ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ಆಶ್ರಯದಲ್ಲಿ ಶಾಖಾ ನಾಯಕರ ಶಿಬಿರ *ಎನ್’ಲೇಝ್* ಸುಳ್ಯ ಸೆಕ್ಟರ್ ಸಮಿತಿ ಅಧ್ಯಕ್ಷರಾದ ಜುನೈದ್ ಸಖಾಫಿ ಜೀರ್ಮುಕ್ಕಿ ಅಧ್ಯಕ್ಷತೆಯಲ್ಲಿ ಸೆಪ್ಟಂಬರ್ 30ರಂದು ಏಣಾವರ ತಾಜುಲ್ ಉಲಮಾ ವೇದಿಕೆಯಲ್ಲಿ ಜರಗಿತು.
ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಕಾರ್ಯಕ್ರಮ ಉದ್ಘಾಟಿಸಿದರು. ಸ್ಥಳೀಯ ಇಮಾಮರಾದ ಶಾಫಿ ಮಿಸ್ಬಾಹಿ ದುಆ ನೆರವೇರಿಸಿದರು. ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ ರಹ್ಮಾನ್ ಮೊಗರ್ಪಣೆ ಶುಭ ಹಾರೈಸಿದರು. ಎಸ್ಸೆಸ್ಸೆಫ್ ರಾಜ್ಯ ಸಮಿತಿ ಕಾರ್ಯದರ್ಶಿ, ಕಾವಲ್ಕಟ್ಟೆ ಅಲ್ ಖಾದಿಸ ಪ್ರಿನ್ಸಿಪಾಲ್ ಮೌಲಾನಾ ಹಾಫಿಝ್ ಸುಫ್ಯಾನ್ ಸಖಾಫಿ ಸಂಘಟನಾ ತರಬೇತಿ ನೀಡಿದರು.

ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಉಸ್ತುವಾರಿ ಹಸೈನಾರ್ ನೆಕ್ಕಿಲ, ಎಸ್.ವೈ.ಎಸ್ ಸುಳ್ಯ ಬ್ರಾಂಚ್ ಕೋಶಾಧಿಕಾರಿ ಸಿದ್ದೀಕ್ ಕಟ್ಟೆಕಾರ್, ಎಸ್.ವೈ.ಎಸ್ ಏಣಾವರ ಬ್ರಾಂಚ್ ಅಧ್ಯಕ್ಷರಾದ ಇಬ್ರಾಹೀಂ ಹಾಜಿ ಏಣಾವರ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಉಪಾಧ್ಯಕ್ಷರಾದ ಅಬ್ದುಲ್ಲ ಝುಹ್ರಿ ಮೊಗರ್ಪಣೆ, ಎಸ್ಸೆಸ್ಸೆಫ್ ಏಣಾವರ ಶಾಖಾಧ್ಯಕ್ಷರಾದ ಸಿರಾಜ್ ಏಣಾವರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಸೆಕ್ಟರ್ ಅಧೀನದ ಹತ್ತು ಯುನಿಟ್’ಗಳ ಸೆಕ್ರಟೇರಿಯೇಟ್ ನಾಯಕರು ಪ್ರತಿನಿಧಿಗಳಾಗಿ ಭಾಗವಹಿಸಿದರು.
ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಪ್ರ.ಕಾರ್ಯದರ್ಶಿ ಸಿದ್ದೀಕ್ ಗೂನಡ್ಕ ಸ್ವಾಗತಿಸಿ, ಕಾರ್ಯದರ್ಶಿ ಶಫೀಖ್ ಕೊಯಂಗಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ