ಬೆಂಗಳೂರು : (ಜನಧ್ವನಿ ವಾರ್ತೆ) ಭೀಕರ ಮಳೆಯಿಂದ ತತ್ತರಿಸಿ ಮನೆಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿರುವ ಕೊಡಗಿನ ಜನತೆಗೆ ವಸತಿ ಸೌಲಭ್ಯಗಳನ್ನು ಒದಗಿಸಿಕೊಡಲು ಕೊಡಗು ಜಿಲ್ಲಾ ಪಂಚಾಯತ್ ಸದಸ್ಯರೂ, ಕೊಡಗು ಜಿಲ್ಲಾ ಸುನ್ನೀ ಮ್ಯಾನೇಜ್ಮೆಂಟ್ ಅಧ್ಯಕ್ಷರೂ ಆಗಿರುವ ಪಿ.ಎಂ ಅಬ್ದುಲ್ ಲತೀಫ್ ಶುಂಠಿಕೊಪ್ಪರವರು ತನ್ನ ಬೆಲೆಬಾಳುವ ಒಂದು ಎಕರೆ ಸ್ಥಳವನ್ನು ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ರವರಿಗೆ ಹಸ್ತಾಂತರಿಸಿದರು.

ಕೊಡಗಿನ ಸಂತ್ರಸ್ತ ಜನತೆಗೆ ಜಾತಿ,ಧರ್ಮ ಬೇಧ ಭಾವವಿಲ್ಲದೆ ಎಸ್ಸೆಸ್ಸಫ್, ಎಸ್ ವೈ ಎಸ್ ಹಾಗೂ ಕೆಸಿಎಫ್ ಸಂಘಟನೆಗಳು ಜಂಟಿಯಾಗಿ ಸರ್ಕಾರದ ಸಹಭಾಗಿತ್ವದಲ್ಲಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ಯೋಜನೆಯನ್ನು ಕೈಗೊಂಡಿದೆ.

ಈ ಸಂದರ್ಭದಲ್ಲಿ ವಸತಿ ಸಚಿವ ಯು.ಟಿ ಖಾದರ್, ಸಿ.ಎಂ ಇಬ್ರಾಹಿಂ ತನ್ವೀರ್ ಹಾಶಿಂ, ಮಾಜಿ ಸಚಿವ ರೋಶನ್ ಬೇಗ್, ಮಾಜಿ ಎಂ ಎಲ್ ಸಿ ಸತ್ತಾರ್ ಸೇಠ್, ಕರ್ನಾಟಕ ವಕ್ಫ್ ಬೋರ್ಡ್ ಮಾಜಿ ಸದಸ್ಯ ಮೌಲಾನ ಎನ್.ಕೆ.ಎಂ ಶಾಫಿ ಸ ಅದಿ ಬೆಂಗಳೂರು, ಎಸ್ಸೆಸ್ಸಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಸಹಿತ ಹಲವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ