ಸೋಮವಾರಪೇಟೆ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಇದರ 30 ನೇ ಸ್ಥಾಪನಾ ದಿನದ ನೆನಪಿಗಾಗಿ ಇಂದು ರಾಜ್ಯದೆಲ್ಲಡೆ ಧ್ವಜ ದಿನವನ್ನು ಆಚರಿಸಲಾಯ್ತು. ಸೋಮವಾರಪೇಟೆ ಕರ್ಕಳ್ಳಿ ಶಾಖೆಯಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಎಸ್ಸೆಸ್ಸೆಫ್ ಜಿಲ್ಲಾ ನಾಯಕ ಅಝೀಝ್ ಸಖಾಫಿ “ಯುವತ್ವ ಹಸನಾಗಬೇಕಾದರೆ ಧಾರ್ಮಿಕತೆ ಅನಿವಾರ್ಯ,ಉಗ್ರ ವಾದ, ಕೋಮುವಾದ, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಕರು ಮುಂದಾದರೆ ಮಾತ್ರ ಸಾಧ್ಯ ಎಂದರು.
ದಾರಿ ತಪ್ಪುತ್ತಿರುವ ನ್ಯೂಜನರೇಷನ್ ಯುಗದಲ್ಲಿ ಯುವ ಸಮೂಹಕ್ಕೆ ಮಾದರಿಯಾಗಿದೆ ಎಸ್ಸೆಸ್ಸೆಫ್, ಸಂಘಟನೆಯ ಮೂರು ದಶಕಗಳ ಯಾತ್ರೆಯಲ್ಲಿ ಕೊಲ್ಲಿರಾಷ್ಟ್ರಗಳನ್ನು ಸೇರಿ ಭಾರತದಾದ್ಯಂತ ಲಕ್ಷಗಟ್ಟಲೆ ಯುವಜನತೆಯನ್ನು ಒಳಿತೆನೆಡೆಗೆ ಕೊಂಡೊಯ್ಯಲು ಈ ಸಂಘಟನೆಗೆ ಸಾಧ್ಯವಾಗಿದೆ”ಎಂದು ಅಝೀಝ್ ಸಖಾಫಿ ಹೇಳಿದರು.
ಕಾರ್ಯಕ್ರಮದಲ್ಲಿ ಅಲಿ ಸಖಾಫಿ, ಅಬ್ಬಾಸ್ ಕರ್ಕಳ್ಳಿ ಖಾದರ್ ಕರ್ಕಳ್ಳಿ, ಸ್ವಾದಿಕ್ ಕರ್ಕಳ್ಳಿ ಮುಂತಾದ ನಾಯಕರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕೊನೆಯಲ್ಲಿ ಮುಹಮ್ಮದ್ ತಫ್ಸೀರ್ ವಂದಿಸಿದರು















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ