಲಾವೃತವಾಗಿದೆ. 5ನೇ ಶಟರ್ ತೆರೆದಿರುವುದಿಂದ ಪೆರಿಯಾರ್ ನದಿ ಉಕ್ಕಿ ಹರಿಯುತ್ತಿದೆ. ಪೆರಿಯಾರ್ ನದಿ ತಟದಲ್ಲಿರುವ 6,500 ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಕಾರ್ಯ ಮುಂದುವರಿದಿದೆ.
ಸದ್ಯ ನೀರಿನ ಮಟ್ಟ 2401. 72 ಅಡಿಯಿದೆ, ಅಣೆಕಟ್ಟಿನ ನೀರು ಸಂಗ್ರಹ ಸಾಮರ್ಥ್ಯ 2403 ಅಡಿಯಷ್ಟಿದೆ. ಇಡುಕ್ಕಿ ಜಿಲ್ಲೆಯ ವಾಳತ್ತೋಪ್ಪ್, ಕಂಞುಂಕ್ಕುಳಿ, ಮರಿಯಾಪುರಂ, ವಾತ್ತಿಕ್ಕುಡಿ ಪಂಚಾಯತ್ಗಳು ಪ್ರವಾಹದಿಂದ ನಲುಗಿವೆ. ವಾಳತ್ತೋಪ್ಪಿಲ್ನಲ್ಲಿ 36 ಮತ್ತು ಕಂಞುಂಕ್ಕುಳಿಯಲ್ಲಿ 80 ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ಇಡುಕ್ಕಿಯಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರ ಹರಿಯಬಿಟ್ಟರೆ ಇಡಮಲಯಾರ್ ಅಣೆಕಟ್ಟಿನಲ್ಲಿ ಶಟರ್ ಕೆಳಗಿಳಿಸಿ ನೀರನ್ನು ನಿಯಂತ್ರಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ.
ಸದ್ಯದ ಪರಿಸ್ಥಿತಿಯಲ್ಲಿ ಪೆರಿಯಾರ್ ನದಿ ಇಬ್ಭಾಗವಾಗುವ ಆಲುವಾ ಮಣಪ್ಪುರಂ ಪ್ರದೇಶ ಮುಳುಗಡೆಯಾಗಿದೆ. ಅಂಗಮಾಲಿ, ಕಾಲಡಿ ಮೊದಲಾದ ಪ್ರದೇಶಗಳು ಪ್ರವಾಹ ಭೀತಿಯಲ್ಲಿದೆ. ಪೆರಿಯಾರ್ ನದಿ ತೀರದಲ್ಲಿ ವಾಸಿಸುವರು ಹೆಚ್ಚಿನ ಜಾಗ್ರತೆ ಪಾಲಿಸಬೇಕೆಂದು ಎಂದು ಅಧಿಕೃತರು ಹೇಳಿದ್ದಾರೆ. ಈಗಾಗಲೇ ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಸಾವಿನ ಸಂಖ್ಯೆ 27:ಭಾರೀ ಪ್ರವಾಹದಿಂದಾಗಿ ಶುಕ್ರವಾರ ಸಾವಿನ ಸಂಖ್ಯೆ 27ಕ್ಕೇರಿದೆ ಎಂದು ಬಲ್ಲಮೂಲಗಳು ವರದಿ ಮಾಡಿವೆ. ಗುರುವಾರ ಸಾವಿನ ಸಂಖ್ಯೆ 20 ಆಗಿತ್ತು.















ಇನ್ನಷ್ಟು ಸುದ್ದಿಗಳು
‘ಈದುಲ್ ಫಿತ್ರ್’ ಖುತ್ಬಾ ವೇಳೆ ಇಮಾಮ್ ಕುಸಿದು ಬಿದ್ದು ಮೃತ್ಯು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಬಿಗ್ ಬಾಸ್ ನ ಒಳಗೇನು? ತನಿಖೆಗೆ ಆದೇಶಿಸಿದ ಹೈಕೋರ್ಟ್
ರಹೀಮ್ ವಿಮೋಚನಾ ಅಭಿಯಾನ: ಮೊಬೈಲ್ ಆಪ್ ಸಿದ್ಧಪಡಿಸಿದವರರು ಇವರು
ರಿಯಾಜ್ ಮೌಲವಿ ಹತ್ಯೆ ಪ್ರಕರಣದ ನ್ಯಾಯಾಧೀಶರ ವರ್ಗಾವಣೆಗೆ ಕೆಟಿ ಜಲೀಲ್ ಟೀಕೆ
ರಿಯಾಜ್ ಮೌಲ್ವಿ ಹತ್ಯೆ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶ ವರ್ಗಾವಣೆ
ತಾಂತ್ರಿಕ ವಿವಿಗಳಲ್ಲಿ ಸರ್ಚ್ ಸಮಿತಿ ರಚನೆ ಗೆ ಮುಂದಾದ ಕೇರಳ ಸರಕಾರ- ವಿವಿ ಕುಲಾಧಿಪತಿ ರಾಜ್ಯಪಾಲರಿಗೆ ಸಡ್ಡು
ರಿಯಾಝ್ ಮೌಲವಿ ಹತ್ಯೆ: ತೀರ್ಪಿನಲ್ಲಿ ಪ್ರಾಸಿಕ್ಯೂಷನ್ ಮತ್ತು ತನಿಖಾಧಿಕಾರಿ ವಿರುದ್ಧ ಗಂಭೀರ ಆರೋಪ
ರಿಯಾಝ್ ಮೌಲವಿ ಹತ್ಯೆ: ಅನಿರೀಕ್ಷಿತ ತೀರ್ಪು ನ್ಯಾಯಾಂಗದ ಮೇಲಿನ ನಂಬಿಕೆ ಕಳೆದುಕೊಳ್ಳಲಿದೆ- ಎಸ್ವೈಎಸ್