ಶಾರ್ಜಾ: ಕೆ.ಸಿ.ಎಫ್ ಶಾರ್ಜಾ ಝೋನ್ ವತಿಯಿಂದ, ತಿಂಗಳಿಗೊಮ್ಮೆ ನಡೆಸಿಕೊಂಡು ಬರುತ್ತಿರುವ ಮಹ್ಳರತುಲ್ ಬದ್ರಿಯ್ಯಾ ಮಜ್ಲಿಸ್ ಇದರ ಎರಡನೇ ವಾರ್ಷಿಕ , ಸೆಪ್ಟೆಂಬರ್ 27 ರಂದು ಗುರುವಾರ ರಾತ್ರಿ ಅಲ್ ಖಾನ್ ಅಲ್ ಯಾಸತ್ ಟವರ್ ನಲ್ಲಿ ಬಹು ಅಬ್ದುಲ್ ಅಝೀಝ್ ಸಖಾಫಿ ಕೋಂಡಗೇರಿಯವರ ನೇತ್ರತ್ವದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು.
ಅಸ್ಸಯ್ಯಿದ್ ಇಂಬಿಚ್ಚಿ ಕೋಯ ತಂಙಳ್ ರವರು ಮುಖ್ಯ ಪ್ರಭಾಷಣ ನಡೆಸಿದರು.ಕೆ.ಸಿ.ಎಫ್ ಶಾರ್ಜಾ ಝೋನ್ ಸಂಘಟನೆ ವಿಭಾಗದ ಅಧ್ಯಕ್ಷರಾದ ಬಹು. ಇಬ್ರಾಹಿಂ ಸಖಾಫಿ ಕೆದುಂಬಾಡಿಯವರು ಸ್ವಾಗತ ಭಾಷಣ ನಡೆಸಿದರು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕೆ.ಸಿ.ಎಫ್ ಶಾರ್ಜಾ ಝೋನ್ ಅಧ್ಯಕ್ಷರಾದ ಬಹು. ಅಬೂಸ್ವಾಲಿಹ್ ಸಖಾಫಿ ಇನೋಳಿಯವರು ಅಲಂಕರಿಸಿದರು.
ಕಾರ್ಯಕ್ರಮದಲ್ಲಿ ಅಸ್ಸಯ್ಯಿದ್ ಹಸನ್ ಅಟೋಕ್ಕೋಯ ತಂಙಲ್ ಆದೂರು, ಕೆ.ಸಿ.ಎಫ್ ಯು.ಎ.ಇ ಅಧ್ಯಕ್ಷರಾದ ಬಹು. ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಳ , ಕೆ.ಸಿ.ಎಫ್ ಶಾರ್ಜ ಝೋನ್ ಕಾರ್ಯದರ್ಶಿ ರಜಬ್ ಮಹಮ್ಮದ್ ಉಚ್ಚಿಲ, ಶಿಕ್ಷಣ ವಿಭಾಗದ ಅಧ್ಯಕ್ಷ ಅಬ್ದುಲ್ ರಶೀದ್ ಮದನಿ ಸಂಪ್ಯಾ, ಕಾರ್ಯದರ್ಶಿ ಅಬ್ದುಲ್ ರಝಾಕ್ ಮುಸ್ಲಿಯಾರ್ ಮತ್ತು ಕೆ.ಸಿ.ಎಫ್ ಯ.ಎ.ಇ ರಾಷ್ಟ್ರೀಯ ನಾಯಕರು ಹಾಜರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ