ದುಬೈ: ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ವತಿಯಿಂದ ಇದೇ ಬರುವ ದಿನಾಂಕ 28 ರಂದು ಸಂಜೆ 6 ಗಂಟೆಗೆ ಸರಿಯಾಗಿ ದುಬೈ ಸ್ಟೇಡಿಯಂ ಮೆಟ್ರೋ ಸ್ಟೇಷನ್ ಹತ್ತಿರದ ಕ್ರೆಸೆಂಟ್ ಸ್ಕೂಲ್ ಸಭಾಂಗಣದಲ್ಲಿ ಜಲಾಲಿಯ್ಯಾ ಮಜ್ಲಿಸ್ ನಡೆಯಲಿದ್ದು ಪ್ರಸ್ತುತ ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಸುನ್ನೀ ಜಂಇಯ್ಯತ್ತುಲ್ ಉಲಮಾ ಕೇಂದ್ರ ಸಮಿತಿ ಸದಸ್ಯರು ಜಾಮಿಯಾ ಸಅದಿಯ್ಯಾ ಅರಬಿಯ್ಯಾ ಇದರ ಅಧ್ಯಕ್ಷರು ಡಿ ಕೆ ಎಸ್ ಸಿ ಇದರ ಸಾರಥಿಯೂ ಸುನ್ನೀ ಕುಟುಂಬದ ಆಧ್ಯಾತ್ಮಿಕ ನೇತಾರರು ಆದ ಸಯ್ಯಿದ್ ಕೆ.ಎಸ್ ಆಟಕೋಯ ತಂಗಳ್ ಕುಂಬೋಳ್ ನೇತೃತ್ವದ ವಹಿಸಲಿದ್ದು,
ಭಾಷಣ ಲೋಕದ ಇತಿಹಾಸ ಪ್ರವಾದಿ ಪ್ರೇಮಿಗಳಿಗೆ ಪ್ರವಾದಿ ಪ್ರೇಮದ ರಸದೌತಣ ನೀಡಿ ಜನ ಮನಸ್ಸುಗಳನ್ನು ಮದೀನಾದ ಕಡೆ ಕೊಂಡೊಯ್ಯುವ ಭಾಷಣಗಾರ ಕೇರಳ ರಾಜ್ಯ ಸುನ್ನೀ ಸ್ಟುಡೆಂಟ್ ಫೆಡರೇಶನ್ ಇದರ ರಾಜ್ಯಾಧ್ಯಕ್ಷರು ಆಗಿರುವ ಬಹು ಮುಹಮ್ಮದ್ ಫಾರೂಕ್ ನಈಮಿ ಕೊಲ್ಲಂ ಮುಖ್ಯ ಭಾಷಣ ಮಾಡಲಿದ್ದಾರೆ
ಸಯ್ಯಿದ್ ಹಾಮಿದ್ ಕೋಯಮ್ಮ ತಂಗಳ್ ಪಾಪಿನಿಶ್ಶೇರಿ , ಸಯ್ಯಿದ್ ತ್ವಾಹ ಭಾಫ಼ಖಿ ತಂಘಲ್ ಸೇರಿದಂತೆ ಹಲವಾರು ಧಾರ್ಮಿಕ ನಾಯಕರು ಭಾಗವಹಿಸಲಿದ್ದಾರೆ
ಯು.ಎ.ಇ ಯಲ್ಲಿ ನೆಲೆಸಿರುವ ಎಲ್ಲಾ ಅನಿವಾಸಿ ಕರ್ನಾಟಕ ಮುಸ್ಲಿಂ ಸಹೋದರರು ಭಾಗವಹಿಸಿ ಯಶಸ್ವಿಗೊಳಿಸಿ ಕೊಡಬೇಕಾಗಿ ಕರ್ನಾಟಕ ಕಲ್ಚರಲ್ ಫೌಂಡೇಶನ್ ಯುಎಇ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಿಲ ಹಾಗು ಪ್ರಧಾನ ಕಾರ್ಯದರ್ಶಿ ಇಖ್ಬಾಲ್ ಕಾಜೂರು ಜಂಟಿ ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ