ಈಶ್ವರಮಂಗಲ (ಜನಧ್ವನಿ ವಾರ್ತೆ): ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ಆಯೋಜಿಸಿರುವ ಯೌವ್ವನ ಮರೆಯಾಗುವ ಮುನ್ನ ಎಂಬ ಧ್ಯೇಯ ವಾಕ್ಯ ದೊಂದಿಗೆ ಸರ್ವ ಶಾಖೆಗಳಲ್ಲಿ ನಡೆಸಿಕೊಂಡು ಬರುತ್ತಿರುವ ಯುನಿಟ್ ಸಮ್ಮೇಳನ ಈಶ್ವರಮಂಗಲದ ಪಾಳ್ಯತ್ತಡ್ಕ ಶಾಖೆಯ ವತಿಯಿಂದ ತ್ವೈಬ ಸೆಂಟರ್ ನಲ್ಲಿ ಅಕ್ಟೋಬರ್ 21 ಆದಿತ್ಯವಾರ ದಂದು ನಡೆಸಲಾಯಿತು.

ಹಿರಿಯ ವಿದ್ವಾಂಸರಾದ ಹಂಝ ಮುಸ್ಲಿಯಾರ್ ಈಶ್ವರಮಂಗಲ ಇವರ ನೇತ್ರತ್ವದಲ್ಲಿ ಮಹ್ಲರತ್ತುಲ್ ಬದ್ರಿಯಾ ಮಜ್ಲಿಸ್ ಗೆ ನಡೆಯಿತು.
SSF ಪಾಳ್ಯತ್ತಡ್ಕ ಶಾಖೆಯ ಕಾರ್ಯದರ್ಶಿ ಸಲ್ಮಾನ್ ಬಿ.ಸಿ ಯವರು ಸ್ವಾಗತ ಕೋರಿದ ಸಮ್ಮೇಳನದ ಅಧ್ಯಕ್ಷತೆಯನ್ನು ಶಾಖೆಯ ಅಧ್ಯಕ್ಷರಾದ ಹುಸೈನ್ ಜೌಹರಿ ಉಸ್ತಾದರು ಅಲಂಕರಿಸಿದರು. ತ್ವೈಬ ಮುದರ್ರಿಸರಾದ ದಾವೂದುಲ್ ಹಕೀಂ ಹಿಮಮಿ ಸಖಾಫಿ ಉದ್ಘಾಟನಾ ಭಾಷಣ ಮಾಡಿದರು.

ಮುಖ್ಯ ಪ್ರಭಾಷಣಗಾರರಾಗಿ ಆಗಮಿಸಿದ ಅಬೂಬಕರ್ ಫೈಝಿ ಕುಂಬ್ಡಾಜೆ ಉಸ್ತಾದರು ಸಂಘಟನೆಯ ಮಹತ್ವವನ್ನು ಸವಿಸ್ತಾರವಾಗಿ ವಿವರಿಸಿದರು. ಪಾಲಡ್ಕ ಖತೀಬರಾದ ಹಾಶಿರ್ ಸಖಾಫಿ, ಮುಹಮ್ಮದ್ ಮದನಿ ಪಾಳ್ಯತ್ತಡ್ಕ ಇವರು ಕಾರ್ಯಕ್ರಮಕ್ಕೆ ಆಸಂಶ ಪ್ರಭಾಷಣ ನಡೆಸಿದರು.
SYS ಈಶ್ವರಮಂಗಲ ಸೆಂಟರ್ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಮಿಸ್ಬಾಹಿ, SSF ಈಶ್ವರಮಂಗಲ ಸೆಕ್ಟರ್ ಅಧ್ಯಕ್ಷ ರವೂಫ್ ಮಾಡನ್ನೂರು, SSF ಈಶ್ವರಮಂಗಲ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಶಾಫಿ ಮೇನಾಲ, SSF ಈಶ್ವರಮಂಗಲ ಸೆಕ್ಟರ್ ಉಪಾಧ್ಯಕ್ಷರಾದ ಸಂಶುದ್ದೀನ್ ಹನೀಫಿ, SYS ಪಾಳ್ಯತ್ತಡ್ಕ ಬ್ರಾಂಚ್ ಅಧ್ಯಕ್ಷರಾದ ಲತೀಫ್ ಮುಸ್ಲಿಯಾರ್ ಮೀನಾವು, SYS ಪಾಳ್ಯತ್ತಡ್ಕ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝಾಕ್ ಖಾಸಿಮಿ ಹಾಗೂ ಊರಿನ ಇತರ ಹಲವಾರು ಗಣ್ಯರು ಉಪಸ್ಥಿತರಿದ್ದರು. ಉಮರ್ ಸಅದಿ ಪಾಳ್ಯತ್ತಡ್ಕ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ