ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ಸಂಭ್ರಮದ ಈದ್ ಹಬ್ಬ ಆಚರಿಸಲಾಯಿತು. ಎಲಿಮಲೆ ಜುಮಾ ಮಸೀದಿಯಲ್ಲಿ ಪೆರ್ನಾಳ್ ವಿಶೇಷ ಪ್ರಾರ್ಥನೆ ನಡೆಯಿತು. ಈ ಸಂಧರ್ಭದಲ್ಲಿ ಎಲಿಮಲೆ ಮುದರ್ರಿಸ್ ಅಬ್ದುಲ್ ರಝಾಕ್ ಸಖಾಫಿ ಕಳಂಜಿಬೈಲು ರವರು ಪೆರ್ನಾಳ್ ಸಂದೇಶದಲ್ಲಿ ಬಡವರನ್ನು ಮತ್ತು ಅಸಹಾಯಕರನ್ನು ನಿರ್ಲಕ್ಷಿಸಿ ದುಂದು ವೆಚ್ಚಗಳಿಂದ ಮೈಮರೆತು ಜೀವನ ನಡೆಸಿದಾಗ ಅಲ್ಲಾಹನ ಕೋಪಕ್ಕೆ ಕಾರಣವಾಗಿ ಪ್ರಕ್ರತಿ ವಿಕೋಪಗಳು ಸಂಭವಿಸುತ್ತಿದೆ. ಆದ್ದರಿಂದ ಮಾನವ ಪಾಠವನ್ನು ಕಲಿತು ಮುಂದಿನ ಜೀವನದಲ್ಲಿ ಯಶಸ್ಸು ಗಳಿಸಲು ಪ್ರಯತ್ನಿಸಬೇಕು. ಅತಿವ್ರಷ್ಟಿಯಿಂದ ಸಂಕಷ್ಟಕ್ಕೊಳಗಾದ ನಿರಾಶ್ರಿತರಿಗೆ ಮತ್ತು ನಿರ್ಗತಿಕರಾದವರಿಗೆ ಹಬ್ಬದ ಸಂಭ್ರಮಾಚರಣೆಯ ಖರ್ಚಿನ ಬಹುಪಾಲು ಮೀಸಲಿಟ್ಟು ಸಹಾಯ ಮಾಡಬೇಕು ಎಂದು ಕರೆನೀಡಿದರು. ಇದೇ ಸಂಧರ್ಭದಲ್ಲಿ ನಿರ್ಗತಿಕ ಕುಟುಂಬಕ್ಕೆ ಮನೆ ನಿರ್ಮಾಣದ ಸಹಾಯಾರ್ಥ ಧನ ಸಂಗ್ರಹಿಸಲಾಯಿತು. ಬೆಳಿಗ್ಗೆ 8 ಗಂಟೆಯಿಂದಲೇ ಮಸೀದಿಗೆ ಆಗಮಿಸಿದ ಮುಸ್ಲಿಮರು ತಕ್ಬೀರ್ ಮೊಳಗಿಸಿ ಅಲ್ಲಾಹನಿಗೆ ಸ್ತುತಿ ಅರ್ಪಿಸಿದರು.

ನಮಾಜಿನ ಬಳಿಕ ಪರಸ್ಪರ ಆಲಂಗಿಸಿ ಶುಭಾಶಯ ವಿನಿಮಯ ಮಾಡಿ ಸಂಭ್ರಮ ಹಂಚಿಕೊಂಡರು. ಜಮಾ ಅತ್ ಅಧ್ಯಕ್ಷ ಇಕ್ಬಾಲ್ ಎಲಿಮಲೆ, ಆಡಳಿತ ಕಾರ್ಯದರ್ಶಿ ಟಿ.ವೈ.ಇಬ್ರಾಹಿಂ,
ಮಾಜಿ ಅಧ್ಯಕ್ಷರಾದ ಮೂಸ ಹಾಜಿ, ಕಾರ್ಯದರ್ಶಿ ಹನೀಫ್ ಮೆತ್ತಡ್ಕ, ಸದರ್ ಉಸ್ತಾದ್ ಮಹಮೂದ್ ಸಖಾಫಿ, ಜೀರ್ಮುಖಿ ಇಮಾಂ ಸೂಫಿ ಮುಸ್ಲಿಯಾರ್, ಜಿ ಹೆಚ್ ಇಬ್ರಾಹಿಂ, ಮುಹಮ್ಮದ್ ಕುಂಞ ಮೇಲೆ ಬೈಲು ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ