ಬುರೈದ : ಸುಮಾರು 2 ವರ್ಷಗಳ ಹಿಂದೆ ಮಂಗಳೂರು ವಿಟ್ಲ ಸಮೀಪದ ಉರಿಮಜಲು ನಿವಾಸಿ ಶಾಹುಲ್ ಹಮೀದ್ ಎಂಬ ವ್ಯಕಿಯು ಸೌದಿ ಅರೇಬಿಯಾದ ಬುರೈದದಲ್ಲಿ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ್ದರು. ಆ ಸಮಯದಲ್ಲಿ ಮೃತರ ಮರಣಾನಂತರ ಎಲ್ಲಾ ಪ್ರಕ್ರಯಿಯನ್ನು ಕೆ.ಸಿ.ಎಫ್ ಬುರೈದ ಸೆಕ್ಟರ್ ನೇತೃತ್ವದಲ್ಲಿ ನೆರವೇರಿಸಿತು.

ಅಪಘಾತವು ಸಂಬಂಧಪಟ್ಟ ಇಲಾಖೆಯಲ್ಲಿ ಕೇಸು ದಾಖಲಾಗಿತ್ತು ಈ ಕೇಸನ್ನು ಮೃತರ ಪರವಾಗಿ ವಕಾಲಾತ್ತು ವಹಿಸಿ ಅದಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ಕ್ಲಪ್ತ ಸಮಯದಲ್ಲಿ ಸಂಗ್ರಹಿಸಿ ಬುರೈದ ಕೆ.ಸಿ.ಎಫ್. ಇಲಾಖೆಗೆ ಒದಗಿಸಿತು. ನಂತರ ಈ ಕೇಸ್ ಕೋರ್ಟ್ ಮೆಟ್ಟಲೇರಿತು. ಕೋರ್ಟಿನಲ್ಲಿ ಈ ಭಾಗದ ಉದ್ಯಮಿ ಮತ್ತು ಸಮಾಜ ಸೇವಕ ಅಬ್ದುಲ್ ಲತೀಫ್ ಶೇರಿ ಮತ್ತು ಕೆ.ಸಿ.ಎಫ್. ಬುರೈದ ಸೆಕ್ಟರ್ ರಿಲೀಫ್ ಚಯರ್ ಮ್ಯಾನ್ ತಾಜುದ್ದೀನ್ ಕೆಮ್ಮಾರ ಸತತ 2 ವರ್ಷಗಳ ಕಾನೂನು ಹೋರಾಟವನ್ನು ನಡೆಸಿ ಕೊನೆಗೆ ಮೊದಲನೇ ಹಂತದ ಪರಿಹಾರವಾಗಿ 50 ಸಾವಿರ ಸೌದಿ ರಿಯಾಲ್ (9,60,746 INR) ಒದಗಿಸಲು ಸಾಧ್ಯವಾಯಿತು. ಈ ಪರಿಹಾರ ಮೊತ್ತವನ್ನು ಮೃತರ ಕುಟುಂಬ ಸದಸ್ಯರು, ರಿಯಾದ್ ನಲ್ಲಿ ಉದ್ಯೋಗದಲ್ಲಿರುವ ನಿಸಾರ್ ಅವರಿಗೆ ಬುರೈದ ಕೆ.ಸಿ.ಎಫ್ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಈ ಪರಿಹಾರ ಒದಗಿಸಲು ಕೆ.ಸಿ.ಎಫ್ ರಾಷ್ಟ್ರೀಯ ನಾಯಕರ ಮಾರ್ಗದರ್ಶನದಂತೆ ಸತತ 2 ವರ್ಷಗಳ ನಿರಂತರವಾಗಿ ಕಾನೂನು ಹೋರಾಟ ನಡೆಸಿದ ಸಮಾಜಸೇವಕ ಅಬ್ದುಲ್ ಲತೀಫ್ ಶೇರಿ ಮತ್ತು ತಾಜುದ್ದೀನ್ ಕೆಮ್ಮಾರ ಅವರನ್ನು KCF ಗೌರವಿಸಿತು.















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ: ವಾಹನಕ್ಕೆ ಆಕಸ್ಮಿಕ ಬೆಂಕಿ – ಯುವಕನಿಗೆ ದಾರುಣ ಅಂತ್ಯ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು