ರಿಯಾದ್: ಇತ್ತೀಚೆಗೆ ರಿಯಾದ್ ನಲ್ಲಿ ಹೃದಯಾಘಾತದಿಂದ ನಿಧನರಾದ ವಿಟ್ಲ ಮೂಲದ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು ಇಲ್ಲಿನ ಎಕ್ಸಿಟ್ 15 ರ ಅಲ್ ರಾಜ್’ಹಿ ಮಸೀದಿಯ ಸಾರ್ವಜನಿಕ ದಫನ ಭೂಮಿಯಲ್ಲಿ ನೆರವೇರಿಸಲಾಯಿತು.
ಬಂಟ್ವಾಳ ತಾಲೂಕಿನ ಕಡಂಬು – ಅನಿಲಕಟ್ಟೆ ನಿವಾಸಿ ಮೋನು ಬ್ಯಾರಿಯ ಹಿರಿಯ ಪುತ್ರ ಮೆಹ್ಮೂದ್ (53) ಕಳೆದ ಇಪ್ಪತ್ತು ವರ್ಷಗಳಿಂದ ಸೌದಿ ಅರೇಬಿಯಾದ ರಿಯಾದ್ ನಲ್ಲಿ ನೌಕರಿ ಮಾಡುತ್ತಿದ್ದು ಇತ್ತೀಚೆಗಷ್ಟೇ ಊರಿಗೆ ಹೋಗಿ ಮರಳಿದ್ದರು ಎನ್ನಲಾಗಿದೆ. ಮೊನ್ನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡು ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಅಂದೇ ಆಸ್ಪತ್ರೆಯಲ್ಲಿ ಅಸುನೀಗಿದ್ದರು.
ಕರಾವಳಿ ಮೂಲದ ವ್ಯಕ್ತಿಯೊಬ್ಬರ ನಿಧನವಾಗಿದೆ ಎಂಬ ಸುದ್ದಿ ಸಿಕ್ಕಿದ ತಕ್ಷಣ ಆಸ್ಪತ್ರೆಗೆ ಧಾವಿಸಿದ ಕರ್ನಾಟಕ ಕಲ್ಚರಲ್ ಫೌಂಡೇಶನ್ ರಿಯಾದ್ ಝೋನ್ ಕಾರ್ಯಕರ್ತರು ಮೃತರ ಆಪ್ತರು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಮೃತ ವ್ಯಕ್ತಿಯ ಮರಣೋತ್ತರ ಕ್ರಿಯೆಗೆ ಅಗತ್ಯ ಬರುವ, ವಿವಿಧ ಮೂಲಗಳಿಂದ ಸಂಗ್ರಹಿಸಬೇಕಾದ ದಾಖಲೆ ಪತ್ರಗಳನ್ನು ತ್ವರಿತ ಗತಿಯಲ್ಲಿ ಸರಿಪಡಿಸಿ, ಕುಟುಂಬದ ಅನುಮತಿ ಪಡೆದು ಇಲ್ಲೇ ದಫನ ಮಾಡಲಾಯಿತು.
ಸೌದಿ ಅರೇಬಿಯಾದ ವಲಸೆ ನೀತಿಯಡಿಯಲ್ಲಿ ಬರುವ ಕಾನೂನಿನಂತೆ ಇಲ್ಲಿ ಮೃತರಾಗುವ ವ್ಯಕ್ತಿಗಳ ಮೃತದೇಹವನ್ನು ವಾರಸುದಾರರಿಗೆ ಬಿಟ್ಟು ಕೊಡಬೇಕಾದರೆ ಅನೇಕ ಇಲಾಖೆಗಳಿಂದ ಕಡತಗಳನ್ನು ಸರಿಪಡಿಸಬೇಕಾದ ಅಗತ್ಯವಿದೆ. ಅದೇ ರೀತಿ ಊರಿನ ಕುಟುಂಬ ವರ್ಗದ ಅನುಮತಿ ಪತ್ರ ಕೂಡ ತರಿಸಬೇಕು. ಈಯೆಲ್ಲ ಕೆಲಸಗಳನ್ನೂ ತನ್ನ ಸ್ವಂತ ಕೆಲಸವನ್ನು ಬದಿಗಿಟ್ಟು ಎರಡೇ ದಿನಗಳಲ್ಲಿ ಮಾಡಿ ಮುಗಿಸಿದ ಕೆಸಿಎಫ್ ರಿಯಾದ್ ಝೋನ್ ಮುಖಂಡ ಮಜೀದ್ ವಿಟ್ಲ ರವರಿಗೆ ಮೃತರ ಕುಟುಂಬವು ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದೆ.
ಇಲ್ಲಿನ ಎಕ್ಸಿಟ್ 15 ರ ಅಲ್ ರಾಜ್’ಹಿ ಮಸೀದಿಯಲ್ಲಿ ನಡೆದ ಜನಾಝ ನಮಾಝ್ ಹಾಗೂ ಅಂತ್ಯ ಕ್ರಿಯೆಯಲ್ಲಿ ಮೃತರ ಸಹೋದರ ಹಮೀದ್, ಮೃತರ ಆಪ್ತರು, ಇತರ ಕುಟುಂಬ ಮಿತ್ರಾದಿಗಳು, ಸ್ಥಳೀಯ ನಿವಾಸಿಗಳು, ಕೆಸಿಎಫ್ ಕಾರ್ಯಕರ್ತರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ